ಸುದ್ದಿಗಳು

ರಾಘವೇಶ್ವರ ಶ್ರೀಗಳ ತೇಜೋವಧೆಗೆ ನಕಲಿ ಅಶ್ಲೀಲ ಸಿಡಿ ಪ್ರಕರಣ : ಐದು ಮಂದಿಗೆ ಜಾಮೀನು ರಹಿತ ವಾರೆಂಟ್

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬೆಂಗಳೂರು: ನಕಲಿ ಅಶ್ಲೀಲ ಸಿಡಿ ತಯಾರಿಸಿ ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮೀಜಿಯವರ ತೇಜೋವಧೆಗೆ ಯತ್ನಿಸಿದ್ದ ಪ್ರಕರಣದ ವಿಚಾರಣೆ ನಡೆಸುತ್ತಿರುವ ಕುಮಟಾ ಜೆಎಂಎಫ್‍ಸಿ ನ್ಯಾಯಾಲಯ ಐವರು ಆರೋಪಿಗಳಿಗೆ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿ ಆದೇಶ ಹೊರಡಿಸಿದೆ.

Advertisement
Advertisement

ಶ್ರೀಗಳ ತೇಜೋವಧೆ ಮಾಡುವ ಉದ್ದೇಶದಿಂದ 2010 ರಲ್ಲಿ  ನಕಲಿ ಅಶ್ಲೀಲ ಸಿಡಿ ತಯಾರಿಸಿ  ಸ್ವಾಮೀಜಿಯವರ ತೇಜೋವಧೆ ಯತ್ನ ನಡೆದಿತ್ತು. ಶ್ರೀಗಳನ್ನು ಹೋಲುವ ವ್ಯಕ್ತಿಯನ್ನು ಬಳಸಿ ಶ್ರೀಗಳ ಹಾವಭಾವಗಳನ್ನು ಆತನಿಗೆ ಕಲಿಸಿ ಚಿತ್ರಿಸಲಾಗಿತ್ತು. ಹಾಲಿವುಡ್ ತಂತ್ರಜ್ಞಾನ ಬಳಸಿ ಶ್ರೀಗಳ ಚಿತ್ರಗಳನ್ನು ಅಶ್ಲೀಲ ವಿಡಿಯೊಗಳ ಜತೆ ಸೇರಿಸಿ ಅದನ್ನು ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡಿ ಶ್ರೀರಾಮಚಂದ್ರಾಪುರ ಮಠದ ಶ್ರೀಗಳ ಕೀರ್ತಿಗೆ ಮಸಿ ಬಳಿಯುವ ಕೃತ್ಯ ಎಸಗಲಾಗಿತ್ತು.

ಈ ಷಡ್ಯಂತ್ರ ಬಗ್ಗೆ ಮಾಹಿತಿ ದೊರಕಿದ ಹಿನ್ನೆಲೆಯಲ್ಲಿ ಗೋಪಾಲ್ ಹೊಸೂರ್ ನೇತೃತ್ವದ ಪೊಲೀಸರು ದಾಳಿ ನಡೆಸಿದಾಗ ಆರೋಪಿಗಳು ರೆಡ್‍ಹ್ಯಾಂಡ್ ಆಗಿ ಸಿಕ್ಕಿಹಾಕಿಕೊಂಡಿದ್ದರು.
ವಿಚಾರಣೆ ನಡೆಸಿದ ಪೊಲೀಸರು ಆರೋಪಿಗಳ ವಿರುದ್ಧ ಆರೋಪಪಟ್ಟಿ ಸಲ್ಲಿಸಿದ್ದು, ಕುಮಟಾ ಜೆಎಂಎಫ್‍ಸಿ ನ್ಯಾಯಾಲಯದಲ್ಲಿ ಆರೋಪ ದೃಢಪಡಿಸುವ (ಚಾರ್ಜ್ ಫ್ರೇಮಿಂಗ್) ಪ್ರಕ್ರಿಯೆ ನಡೆದಿದೆ.

ಕಲಾಪಕ್ಕೆ ಹಾಜರಾಗದ ಬಾಲಚಂದ್ರ ಪ್ರಭಾಕರ ಕುಡ್ಲೇಕರ, ಗಜಾನನ ಶಾಂಬಾ ಉಪಾಧ್ಯಾಯ ಅಲಿಯಾಸ್ ದೀಕ್ಷಿತ, ಶಿವರಾಮ ವಿನಾಯಕ ಅಡಿ, ವಿಶ್ವನಾಥ್ ಅಲಿಯಾಸ್ ವಿಶು ಫಣಿರಾಮ ಗೋಪಿಭಟ್ಟ, ರಾಜು ಅಲಿಯಾಸ್ ರಾಜಗೋಪಾಲ ಮಹಾದೇವ ಅಡಿ ವಿರುದ್ಧ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಹೊರಡಿಸಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯಾದ್ಯಂತ ಭಾರೀ ಮಳೆ  ಹಿನ್ನೆಲೆ | ಜಿಲ್ಲಾ ಸಚಿವರು,ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಆದೇಶ

ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…

5 hours ago

ಇಂದು ದೇಶಾದ್ಯಂತ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…

5 hours ago

14 ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ

ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ದೊರಕಿಸುವ ನಿಟ್ಟಿನಲ್ಲಿ ಭತ್ತ, ಜೋಳ, ರಾಗಿ…

6 hours ago

ಭ್ರಷ್ಟಾಚಾರ  ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ – ಉಪಲೋಕಾಯುಕ್ತ ಬಿ. ವೀರಪ್ಪ

ಭ್ರಷ್ಟಾಚಾರ  ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ ಎಂದು ನ್ಯಾಯಮೂರ್ತಿ ಹಾಗೂ  ಉಪಲೋಕಾಯುಕ್ತ ಬಿ.…

6 hours ago

ಇದೆಲ್ಲಾ ಹೇಗಾಗ್ತದೆ? ಇದು ನಮ್ಗೆಲ್ಲಿ ಗೊತ್ತಾಗ್ತದೆ!?

ಪಂಚಾಯತು ವಿಧಿಸುವ ವಿವಿಧ ಕರಗಳ ಬಗ್ಗೆ ನಿಮಗೆ ಅರಿವಿದೆಯೆ? ನಿಮ್ಮ ಪಂಚಾಯತುಗಳಿಗೆ ಸರಕಾರದಿಂದ…

6 hours ago