Advertisement
ಸುದ್ದಿಗಳು

ರಾಘವೇಶ್ವರ ಶ್ರೀಗಳ ತೇಜೋವಧೆಗೆ ನಕಲಿ ಅಶ್ಲೀಲ ಸಿಡಿ ಪ್ರಕರಣ : ಐದು ಮಂದಿಗೆ ಜಾಮೀನು ರಹಿತ ವಾರೆಂಟ್

Share

ಬೆಂಗಳೂರು: ನಕಲಿ ಅಶ್ಲೀಲ ಸಿಡಿ ತಯಾರಿಸಿ ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮೀಜಿಯವರ ತೇಜೋವಧೆಗೆ ಯತ್ನಿಸಿದ್ದ ಪ್ರಕರಣದ ವಿಚಾರಣೆ ನಡೆಸುತ್ತಿರುವ ಕುಮಟಾ ಜೆಎಂಎಫ್‍ಸಿ ನ್ಯಾಯಾಲಯ ಐವರು ಆರೋಪಿಗಳಿಗೆ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿ ಆದೇಶ ಹೊರಡಿಸಿದೆ.

ಶ್ರೀಗಳ ತೇಜೋವಧೆ ಮಾಡುವ ಉದ್ದೇಶದಿಂದ 2010 ರಲ್ಲಿ  ನಕಲಿ ಅಶ್ಲೀಲ ಸಿಡಿ ತಯಾರಿಸಿ  ಸ್ವಾಮೀಜಿಯವರ ತೇಜೋವಧೆ ಯತ್ನ ನಡೆದಿತ್ತು. ಶ್ರೀಗಳನ್ನು ಹೋಲುವ ವ್ಯಕ್ತಿಯನ್ನು ಬಳಸಿ ಶ್ರೀಗಳ ಹಾವಭಾವಗಳನ್ನು ಆತನಿಗೆ ಕಲಿಸಿ ಚಿತ್ರಿಸಲಾಗಿತ್ತು. ಹಾಲಿವುಡ್ ತಂತ್ರಜ್ಞಾನ ಬಳಸಿ ಶ್ರೀಗಳ ಚಿತ್ರಗಳನ್ನು ಅಶ್ಲೀಲ ವಿಡಿಯೊಗಳ ಜತೆ ಸೇರಿಸಿ ಅದನ್ನು ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡಿ ಶ್ರೀರಾಮಚಂದ್ರಾಪುರ ಮಠದ ಶ್ರೀಗಳ ಕೀರ್ತಿಗೆ ಮಸಿ ಬಳಿಯುವ ಕೃತ್ಯ ಎಸಗಲಾಗಿತ್ತು.

ಈ ಷಡ್ಯಂತ್ರ ಬಗ್ಗೆ ಮಾಹಿತಿ ದೊರಕಿದ ಹಿನ್ನೆಲೆಯಲ್ಲಿ ಗೋಪಾಲ್ ಹೊಸೂರ್ ನೇತೃತ್ವದ ಪೊಲೀಸರು ದಾಳಿ ನಡೆಸಿದಾಗ ಆರೋಪಿಗಳು ರೆಡ್‍ಹ್ಯಾಂಡ್ ಆಗಿ ಸಿಕ್ಕಿಹಾಕಿಕೊಂಡಿದ್ದರು.
ವಿಚಾರಣೆ ನಡೆಸಿದ ಪೊಲೀಸರು ಆರೋಪಿಗಳ ವಿರುದ್ಧ ಆರೋಪಪಟ್ಟಿ ಸಲ್ಲಿಸಿದ್ದು, ಕುಮಟಾ ಜೆಎಂಎಫ್‍ಸಿ ನ್ಯಾಯಾಲಯದಲ್ಲಿ ಆರೋಪ ದೃಢಪಡಿಸುವ (ಚಾರ್ಜ್ ಫ್ರೇಮಿಂಗ್) ಪ್ರಕ್ರಿಯೆ ನಡೆದಿದೆ.

ಕಲಾಪಕ್ಕೆ ಹಾಜರಾಗದ ಬಾಲಚಂದ್ರ ಪ್ರಭಾಕರ ಕುಡ್ಲೇಕರ, ಗಜಾನನ ಶಾಂಬಾ ಉಪಾಧ್ಯಾಯ ಅಲಿಯಾಸ್ ದೀಕ್ಷಿತ, ಶಿವರಾಮ ವಿನಾಯಕ ಅಡಿ, ವಿಶ್ವನಾಥ್ ಅಲಿಯಾಸ್ ವಿಶು ಫಣಿರಾಮ ಗೋಪಿಭಟ್ಟ, ರಾಜು ಅಲಿಯಾಸ್ ರಾಜಗೋಪಾಲ ಮಹಾದೇವ ಅಡಿ ವಿರುದ್ಧ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಹೊರಡಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…

2 hours ago

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

11 hours ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

12 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

13 hours ago