Advertisement
ಸುದ್ದಿಗಳು

ರಾಜಕೀಯ ಒತ್ತಡದಿಂದ ತಹಶೀಲ್ದಾರ್ ವರ್ಗಾವಣೆ ?

Share

ಸುಳ್ಯ: ಸುಳ್ಯದಲ್ಲಿ ಪ್ರಾಮಾಣಿಕ ಮತ್ತು ಜನಪರ ಅಧಿಕಾರಿ ಎಂದು ಹೆಸರು ಗಳಿಸಿದ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಅವರ ವರ್ಗಾವಣೆ ಹಿಂದೆ ರಾಜಕೀಯ ಒತ್ತಡ ಕೆಲಸ ಮಾಡಿದೆಯೇ ಎಂಬ ಗುಮಾನಿ ಹಬ್ಬಿದೆ.

ಅಧಿಕಾರಿಗಳು ಕನಿಷ್ಟ ಮೂರು ವರ್ಷಗಳ ಕಾಲ ಸೇವೆ ಸಲ್ಲಿಸುವುದು ಸಾಮಾನ್ಯವಾದರೂ ಕುಂಞಿ ಅಹಮ್ಮದ್ ಅವರನ್ನು ಒಂದು ವರ್ಷ ಆಗುವ ಮುನ್ನ ಎರಡು ಬಾರಿ ವರ್ಗಾವಣೆ ಮಾಡಿಸುವುದರ ಹಿಂದೆ ಕಾಣದ ಕೈಗಳು ಕೆಲಸ ಮಾಡಿದೆ ಎಂಬ ಗುಸು ಗುಸು ಸಾರ್ವಜನಿಕ ವಲಯದಲ್ಲಿ ಎದ್ದಿದೆ. ಹಲವಾರು ಸಮಸ್ಯೆಗಳಿಂದ ಬಳಲಿರುವ ಸುಳ್ಯದಲ್ಲಿ ಪದೇ ಪದೇ ತಹಶೀಲ್ದಾರ್ ಬದಲಿಸಿ ಅತಂತ್ರ ಪರಿಸ್ಥಿತಿ ನಿರ್ಮಾಣ ಮಾಡುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ತಹಶೀಲ್ದಾರ್ ವರ್ಗಾವಣೆಯ ಬಗ್ಗೆ ಹಲವು ವಿಧದ ಚರ್ಚೆಗಳು ಆರಂಭವಾಗಿದೆ.

ಕಳೆದ ಫೆಬ್ರುವರಿ ತಿಂಗಳಲ್ಲಿ ಸುಳ್ಯ ತಹಶೀಲ್ದಾರ್ ಆಗಿ ಅಧಿಕಾರ ವಹಿಸಿಕೊಂಡ ಕುಂಞಿ ಅಹಮ್ಮದ್ ರಿಗೆ ಕೇವಲ ಐದು ತಿಂಗಳಲ್ಲಿ ಕಳೆದ ಜುಲೈ ತಿಂಗಳಲ್ಲಿ ಇವರಿಗೆ ಒಮ್ಮೆ ವರ್ಗಾವಣೆ ಆದೇಶ ಬಂದಿತ್ತು. ಇದಕ್ಕೆ ಸಾರ್ವಜನಿಕರಿಂದ ಭಾರೀ ವಿರೋಧ ವ್ಯಕ್ತವಾಗಿತ್ತು. ಬಳಿಕ ಸರಕಾರ ಬದಲಾದ ಕಾರಣ ಇವರ ವರ್ಗಾವಣೆ ಆದೇಶಕ್ಕೆ ತಡೆ ಬಿದ್ದಿತ್ತು. ಇದೀಗ 5 ತಿಂಗಳ ಬಳಿಕ ಮತ್ತೆ ವರ್ಗಾವಣೆ ಆಗಿದೆ ಎಂಬ ಮಾಹಿತಿ ಬಂದಿದೆ.

ರೈತ ಸಂಘ ಖಂಡನೆ: ತಹಶೀಲ್ದಾರ್ ವರ್ಗಾವಣೆಗೆ ಕರ್ನಾಟಕ ರೈತ ಸಂಘ ಖಂಡಿಸಿದೆ. ಜನರ ಪರವಾಗಿ ಕೆಲಸ ಮಾಡುವ ಅಧಿಕಾರಿಗಳನ್ನು ವರ್ಗಾವಣೆ ಮಾಡದಂತೆ ಸರಕಾರಕ್ಕೆ ಮನವಿ ಸಲ್ಲಿಸುವುದಾಗಿ ತಾಲೂಕು ರೈತ ಸಂಘದ ಅಧ್ಯಕ್ಷ ಲೋಲಜಾಕ್ಷ ಭೂತಕಲ್ಲು, ಕಾರ್ಯದರ್ಶಿ ತೀರ್ಥರಾಮ ನೆಡ್ಚಿಲು, ಜಿಲ್ಲಾ ಉಪಾಧ್ಯಕ್ಷ ಶ್ರೀನಿವಾಸ ನಿಡಿಂಜಿ, ತೀರ್ಥರಾಮ ಉಳುವಾರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

5 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

13 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

17 hours ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

22 hours ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

1 day ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

2 days ago