Advertisement
Political mirror

ರಾಜಕೀಯ ದ್ವೇಷ ಸಾಧನೆ ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ: ಡಿ.ಕೆ.ಶಿ ಬಂಧನಕ್ಕೆ ಸುಳ್ಯ ಕಾಂಗ್ರೆಸ್‌ ಖಂಡನೆ

Share

ಸುಳ್ಯ: ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಅವರನ್ನು ರಾಜಕೀಯ ದ್ವೇಷ ಸಾಧನೆಗಾಗಿ ಬಂದಿಸಲಾಗಿದೆ. ಪ್ರಜಾಪ್ರಭುತ್ವ ರೀತಿಯಲ್ಲಿ ಗೆದ್ದು ಬಂದು ಸರ್ವಾಧಿಕಾರಿ ಧೋರಣೆಯನ್ನು ಅನುಸರಿಸಿ ವಿರೋಧ ಪಕ್ಷದ ಮುಖಂಡರನ್ನು ಬಂಧಿಸಿ ದ್ವೇಷ ಸಾಧನೆ ಮಾಡುವ ಕೇಂದ್ರ ಸರಕಾರದ ನಡೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಪಾಯಕಾರಿ ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಹೇಳಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್. ಜಯಪ್ರಕಾಶ್ ರೈ ಸರಕಾರಿ ಏಜೆನ್ಸಿಗಳನ್ನು ಬಳಸಿ ನಾಯಕರನ್ನು ಬಂಧಿಸಿ ಕಾಂಗ್ರೆಸನ್ನು ನಿರ್ನಾಮ ಮಾಡಬಹುದು ಎಂಬ ಮೋದಿ ಮತ್ತು ಅಮಿತ್ ಷಾ ದುರುದ್ದೇಶ ನಡೆಯುವುದಿಲ್ಲ. ಕೇಂದ್ರ ಸರ್ಕಾರದ ತಪ್ಪನ್ನು ಮರೆ ಮಾಚಿ ದೇಶದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಕಾಂಗ್ರೆಸ್ ನಾಯಕರನ್ನು ಬಂಧಿಸಲಾಗುತ್ತಿದೆ. ಆರ್ಥಿಕ ವ್ಯವಸ್ಥೆ ಸಾರ್ವಕಾಲಿಕ ಕುಸಿತ ಕಂಡಿದೆ. ನೋಟು ಅಮಾನ್ಯೀಕರಣ ಮತ್ತು ಕೇಂದ್ರದ ಅಸಮರ್ಪಕ ಆರ್ಥಿಕ ನೀತಿಯಿಂದ ಮೋಟಾರು ವಾಹನ ಉದ್ಯಮ, ರಿಯಲ್ ಎಸ್ಟೇಟ್ ವ್ಯವಹಾರ ಸೇರಿದಂತೆ ಎಲ್ಲಾ ಕ್ಷೇತ್ರಗಳೂ ನೆಲಕಚ್ಚಿದೆ. ದೇಶ 15ವರ್ಷ ಹಿಂದಕ್ಕೆ ಹೋಗಿದೆ ಎಂದರು.

ಸೆ.6 ಕ್ಕೆ ಪ್ರತಿಭಟನೆ:
ಡಿ.ಕೆ.ಶಿ ಬಂಧನವನ್ನು ಖಂಡಿಸಿ ಸೆ.6 ರಂದು ಬೆಳಗ್ಗೆ 10ರಿಂದ ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸುಳ್ಯ ಬಸ್ ನಿಲ್ದಾಣದ ಬಳಿಯಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಅವರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಪಿ.ಎಸ್.ಗಂಗಾಧರ, ಸುಧೀರ್ ರೈ ಮೇನಾಲ, ನಂದರಾಜ ಸಂಕೇಶ, ಭವಾನಿಶಂಕರ ಕಲ್ಮಡ್ಕ, ಶ್ರೀಲತಾ ಪ್ರಸನ್ನ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

2 hours ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

9 hours ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

9 hours ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

17 hours ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

17 hours ago

ಹವಾಮಾನ ವರದಿ | 31-08-2026 | ಸೆ.3ರಿಂದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…

1 day ago