ರಾಜಧಾನಿಯಿಂದ ಹಳ್ಳಿಗೆ ಬಂದು ಸ್ವಾತಂತ್ರ್ಯೋತ್ಸವ ಆಚರಿಸಿದ ಯುವಕರು….!

August 15, 2019
10:02 PM

ಸುಬ್ರಹ್ಮಣ್ಯ: ರಾಜಧಾನಿ ಬೆಂಗಳೂರಿನಿಂದ ಗ್ರಾಮೀಣ ಭಾಗವಾದ ಏನೆಕಲ್ಲು ಸರಕಾರಿ ಶಾಲೆಗೆ ಬಂದು ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡವರು ಬೆಂಗಳೂರಿನ ಡೆವಿಲ್ಸ್ ಆಫ್ ಹೆವನ್ ಕ್ಲಬ್ ಸದಸ್ಯರು.

ಏನೆಕಲ್ಲು ಸರಕಾರಿ ಪ್ರೌಡಶಾಲೆಯಲ್ಲಿ ಗುರುವಾರ ನಡೆದ 73 ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಕೆಲಸ ಮಾಡುತ್ತಿರುವ ವೃತ್ತಿಯಲ್ಲಿ ಇಂಜಿನಿಯರ್ ಆಗಿರುವ ಯುವಕ ಯವತಿಯರನ್ನು ಒಳಗೊಂಡ 11 ಮಂದಿಯ ಡೆವಲ್ಸ್ ಹೆವನ್ ಕ್ಲಬ್ ಸದಸ್ಯರು ಅತಿಥಿಗಳಾಗಿದ್ದರು. ಕ್ಲಬ್ ಸದಸ್ಯರನ್ನು ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಗಣೇಶ್ ಹೂಗುಚ್ಚ ನೀಡಿ ಸ್ವಾಗತಿಸಿದರು.
ಬೆಂಗಳೂರು, ಕೊಡಗು, ದಕ್ಷಿಣ ಭಾರತ ಮೂಲದವರಾಗಿರುವ ಇವರುಗಳು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಇಂಜಿನಿಯರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಹವ್ಯಾಸಿ ಬೈಕು ರೈಡರುಗಳಾಗಿದ್ದಾರೆ.ಡೆವಿಲ್ಸ್ ಆಫ್ ಹೆವನ್ ಕ್ಲಬ್ ರಚಿಸಿಕೊಂಡು ಸಮಾಜ ಸೇವೆಗಳಲ್ಲಿಯೂ ತೊಡಗಿಸಿಕೊಂಡಿದ್ದಾರೆ. ಅದರಂತೆ ತಂಡದ ಸದಸ್ಯರು ಬೆಂಗಳೂರಿನಿಂದ ಮಡಿಕೇರಿ ಮೂಲಕ ಬೈಕುಗಳಲ್ಲಿ ಆಗಮಿಸಿದ್ದರು. ಏನೆಕಲ್ಲು ಶಾಲೆಯ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಬೆಳಗ್ಗೆ 8.30ಕ್ಕೆ ಶಾಲೆಗೆ ತಲುಪಿದ ಅವರೆಲ್ಲರೂ ಬಳಿಕ ಶಾಲೆಯಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಬಳಿಕ ಶಾಲಾ ಮಕ್ಕಳಿಗೆ ಶಿಕ್ಷಣಕ್ಕೆ ಅನುಕೂಲವಾಗಲು ಕಲರ್ ಪ್ರಿಂಟರ್ , ಕ್ರೀಡಾ ಸಾಮಾಗ್ರಿ ಹಾಗೂ ಶಾಲೆಯ 60 ಮಂದಿ ವಿದ್ಯಾರ್ಥಿಗಳಿಗೆ ಕಂಪಾಸು ಬಾಕ್ಸ್ ವಿತರಿಸಿದರು. ಮಕ್ಕಳಿಗೆ ಶಾಲೆಯಲ್ಲಿ ಕ್ರೀಡಾ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಕ್ರೀಡಾಸ್ಪರ್ಧೆಯಲ್ಲಿ ಅವರೂ ಪಾಲ್ಗೊಂಡು ಸಂಭ್ರಮಿಸಿದರು. ದಿನವಿಡಿ ಮಕ್ಕಳ ಜತೆಗೆ ಕಳೆದರು.

ನಾವೆಲ್ಲರೂ ವೃತ್ತಿಯಲ್ಲಿ ಇಂಜಿನಿಯರ್ ಆಗಿದ್ದೇವೆ. ಗ್ರಾಮೀಣ ಭಾಗದಲ್ಲಿ ಕಲಿತು ಉದ್ಯೋಗ ಪಡೆದವರು. ನಗರದಲ್ಲಿ ವಾಸವಿದ್ದರೂ ಗ್ರಾಮೀಣ ಭಾಗದ ನಂಟು ಜೀವಂತವಾಗಿರಬೇಕು. ಹಳ್ಳಿ ಶಾಲೆಯಲ್ಲಿ ಕಲಿಯುತ್ತಿರುವ ಮಕ್ಕಳು ವಿದ್ಯಾವಂತರಾಗಿ ಉನ್ನತ ಹುದ್ದೆ ಅಲಂಕರಿಸಬೇಕು. ಮತ್ತು ಗಳಿಕೆಯ ಒಂದಷ್ಟು ಅಂಶವನ್ನು ಹಳ್ಳಿಗಳ ಶಾಲೆಗಳಿಗೆ ದಾನ ಮಾಡಬೇಕು ಈ ಉದ್ದೇಶದಿಂದ ಈ ಭಾರಿ ದ.ಕ ಜಿಲ್ಲೆಗೆ ಆಗಮಿಸಿದ್ದೇವೆ. ಭಾರತ ದೇಶದ ಬಹುತೇಕ ಹಳ್ಳಿಗಳಿಗೂ ತೆರಳುತ್ತೇವೆ. ಬೈಕು ರೈಡ್ ಹವ್ಯಾಸ ಮಾತ್ರವಲ್ಲ. ಸಾಮಾಜಿಕ ಕಾಳಜಿಗೂ ಅದು ಬಳಕೆಯಾಗಬೇಕು ಎನ್ನುತ್ತಾರೆ ಕ್ಲಬ್ ಮುಖ್ಯಸ್ಥ ಗೌತಮ್ ಕೊಡಗು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?
September 9, 2026
6:43 AM
by: ಅರುಣ್‌ ಕುಮಾರ್ ಕಾಂಚೋಡು
ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..
September 8, 2026
11:10 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ
September 8, 2026
10:02 PM
by: ದ ರೂರಲ್ ಮಿರರ್.ಕಾಂ
ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ
September 8, 2026
9:38 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror