Advertisement
ವಿಶೇಷ ವರದಿಗಳು

ರಾಜಧಾನಿಯಿಂದ ಹಳ್ಳಿಗೆ ಬಂದು ಸ್ವಾತಂತ್ರ್ಯೋತ್ಸವ ಆಚರಿಸಿದ ಯುವಕರು….!

Share

ಸುಬ್ರಹ್ಮಣ್ಯ: ರಾಜಧಾನಿ ಬೆಂಗಳೂರಿನಿಂದ ಗ್ರಾಮೀಣ ಭಾಗವಾದ ಏನೆಕಲ್ಲು ಸರಕಾರಿ ಶಾಲೆಗೆ ಬಂದು ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡವರು ಬೆಂಗಳೂರಿನ ಡೆವಿಲ್ಸ್ ಆಫ್ ಹೆವನ್ ಕ್ಲಬ್ ಸದಸ್ಯರು.

ಏನೆಕಲ್ಲು ಸರಕಾರಿ ಪ್ರೌಡಶಾಲೆಯಲ್ಲಿ ಗುರುವಾರ ನಡೆದ 73 ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಕೆಲಸ ಮಾಡುತ್ತಿರುವ ವೃತ್ತಿಯಲ್ಲಿ ಇಂಜಿನಿಯರ್ ಆಗಿರುವ ಯುವಕ ಯವತಿಯರನ್ನು ಒಳಗೊಂಡ 11 ಮಂದಿಯ ಡೆವಲ್ಸ್ ಹೆವನ್ ಕ್ಲಬ್ ಸದಸ್ಯರು ಅತಿಥಿಗಳಾಗಿದ್ದರು. ಕ್ಲಬ್ ಸದಸ್ಯರನ್ನು ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಗಣೇಶ್ ಹೂಗುಚ್ಚ ನೀಡಿ ಸ್ವಾಗತಿಸಿದರು.
ಬೆಂಗಳೂರು, ಕೊಡಗು, ದಕ್ಷಿಣ ಭಾರತ ಮೂಲದವರಾಗಿರುವ ಇವರುಗಳು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಇಂಜಿನಿಯರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಹವ್ಯಾಸಿ ಬೈಕು ರೈಡರುಗಳಾಗಿದ್ದಾರೆ.ಡೆವಿಲ್ಸ್ ಆಫ್ ಹೆವನ್ ಕ್ಲಬ್ ರಚಿಸಿಕೊಂಡು ಸಮಾಜ ಸೇವೆಗಳಲ್ಲಿಯೂ ತೊಡಗಿಸಿಕೊಂಡಿದ್ದಾರೆ. ಅದರಂತೆ ತಂಡದ ಸದಸ್ಯರು ಬೆಂಗಳೂರಿನಿಂದ ಮಡಿಕೇರಿ ಮೂಲಕ ಬೈಕುಗಳಲ್ಲಿ ಆಗಮಿಸಿದ್ದರು. ಏನೆಕಲ್ಲು ಶಾಲೆಯ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಬೆಳಗ್ಗೆ 8.30ಕ್ಕೆ ಶಾಲೆಗೆ ತಲುಪಿದ ಅವರೆಲ್ಲರೂ ಬಳಿಕ ಶಾಲೆಯಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಬಳಿಕ ಶಾಲಾ ಮಕ್ಕಳಿಗೆ ಶಿಕ್ಷಣಕ್ಕೆ ಅನುಕೂಲವಾಗಲು ಕಲರ್ ಪ್ರಿಂಟರ್ , ಕ್ರೀಡಾ ಸಾಮಾಗ್ರಿ ಹಾಗೂ ಶಾಲೆಯ 60 ಮಂದಿ ವಿದ್ಯಾರ್ಥಿಗಳಿಗೆ ಕಂಪಾಸು ಬಾಕ್ಸ್ ವಿತರಿಸಿದರು. ಮಕ್ಕಳಿಗೆ ಶಾಲೆಯಲ್ಲಿ ಕ್ರೀಡಾ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಕ್ರೀಡಾಸ್ಪರ್ಧೆಯಲ್ಲಿ ಅವರೂ ಪಾಲ್ಗೊಂಡು ಸಂಭ್ರಮಿಸಿದರು. ದಿನವಿಡಿ ಮಕ್ಕಳ ಜತೆಗೆ ಕಳೆದರು.

ನಾವೆಲ್ಲರೂ ವೃತ್ತಿಯಲ್ಲಿ ಇಂಜಿನಿಯರ್ ಆಗಿದ್ದೇವೆ. ಗ್ರಾಮೀಣ ಭಾಗದಲ್ಲಿ ಕಲಿತು ಉದ್ಯೋಗ ಪಡೆದವರು. ನಗರದಲ್ಲಿ ವಾಸವಿದ್ದರೂ ಗ್ರಾಮೀಣ ಭಾಗದ ನಂಟು ಜೀವಂತವಾಗಿರಬೇಕು. ಹಳ್ಳಿ ಶಾಲೆಯಲ್ಲಿ ಕಲಿಯುತ್ತಿರುವ ಮಕ್ಕಳು ವಿದ್ಯಾವಂತರಾಗಿ ಉನ್ನತ ಹುದ್ದೆ ಅಲಂಕರಿಸಬೇಕು. ಮತ್ತು ಗಳಿಕೆಯ ಒಂದಷ್ಟು ಅಂಶವನ್ನು ಹಳ್ಳಿಗಳ ಶಾಲೆಗಳಿಗೆ ದಾನ ಮಾಡಬೇಕು ಈ ಉದ್ದೇಶದಿಂದ ಈ ಭಾರಿ ದ.ಕ ಜಿಲ್ಲೆಗೆ ಆಗಮಿಸಿದ್ದೇವೆ. ಭಾರತ ದೇಶದ ಬಹುತೇಕ ಹಳ್ಳಿಗಳಿಗೂ ತೆರಳುತ್ತೇವೆ. ಬೈಕು ರೈಡ್ ಹವ್ಯಾಸ ಮಾತ್ರವಲ್ಲ. ಸಾಮಾಜಿಕ ಕಾಳಜಿಗೂ ಅದು ಬಳಕೆಯಾಗಬೇಕು ಎನ್ನುತ್ತಾರೆ ಕ್ಲಬ್ ಮುಖ್ಯಸ್ಥ ಗೌತಮ್ ಕೊಡಗು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್‌ ಘಟಕ ಆರಂಭ – ಮಹಿಳೆಯರ ನೇತೃತ್ವದಲ್ಲಿ ಗ್ರಾಮೀಣ ಉದ್ಯಮಕ್ಕೆ ಹೊಸ ದಿಕ್ಕು

ಸುಳ್ಯದ ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್‌ ಘಟಕ ಆರಂಭವಾಗಿದೆ. ಮೌಲ್ಯವರ್ಧನೆಯ…

1 day ago

ಅಡಿಕೆ ಎಲೆಚುಕ್ಕೆ ರೋಗದ ವಿರುದ್ಧ ಹೋರಾಟ – ಸಮುದಾಯ ಮಟ್ಟದಲ್ಲಿ ಕ್ರಿಯಾ ಯೋಜನೆಗೆ ಸಂಸದ ಬ್ರಿಜೇಶ್ ಚೌಟ ಕರೆ

ಗುತ್ತಿಗಾರಿನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು. ಸಮುದಾಯದ…

1 day ago

ಹವಾಮಾನ ವರದಿ | 28-04-2026 | ಎಪ್ರಿಲ್ 29ರಿಂದ ಕರ್ನಾಟಕದಲ್ಲಿ ಮಳೆ ಚುರುಕು! ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…

2 days ago

ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ

ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…

4 days ago

ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…

4 days ago

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

4 days ago