ಬೆಂಗಳೂರು: ಕರ್ನಾಟಕದಲ್ಲಿ ಕೊರೋನ ಸೋಂಕಿತರ ಸಂಖ್ಯೆಯಲ್ಲಿ ವ್ಯಾಪಕ ಹೆಚ್ಚಳವಾಗುತ್ತಿದೆ. ಮಂಗಳವಾರ ಸಂಜೆಯಿಂದ ಬುಧವಾರ ಸಂಜೆವರೆಗೆ 1,272 ಮಂದಿಗೆ ಕೊರೋನ ವೈರಸ್ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಒಟ್ಟು ಸಂಖ್ಯೆ 16,514ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿಂದು 7 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 253ಕ್ಕೆ ಏರಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಸೋಂಕು ಖಚಿತಗೊಂಡ ಪ್ರಕರಣಗಳ ಪೈಕಿ ಬೆಂಗಳೂರು ನಗರ 735, ಬಳ್ಳಾರಿ 85, ದಕ್ಷಿಣ ಕನ್ನಡ 84, ಧಾರವಾಡ 35, ಬೆಂಗಳೂರು ಗ್ರಾಮಾಂತರ 29, ವಿಜಯಪುರ, ಹಾಸನದಲ್ಲಿ ತಲಾ 28, ಉತ್ತರ ಕನ್ನಡ 23, ಉಡುಪಿ 22, ಚಾಮರಾಜನಗರ 21, ಬಾಗಲಕೋಟೆ 20, ತುಮಕೂರು 19, ದಾವಣಗೆರೆ 16, ಚಿಕ್ಕಬಳ್ಳಾಪುರ 15, ರಾಮನಗರ, ಕಲಬುರಗಿಯಲ್ಲಿ ತಲಾ 14, ಕೊಪ್ಪಳ 13, ರಾಯಚೂರು, ಚಿತ್ರದುರ್ಗದಲ್ಲಿ ತಲಾ 12, ಯಾದಗಿರಿ, ಬೀದರ್, ಬೆಳಗಾವಿಯಲ್ಲಿ ತಲಾ 8, ಕೊಡಗು 7, ಮಂಡ್ಯ, ಕೋಲಾರದಲ್ಲಿ ತಲಾ 5, ಶಿವಮೊಗ್ಗ 3, ಗದಗ 2, ಚಿಕ್ಕಮಗಳೂರಿನಲ್ಲಿ ಒಂದು ಪ್ರಕರಣ ಪಾಸಿಟಿವ್ ಬಂದಿದೆ.
ಒಟ್ಟಾರೆ ರಾಜ್ಯದಲ್ಲಿ 16,514 ಕೊರೋನ ಸೋಂಕಿತರ ಪೈಕಿ 8063 ಮಂದಿ ಸಂಪೂರ್ಣ ಗುಣಮುಖರಾಗಿದ್ದಾರೆ. ಇದರಲ್ಲಿ ಇಂದು 145 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದಂತೆ ಇದುವರೆಗೆ 253 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು, 8194 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…