ಬೆಂಗಳೂರು: ಕರ್ನಾಟಕದಲ್ಲಿ ಕೊರೋನ ಸೋಂಕಿತರ ಸಂಖ್ಯೆಯಲ್ಲಿ ವ್ಯಾಪಕ ಹೆಚ್ಚಳವಾಗುತ್ತಿದೆ. ಮಂಗಳವಾರ ಸಂಜೆಯಿಂದ ಬುಧವಾರ ಸಂಜೆವರೆಗೆ 1,272 ಮಂದಿಗೆ ಕೊರೋನ ವೈರಸ್ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಒಟ್ಟು ಸಂಖ್ಯೆ 16,514ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿಂದು 7 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 253ಕ್ಕೆ ಏರಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಸೋಂಕು ಖಚಿತಗೊಂಡ ಪ್ರಕರಣಗಳ ಪೈಕಿ ಬೆಂಗಳೂರು ನಗರ 735, ಬಳ್ಳಾರಿ 85, ದಕ್ಷಿಣ ಕನ್ನಡ 84, ಧಾರವಾಡ 35, ಬೆಂಗಳೂರು ಗ್ರಾಮಾಂತರ 29, ವಿಜಯಪುರ, ಹಾಸನದಲ್ಲಿ ತಲಾ 28, ಉತ್ತರ ಕನ್ನಡ 23, ಉಡುಪಿ 22, ಚಾಮರಾಜನಗರ 21, ಬಾಗಲಕೋಟೆ 20, ತುಮಕೂರು 19, ದಾವಣಗೆರೆ 16, ಚಿಕ್ಕಬಳ್ಳಾಪುರ 15, ರಾಮನಗರ, ಕಲಬುರಗಿಯಲ್ಲಿ ತಲಾ 14, ಕೊಪ್ಪಳ 13, ರಾಯಚೂರು, ಚಿತ್ರದುರ್ಗದಲ್ಲಿ ತಲಾ 12, ಯಾದಗಿರಿ, ಬೀದರ್, ಬೆಳಗಾವಿಯಲ್ಲಿ ತಲಾ 8, ಕೊಡಗು 7, ಮಂಡ್ಯ, ಕೋಲಾರದಲ್ಲಿ ತಲಾ 5, ಶಿವಮೊಗ್ಗ 3, ಗದಗ 2, ಚಿಕ್ಕಮಗಳೂರಿನಲ್ಲಿ ಒಂದು ಪ್ರಕರಣ ಪಾಸಿಟಿವ್ ಬಂದಿದೆ.
ಒಟ್ಟಾರೆ ರಾಜ್ಯದಲ್ಲಿ 16,514 ಕೊರೋನ ಸೋಂಕಿತರ ಪೈಕಿ 8063 ಮಂದಿ ಸಂಪೂರ್ಣ ಗುಣಮುಖರಾಗಿದ್ದಾರೆ. ಇದರಲ್ಲಿ ಇಂದು 145 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದಂತೆ ಇದುವರೆಗೆ 253 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು, 8194 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…