ಬೆಂಗಳೂರು: ಕರ್ನಾಟಕದಲ್ಲಿ ಕೊರೋನ ಸೋಂಕಿತರ ಸಂಖ್ಯೆಯಲ್ಲಿ ವ್ಯಾಪಕ ಹೆಚ್ಚಳವಾಗುತ್ತಿದೆ. ಮಂಗಳವಾರ ಸಂಜೆಯಿಂದ ಬುಧವಾರ ಸಂಜೆವರೆಗೆ 1,272 ಮಂದಿಗೆ ಕೊರೋನ ವೈರಸ್ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಒಟ್ಟು ಸಂಖ್ಯೆ 16,514ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿಂದು 7 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 253ಕ್ಕೆ ಏರಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಸೋಂಕು ಖಚಿತಗೊಂಡ ಪ್ರಕರಣಗಳ ಪೈಕಿ ಬೆಂಗಳೂರು ನಗರ 735, ಬಳ್ಳಾರಿ 85, ದಕ್ಷಿಣ ಕನ್ನಡ 84, ಧಾರವಾಡ 35, ಬೆಂಗಳೂರು ಗ್ರಾಮಾಂತರ 29, ವಿಜಯಪುರ, ಹಾಸನದಲ್ಲಿ ತಲಾ 28, ಉತ್ತರ ಕನ್ನಡ 23, ಉಡುಪಿ 22, ಚಾಮರಾಜನಗರ 21, ಬಾಗಲಕೋಟೆ 20, ತುಮಕೂರು 19, ದಾವಣಗೆರೆ 16, ಚಿಕ್ಕಬಳ್ಳಾಪುರ 15, ರಾಮನಗರ, ಕಲಬುರಗಿಯಲ್ಲಿ ತಲಾ 14, ಕೊಪ್ಪಳ 13, ರಾಯಚೂರು, ಚಿತ್ರದುರ್ಗದಲ್ಲಿ ತಲಾ 12, ಯಾದಗಿರಿ, ಬೀದರ್, ಬೆಳಗಾವಿಯಲ್ಲಿ ತಲಾ 8, ಕೊಡಗು 7, ಮಂಡ್ಯ, ಕೋಲಾರದಲ್ಲಿ ತಲಾ 5, ಶಿವಮೊಗ್ಗ 3, ಗದಗ 2, ಚಿಕ್ಕಮಗಳೂರಿನಲ್ಲಿ ಒಂದು ಪ್ರಕರಣ ಪಾಸಿಟಿವ್ ಬಂದಿದೆ.
ಒಟ್ಟಾರೆ ರಾಜ್ಯದಲ್ಲಿ 16,514 ಕೊರೋನ ಸೋಂಕಿತರ ಪೈಕಿ 8063 ಮಂದಿ ಸಂಪೂರ್ಣ ಗುಣಮುಖರಾಗಿದ್ದಾರೆ. ಇದರಲ್ಲಿ ಇಂದು 145 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದಂತೆ ಇದುವರೆಗೆ 253 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು, 8194 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…