Advertisement
ಸುದ್ದಿಗಳು

ರಾಜ್ಯದಲ್ಲಿಂದು 1,272 ಮಂದಿಗೆ ಕೊರೋನ ಪಾಸಿಟಿವ್

Share

ಬೆಂಗಳೂರು: ಕರ್ನಾಟಕದಲ್ಲಿ ಕೊರೋನ ಸೋಂಕಿತರ ಸಂಖ್ಯೆಯಲ್ಲಿ ವ್ಯಾಪಕ ಹೆಚ್ಚಳವಾಗುತ್ತಿದೆ. ಮಂಗಳವಾರ ಸಂಜೆಯಿಂದ ಬುಧವಾರ ಸಂಜೆವರೆಗೆ 1,272 ಮಂದಿಗೆ ಕೊರೋನ ವೈರಸ್ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಒಟ್ಟು ಸಂಖ್ಯೆ 16,514ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿಂದು 7 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 253ಕ್ಕೆ ಏರಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಸೋಂಕು ಖಚಿತಗೊಂಡ ಪ್ರಕರಣಗಳ ಪೈಕಿ ಬೆಂಗಳೂರು ನಗರ 735, ಬಳ್ಳಾರಿ 85, ದಕ್ಷಿಣ ಕನ್ನಡ 84, ಧಾರವಾಡ 35, ಬೆಂಗಳೂರು ಗ್ರಾಮಾಂತರ 29, ವಿಜಯಪುರ, ಹಾಸನದಲ್ಲಿ ತಲಾ 28, ಉತ್ತರ ಕನ್ನಡ 23, ಉಡುಪಿ 22, ಚಾಮರಾಜನಗರ 21, ಬಾಗಲಕೋಟೆ 20, ತುಮಕೂರು 19, ದಾವಣಗೆರೆ 16, ಚಿಕ್ಕಬಳ್ಳಾಪುರ 15, ರಾಮನಗರ, ಕಲಬುರಗಿಯಲ್ಲಿ ತಲಾ 14, ಕೊಪ್ಪಳ 13, ರಾಯಚೂರು, ಚಿತ್ರದುರ್ಗದಲ್ಲಿ ತಲಾ 12, ಯಾದಗಿರಿ, ಬೀದರ್, ಬೆಳಗಾವಿಯಲ್ಲಿ ತಲಾ 8, ಕೊಡಗು 7, ಮಂಡ್ಯ, ಕೋಲಾರದಲ್ಲಿ ತಲಾ 5, ಶಿವಮೊಗ್ಗ 3, ಗದಗ 2, ಚಿಕ್ಕಮಗಳೂರಿನಲ್ಲಿ ಒಂದು ಪ್ರಕರಣ ಪಾಸಿಟಿವ್ ಬಂದಿದೆ.

ಒಟ್ಟಾರೆ ರಾಜ್ಯದಲ್ಲಿ 16,514 ಕೊರೋನ ಸೋಂಕಿತರ ಪೈಕಿ 8063 ಮಂದಿ ಸಂಪೂರ್ಣ ಗುಣಮುಖರಾಗಿದ್ದಾರೆ. ಇದರಲ್ಲಿ ಇಂದು 145 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದಂತೆ ಇದುವರೆಗೆ 253 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು, 8194 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

2 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

2 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

3 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

4 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

4 days ago