ಬೆಂಗಳೂರು: ಕರ್ನಾಟಕದಲ್ಲಿ ಕೊರೋನ ಸೋಂಕಿತರ ಸಂಖ್ಯೆಯಲ್ಲಿ ವ್ಯಾಪಕ ಹೆಚ್ಚಳವಾಗುತ್ತಿದೆ. ಸೋಂಕಿತರು ಸಾವನ್ನಪ್ಪುತ್ತಿರುವ ಪ್ರಕರಣದಲ್ಲೂ ಏರಿಕೆಯಾಗುತ್ತಿದೆ. ಬುಧವಾರ ಸಂಜೆಯಿಂದ ಗುರುವಾರ ಸಂಜೆವರೆಗೆ ಮತ್ತೆ 1,502 ಮಂದಿಗೆ ಕೊರೋನ ವೈರಸ್ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಒಟ್ಟು ಸಂಖ್ಯೆ 18,016 ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ 19 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಸೋಂಕು ಖಚಿತಗೊಂಡ ಪ್ರಕರಣಗಳ ಪೈಕಿ ಬೆಂಗಳೂರು ನಗರ 889, ದಕ್ಷಿಣ ಕನ್ನಡ 90, ಮೈಸೂರು 68, ಬಳ್ಳಾರಿ 65, ಧಾರವಾಡ 47, ವಿಜಯಪುರ 39, ರಾಮನಗರ 39, ಕಲಬುರಗಿ 38, ಬೀದರ್ 32, ತುಮಕೂರು 26, ಶಿವಮೊಗ್ಗ 23, ಮಂಡ್ಯ 19, ಉತ್ತರ ಕನ್ನಡ 17, ಹಾಸನ 15, ಉಡುಪಿ 14, ಕೋಲಾರ 12, ರಾಯಚೂರು 11, ಬಾಗಲಕೋಟೆ 10, ದಾವಣಗೆರೆ 8, ಯಾದಗಿರಿ 7, ಬೆಳಗಾವಿ 7, ಕೊಡಗು 6, ಬೆಂಗಳೂರು ಗ್ರಾಮಾಂತರ 5, ಹಾವೇರಿ, ಕೊಪ್ಪಳದಲ್ಲಿ ತಲಾ 4, ಚಿತ್ರದುರ್ಗದಲ್ಲಿ 3, ಗದಗ 2, ಚಿಕ್ಕಮಗಳೂರು ಮತ್ತು ಚಿಕ್ಕಬಳ್ಳಾಪುರದಲ್ಲಿ ತಲಾ 1 ಪ್ರಕರಣ ಪಾಸಿಟಿವ್ ಬಂದಿದೆ.
ಒಟ್ಟಾರೆ ರಾಜ್ಯದಲ್ಲಿ 18,016 ಕೊರೋನ ಸೋಂಕಿತರ ಪೈಕಿ 8,334 ಮಂದಿ ಗುಣಮುಖರಾಗಿದ್ದಾರೆ. ಇದರಲ್ಲಿ ಇಂದು ಒಂದೇ ದಿನ 271 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದಂತೆ ಇದುವರೆಗೆ 272 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು, 9,406 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…