ಬೆಂಗಳೂರು: ಕರ್ನಾಟಕದಲ್ಲಿ ಕೊರೋನ ಸೋಂಕಿತರ ಸಂಖ್ಯೆಯಲ್ಲಿ ವ್ಯಾಪಕ ಹೆಚ್ಚಳವಾಗುತ್ತಿದೆ. ಸೋಂಕಿತರು ಸಾವನ್ನಪ್ಪುತ್ತಿರುವ ಪ್ರಕರಣದಲ್ಲೂ ಏರಿಕೆಯಾಗುತ್ತಿದೆ. ಬುಧವಾರ ಸಂಜೆಯಿಂದ ಗುರುವಾರ ಸಂಜೆವರೆಗೆ ಮತ್ತೆ 1,502 ಮಂದಿಗೆ ಕೊರೋನ ವೈರಸ್ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಒಟ್ಟು ಸಂಖ್ಯೆ 18,016 ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ 19 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಸೋಂಕು ಖಚಿತಗೊಂಡ ಪ್ರಕರಣಗಳ ಪೈಕಿ ಬೆಂಗಳೂರು ನಗರ 889, ದಕ್ಷಿಣ ಕನ್ನಡ 90, ಮೈಸೂರು 68, ಬಳ್ಳಾರಿ 65, ಧಾರವಾಡ 47, ವಿಜಯಪುರ 39, ರಾಮನಗರ 39, ಕಲಬುರಗಿ 38, ಬೀದರ್ 32, ತುಮಕೂರು 26, ಶಿವಮೊಗ್ಗ 23, ಮಂಡ್ಯ 19, ಉತ್ತರ ಕನ್ನಡ 17, ಹಾಸನ 15, ಉಡುಪಿ 14, ಕೋಲಾರ 12, ರಾಯಚೂರು 11, ಬಾಗಲಕೋಟೆ 10, ದಾವಣಗೆರೆ 8, ಯಾದಗಿರಿ 7, ಬೆಳಗಾವಿ 7, ಕೊಡಗು 6, ಬೆಂಗಳೂರು ಗ್ರಾಮಾಂತರ 5, ಹಾವೇರಿ, ಕೊಪ್ಪಳದಲ್ಲಿ ತಲಾ 4, ಚಿತ್ರದುರ್ಗದಲ್ಲಿ 3, ಗದಗ 2, ಚಿಕ್ಕಮಗಳೂರು ಮತ್ತು ಚಿಕ್ಕಬಳ್ಳಾಪುರದಲ್ಲಿ ತಲಾ 1 ಪ್ರಕರಣ ಪಾಸಿಟಿವ್ ಬಂದಿದೆ.
ಒಟ್ಟಾರೆ ರಾಜ್ಯದಲ್ಲಿ 18,016 ಕೊರೋನ ಸೋಂಕಿತರ ಪೈಕಿ 8,334 ಮಂದಿ ಗುಣಮುಖರಾಗಿದ್ದಾರೆ. ಇದರಲ್ಲಿ ಇಂದು ಒಂದೇ ದಿನ 271 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದಂತೆ ಇದುವರೆಗೆ 272 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು, 9,406 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…