ಬೆಂಗಳೂರು: ಕರ್ನಾಟಕದಲ್ಲಿ ಕೊರೋನ ಸೋಂಕಿತರ ಸಂಖ್ಯೆಯಲ್ಲಿ ವ್ಯಾಪಕ ಹೆಚ್ಚಳವಾಗುತ್ತಿದೆ. ಸೋಂಕಿತರು ಸಾವನ್ನಪ್ಪುತ್ತಿರುವ ಪ್ರಕರಣದಲ್ಲೂ ಏರಿಕೆಯಾಗುತ್ತಿದೆ. ಬುಧವಾರ ಸಂಜೆಯಿಂದ ಗುರುವಾರ ಸಂಜೆವರೆಗೆ ಮತ್ತೆ 1,502 ಮಂದಿಗೆ ಕೊರೋನ ವೈರಸ್ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಒಟ್ಟು ಸಂಖ್ಯೆ 18,016 ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ 19 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಸೋಂಕು ಖಚಿತಗೊಂಡ ಪ್ರಕರಣಗಳ ಪೈಕಿ ಬೆಂಗಳೂರು ನಗರ 889, ದಕ್ಷಿಣ ಕನ್ನಡ 90, ಮೈಸೂರು 68, ಬಳ್ಳಾರಿ 65, ಧಾರವಾಡ 47, ವಿಜಯಪುರ 39, ರಾಮನಗರ 39, ಕಲಬುರಗಿ 38, ಬೀದರ್ 32, ತುಮಕೂರು 26, ಶಿವಮೊಗ್ಗ 23, ಮಂಡ್ಯ 19, ಉತ್ತರ ಕನ್ನಡ 17, ಹಾಸನ 15, ಉಡುಪಿ 14, ಕೋಲಾರ 12, ರಾಯಚೂರು 11, ಬಾಗಲಕೋಟೆ 10, ದಾವಣಗೆರೆ 8, ಯಾದಗಿರಿ 7, ಬೆಳಗಾವಿ 7, ಕೊಡಗು 6, ಬೆಂಗಳೂರು ಗ್ರಾಮಾಂತರ 5, ಹಾವೇರಿ, ಕೊಪ್ಪಳದಲ್ಲಿ ತಲಾ 4, ಚಿತ್ರದುರ್ಗದಲ್ಲಿ 3, ಗದಗ 2, ಚಿಕ್ಕಮಗಳೂರು ಮತ್ತು ಚಿಕ್ಕಬಳ್ಳಾಪುರದಲ್ಲಿ ತಲಾ 1 ಪ್ರಕರಣ ಪಾಸಿಟಿವ್ ಬಂದಿದೆ.
ಒಟ್ಟಾರೆ ರಾಜ್ಯದಲ್ಲಿ 18,016 ಕೊರೋನ ಸೋಂಕಿತರ ಪೈಕಿ 8,334 ಮಂದಿ ಗುಣಮುಖರಾಗಿದ್ದಾರೆ. ಇದರಲ್ಲಿ ಇಂದು ಒಂದೇ ದಿನ 271 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದಂತೆ ಇದುವರೆಗೆ 272 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು, 9,406 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…