ಬೆಂಗಳೂರು: ಕರ್ನಾಟಕದಲ್ಲಿ ಕೊರೋನ ಸೋಂಕಿತರ ಸಂಖ್ಯೆಯಲ್ಲಿ ವ್ಯಾಪಕ ಹೆಚ್ಚಳವಾಗುತ್ತಿದೆ. ಸೋಂಕಿತರು ಸಾವನ್ನಪ್ಪುತ್ತಿರುವ ಪ್ರಕರಣದಲ್ಲೂ ಏರಿಕೆಯಾಗುತ್ತಿದೆ. ಬುಧವಾರ ಸಂಜೆಯಿಂದ ಗುರುವಾರ ಸಂಜೆವರೆಗೆ ಮತ್ತೆ 1,502 ಮಂದಿಗೆ ಕೊರೋನ ವೈರಸ್ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಒಟ್ಟು ಸಂಖ್ಯೆ 18,016 ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ 19 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಸೋಂಕು ಖಚಿತಗೊಂಡ ಪ್ರಕರಣಗಳ ಪೈಕಿ ಬೆಂಗಳೂರು ನಗರ 889, ದಕ್ಷಿಣ ಕನ್ನಡ 90, ಮೈಸೂರು 68, ಬಳ್ಳಾರಿ 65, ಧಾರವಾಡ 47, ವಿಜಯಪುರ 39, ರಾಮನಗರ 39, ಕಲಬುರಗಿ 38, ಬೀದರ್ 32, ತುಮಕೂರು 26, ಶಿವಮೊಗ್ಗ 23, ಮಂಡ್ಯ 19, ಉತ್ತರ ಕನ್ನಡ 17, ಹಾಸನ 15, ಉಡುಪಿ 14, ಕೋಲಾರ 12, ರಾಯಚೂರು 11, ಬಾಗಲಕೋಟೆ 10, ದಾವಣಗೆರೆ 8, ಯಾದಗಿರಿ 7, ಬೆಳಗಾವಿ 7, ಕೊಡಗು 6, ಬೆಂಗಳೂರು ಗ್ರಾಮಾಂತರ 5, ಹಾವೇರಿ, ಕೊಪ್ಪಳದಲ್ಲಿ ತಲಾ 4, ಚಿತ್ರದುರ್ಗದಲ್ಲಿ 3, ಗದಗ 2, ಚಿಕ್ಕಮಗಳೂರು ಮತ್ತು ಚಿಕ್ಕಬಳ್ಳಾಪುರದಲ್ಲಿ ತಲಾ 1 ಪ್ರಕರಣ ಪಾಸಿಟಿವ್ ಬಂದಿದೆ.
ಒಟ್ಟಾರೆ ರಾಜ್ಯದಲ್ಲಿ 18,016 ಕೊರೋನ ಸೋಂಕಿತರ ಪೈಕಿ 8,334 ಮಂದಿ ಗುಣಮುಖರಾಗಿದ್ದಾರೆ. ಇದರಲ್ಲಿ ಇಂದು ಒಂದೇ ದಿನ 271 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದಂತೆ ಇದುವರೆಗೆ 272 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು, 9,406 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…