ಬೆಂಗಳೂರು: ಕರ್ನಾಟಕದಲ್ಲಿ ಕೊರೋನ ಸೋಂಕಿತರ ಸಂಖ್ಯೆಯಲ್ಲಿ ವ್ಯಾಪಕ ಹೆಚ್ಚಳವಾಗುತ್ತಿದೆ. ಸೋಂಕಿತರು ಸಾವನ್ನಪ್ಪುತ್ತಿರುವ ಪ್ರಕರಣದಲ್ಲೂ ಏರಿಕೆಯಾಗುತ್ತಿದೆ. ಬುಧವಾರ ಸಂಜೆಯಿಂದ ಗುರುವಾರ ಸಂಜೆವರೆಗೆ ಮತ್ತೆ 1,502 ಮಂದಿಗೆ ಕೊರೋನ ವೈರಸ್ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಒಟ್ಟು ಸಂಖ್ಯೆ 18,016 ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ 19 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಸೋಂಕು ಖಚಿತಗೊಂಡ ಪ್ರಕರಣಗಳ ಪೈಕಿ ಬೆಂಗಳೂರು ನಗರ 889, ದಕ್ಷಿಣ ಕನ್ನಡ 90, ಮೈಸೂರು 68, ಬಳ್ಳಾರಿ 65, ಧಾರವಾಡ 47, ವಿಜಯಪುರ 39, ರಾಮನಗರ 39, ಕಲಬುರಗಿ 38, ಬೀದರ್ 32, ತುಮಕೂರು 26, ಶಿವಮೊಗ್ಗ 23, ಮಂಡ್ಯ 19, ಉತ್ತರ ಕನ್ನಡ 17, ಹಾಸನ 15, ಉಡುಪಿ 14, ಕೋಲಾರ 12, ರಾಯಚೂರು 11, ಬಾಗಲಕೋಟೆ 10, ದಾವಣಗೆರೆ 8, ಯಾದಗಿರಿ 7, ಬೆಳಗಾವಿ 7, ಕೊಡಗು 6, ಬೆಂಗಳೂರು ಗ್ರಾಮಾಂತರ 5, ಹಾವೇರಿ, ಕೊಪ್ಪಳದಲ್ಲಿ ತಲಾ 4, ಚಿತ್ರದುರ್ಗದಲ್ಲಿ 3, ಗದಗ 2, ಚಿಕ್ಕಮಗಳೂರು ಮತ್ತು ಚಿಕ್ಕಬಳ್ಳಾಪುರದಲ್ಲಿ ತಲಾ 1 ಪ್ರಕರಣ ಪಾಸಿಟಿವ್ ಬಂದಿದೆ.
ಒಟ್ಟಾರೆ ರಾಜ್ಯದಲ್ಲಿ 18,016 ಕೊರೋನ ಸೋಂಕಿತರ ಪೈಕಿ 8,334 ಮಂದಿ ಗುಣಮುಖರಾಗಿದ್ದಾರೆ. ಇದರಲ್ಲಿ ಇಂದು ಒಂದೇ ದಿನ 271 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದಂತೆ ಇದುವರೆಗೆ 272 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು, 9,406 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…
ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…