ಬೆಂಗಳೂರು: ದೇಶದಾದ್ಯಂತ ಜಾರಿಯಲ್ಲಿದ್ದ ಲಾಕ್’ಡೌನ್ ಸಡಿಲಗೊಂಡ ಬೆನ್ನಲ್ಲೇ ದೇಶದಲ್ಲಿ ಕೊರೋನಾ ಸ್ಫೋಟ ಆರಂಭವಾಗಿದೆ. ಕರ್ನಾಟಕದಲ್ಲಿ ಇಂದು 63 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಒಟ್ಟೂ 1458 ಜನರಿಗೆ ಸೋಂಕು ತಗುಲಿದಂತಾಗಿದೆ.
ಇಂದು ಬೆಂಗಳೂರಿನಲ್ಲಿ 4, ಮಂಡ್ಯದಲ್ಲಿ 8, ಬೀದರ್ ನಲ್ಲಿ 10 , ಕಲಬುರಗಿಯಲ್ಲಿ 7, ಹಾಸನಗದಲ್ಲಿ 21, ಉತ್ತರ ಕನ್ನಡದಲ್ಲಿ 1, ದಕ್ಷಿಣ ಕನ್ನಡದಲ್ಲಿ 1, ತುಮಕೂರಿನಲ್ಲಿ 4, ಉಡುಪಿಯಲ್ಲಿ 6, ಯಾದಗಿರಿಯಲ್ಲಿ ಒಬ್ಬರಿಗೆ ಸೋಂಕು ಪತ್ತೆಯಾಗಿದೆ. ಇವತ್ತು ಬೆಳಕಿಗೆ ಬಂದಿರುವ 63 ಪ್ರಕರಣಗಳಲ್ಲಿ ಹೆಚ್ಚಿನ ಸಂಖ್ಯೆ ಹಾಸನದ್ದೇ ಇದೆ.
ರಾಜ್ಯದಲ್ಲಿ ಇಂದು 10 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟಾರೆ ಡಿಸ್ಚಾರ್ಜ್ ಆದವರ ಪ್ರಮಾಣ 553 ತಲುಪಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 864 ಇದೆ.
ಇಂದು ಆರೋಗ್ಯ ಇಲಾಖೆ ಹೊಸ ರೀತಿಯಲ್ಲಿ ಹೆಲ್ತ್ ಬುಲಿಟಿನ್ ಬಿಡುಗಡೆ ಮಾಡಿದ್ದು, ಕೊರೆನಾ ಸೋಂಕು ತಗುಲಿದ್ದು ಹೇಗೆ ಎನ್ನುವುದನ್ನು ತಿಳಿಸಿಲ್ಲ.
ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ ಬರೋಬ್ಬರಿ 5,611 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,06,750ಕ್ಕೆ ಏರಿಕೆಯಾಗಿದೆ.
ಇದೇ ವೇಳೆ ಮಹಾಮಾರಿ ವೈರಸ್’ಗೆ ನಿನ್ನೆ ಒಂದೇ ದಿನ 140 ಮಂದಿ ಸಾವನ್ನಪ್ಪಿದ್ದು, ಮೃತಪಟ್ಟವರ ಸಂಖ್ಯೆ ಕೂಡ 3,303ಕ್ಕೆ ಏರಿಕೆಯಾಗಿದೆ. ದೇಶದಾದ್ಯಂತ 42,298 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.
ಈ ವರ್ಷ ಅಡಿಕೆ ಇಳುವರಿ ಕುಸಿತವಾಗಿದೆ ಎಂದು ಶೇ.71 ರಷ್ಟು ರೈತರು ಅಭಿಪ್ರಾಯ…
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…
ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…