ಬೆಂಗಳೂರು: ದೇಶದಾದ್ಯಂತ ಜಾರಿಯಲ್ಲಿದ್ದ ಲಾಕ್’ಡೌನ್ ಸಡಿಲಗೊಂಡ ಬೆನ್ನಲ್ಲೇ ದೇಶದಲ್ಲಿ ಕೊರೋನಾ ಸ್ಫೋಟ ಆರಂಭವಾಗಿದೆ. ಕರ್ನಾಟಕದಲ್ಲಿ ಇಂದು 63 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಒಟ್ಟೂ 1458 ಜನರಿಗೆ ಸೋಂಕು ತಗುಲಿದಂತಾಗಿದೆ.
ಇಂದು ಬೆಂಗಳೂರಿನಲ್ಲಿ 4, ಮಂಡ್ಯದಲ್ಲಿ 8, ಬೀದರ್ ನಲ್ಲಿ 10 , ಕಲಬುರಗಿಯಲ್ಲಿ 7, ಹಾಸನಗದಲ್ಲಿ 21, ಉತ್ತರ ಕನ್ನಡದಲ್ಲಿ 1, ದಕ್ಷಿಣ ಕನ್ನಡದಲ್ಲಿ 1, ತುಮಕೂರಿನಲ್ಲಿ 4, ಉಡುಪಿಯಲ್ಲಿ 6, ಯಾದಗಿರಿಯಲ್ಲಿ ಒಬ್ಬರಿಗೆ ಸೋಂಕು ಪತ್ತೆಯಾಗಿದೆ. ಇವತ್ತು ಬೆಳಕಿಗೆ ಬಂದಿರುವ 63 ಪ್ರಕರಣಗಳಲ್ಲಿ ಹೆಚ್ಚಿನ ಸಂಖ್ಯೆ ಹಾಸನದ್ದೇ ಇದೆ.
ರಾಜ್ಯದಲ್ಲಿ ಇಂದು 10 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟಾರೆ ಡಿಸ್ಚಾರ್ಜ್ ಆದವರ ಪ್ರಮಾಣ 553 ತಲುಪಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 864 ಇದೆ.
ಇಂದು ಆರೋಗ್ಯ ಇಲಾಖೆ ಹೊಸ ರೀತಿಯಲ್ಲಿ ಹೆಲ್ತ್ ಬುಲಿಟಿನ್ ಬಿಡುಗಡೆ ಮಾಡಿದ್ದು, ಕೊರೆನಾ ಸೋಂಕು ತಗುಲಿದ್ದು ಹೇಗೆ ಎನ್ನುವುದನ್ನು ತಿಳಿಸಿಲ್ಲ.
ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ ಬರೋಬ್ಬರಿ 5,611 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,06,750ಕ್ಕೆ ಏರಿಕೆಯಾಗಿದೆ.
ಇದೇ ವೇಳೆ ಮಹಾಮಾರಿ ವೈರಸ್’ಗೆ ನಿನ್ನೆ ಒಂದೇ ದಿನ 140 ಮಂದಿ ಸಾವನ್ನಪ್ಪಿದ್ದು, ಮೃತಪಟ್ಟವರ ಸಂಖ್ಯೆ ಕೂಡ 3,303ಕ್ಕೆ ಏರಿಕೆಯಾಗಿದೆ. ದೇಶದಾದ್ಯಂತ 42,298 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…