ರಾಜ್ಯದಲ್ಲಿ ಒಂದೇ ದಿನ 53 ಕೊರೊನಾ ಪಾಸಿಟಿವ್ | ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 847 ಕ್ಕೆ ಏರಿಕೆ |

May 10, 2020
1:16 PM

ಬೆಂಗಳೂರು: ರಾಜ್ಯದಲ್ಲಿ  ಭಾನುವಾರ ಬೆಳಗ್ಗೆಯವರೆಗೆ ಅಂದರೆ 24 ಗಂಟೆಯಲ್ಲಿ 53 ಮಂದಿಗೆ ಕೊರೊನಾ ಪಾಸಿಟಿವ್ ಕಂಡುಬಂದಿದೆ. ಈ ಮೂಲಕ  ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 847ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ರಾಜ್ಯದಲ್ಲಿ ಕೇವಲ ಅರ್ಧ ದಿನದಲ್ಲಿ 53 ಕೊರೋನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಇದು ರಾಜ್ಯದಲ್ಲಿ ದಾಖಲಾಗಿರುವ ಅತಿ ಹೆಚ್ಚಿನ ಪ್ರಕರಣವಾಗಿದೆ. ಇಲ್ಲಿಯವರೆಗೆ 32 ಜನರು ಮೃತಪಟ್ಟಿದ್ದು, 405 ಮಂದಿ ಗುಣಮುಖರಾಗಿದ್ದಾರೆ.

Advertisement
Advertisement

ಹಸಿರು ವಲಯ ಶಿವಮೊಗ್ಗದಲ್ಲಿ 8 ಸೋಂಕಿತ ಪ್ರಕರಣಗಳು ದಾಖಲಾಗಿದೆ . ಅಹಮದಾಬಾದ್‌ಗೆ ಭೇಟಿ ನೀಡಿದ್ದ ಜನರಿಗೆ ಶಿವಮೊಗ್ಗದಲ್ಲಿ  ಸೋಂಕು ಕಾಣಿಸಿಕೊಂಡಿದೆ.

Advertisement

53 ಪ್ರಕರಣಗಳ ಪೈಕಿ ಬೆಳಗಾವಿ 22, ಶಿವಮೊಗ್ಗ 8, ಬೆಂಗಳೂರು 3, ಉತ್ತರ ಕನ್ನಡದ ಭಟ್ಕಳದಲ್ಲಿ 7, ಕಲಬುರಗಿ 3, ಬಾಗಲಕೋಟೆ 8, ದಾವಣಗೆರೆ 1, ಚಿಕ್ಕಬಳ್ಳಾಪುರ 1 ಕೇಸ್ ದಾಖಲಾಗಿದೆ. ಬೆಳಗಾವಿಯಲ್ಲಿ ಇಂದು ಅತಿ ಹೆಚ್ಚು ಸೋಂಕು ವರದಿಯಾಗಿದ್ದು, ಇವರೆಲ್ಲರು ರಾಜಸ್ಥಾನದ ಅಜಮೀರ್‌ಗೆ ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ.

ದೇಶದಲ್ಲಿ ಸೋಂಕಿತರ ಸಂಖ್ಯೆ 62,939ಕ್ಕೆ ಏರಿಕೆಯಾಗಿದೆ.  ವೈರಸ್’ಗೆ 2,109 ಮಂದಿ ಇದುವರೆಗೆ ಬಲಿಯಾಗಿದ್ದಾರೆ.  ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 3,277 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, 128 ಮಂದಿ ಬಲಿಯಾಗಿದ್ದಾರೆ.  ದೇಶದಲ್ಲೇ ಅತೀ ಹೆಚ್ಚು ಸೋಂಕಿತರು  ಕಂಡು ಬಂದ ಮಹಾರಾಷ್ಟ್ರ, ತಮಿಳುನಾಡು, ಗುಜರಾತ್ ನಲ್ಲಿ ಶನಿವಾರವೂ ಹೆಚ್ಚಿನ ಪ್ರ್ಕರಣಗಳು ವರದಿಯಾಗಿದೆ.

Advertisement

 

Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಏರಿದ ತಾಪಮಾನ : ರಾಜ್ಯದಲ್ಲಿ ಇಂದಿನಿಂದ 5 ದಿನ ಬೀಸಲಿದೆ ಬಿಸಿಗಾಳಿ ಎಚ್ಚರಿಕೆ..!
April 25, 2024
11:01 PM
by: The Rural Mirror ಸುದ್ದಿಜಾಲ
ನೆಲ್ಯಾಡಿ | ವಿಶ್ವವಿದ್ಯಾನಿಲಯ ಕಾಲೇಜು ಶಿಕ್ಷಕ-ರಕ್ಷಕ ಸಂಘದ ಮಹಾಸಭೆ | ನೂತನ ಪದಾಧಿಕಾರಿಗಳ ನೇಮಕ
April 25, 2024
10:12 PM
by: ದ ರೂರಲ್ ಮಿರರ್.ಕಾಂ
ಇತ್ತೀಚಿಗೆ ಮಕ್ಕಳ ಬೆಳವಣಿಗೆ ಕುಂಠಿತವಾಗುತ್ತಿದೆ | ಮಕ್ಕಳ ತೂಕ ಮತ್ತು ಎತ್ತರವನ್ನು ಹೆಚ್ಚಿಸುವ ಆಹಾರಗಳು |
April 25, 2024
3:13 PM
by: The Rural Mirror ಸುದ್ದಿಜಾಲ
ಕೊನೆಗೂ ಗಾಂಧಿ ಕುಡಿಗಳ ಕ್ಷೇತ್ರ ಫಿಕ್ಸ್‌ | ರಾಯ್ ಬರೇಲಿಯಿಂದ ಪ್ರಿಯಾಂಕಾ, ಅಮೇಥಿಯಿಂದ ರಾಹುಲ್ ಸ್ಪರ್ಧೆ ಬಹುತೇಕ ಖಚಿತ |
April 25, 2024
3:00 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror