Advertisement
ಸುದ್ದಿಗಳು

ರಾಜ್ಯದಲ್ಲಿ ಒಂದೇ ದಿನ 53 ಕೊರೊನಾ ಪಾಸಿಟಿವ್ | ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 847 ಕ್ಕೆ ಏರಿಕೆ |

Share

ಬೆಂಗಳೂರು: ರಾಜ್ಯದಲ್ಲಿ  ಭಾನುವಾರ ಬೆಳಗ್ಗೆಯವರೆಗೆ ಅಂದರೆ 24 ಗಂಟೆಯಲ್ಲಿ 53 ಮಂದಿಗೆ ಕೊರೊನಾ ಪಾಸಿಟಿವ್ ಕಂಡುಬಂದಿದೆ. ಈ ಮೂಲಕ  ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 847ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ರಾಜ್ಯದಲ್ಲಿ ಕೇವಲ ಅರ್ಧ ದಿನದಲ್ಲಿ 53 ಕೊರೋನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಇದು ರಾಜ್ಯದಲ್ಲಿ ದಾಖಲಾಗಿರುವ ಅತಿ ಹೆಚ್ಚಿನ ಪ್ರಕರಣವಾಗಿದೆ. ಇಲ್ಲಿಯವರೆಗೆ 32 ಜನರು ಮೃತಪಟ್ಟಿದ್ದು, 405 ಮಂದಿ ಗುಣಮುಖರಾಗಿದ್ದಾರೆ.

ಹಸಿರು ವಲಯ ಶಿವಮೊಗ್ಗದಲ್ಲಿ 8 ಸೋಂಕಿತ ಪ್ರಕರಣಗಳು ದಾಖಲಾಗಿದೆ . ಅಹಮದಾಬಾದ್‌ಗೆ ಭೇಟಿ ನೀಡಿದ್ದ ಜನರಿಗೆ ಶಿವಮೊಗ್ಗದಲ್ಲಿ  ಸೋಂಕು ಕಾಣಿಸಿಕೊಂಡಿದೆ.

53 ಪ್ರಕರಣಗಳ ಪೈಕಿ ಬೆಳಗಾವಿ 22, ಶಿವಮೊಗ್ಗ 8, ಬೆಂಗಳೂರು 3, ಉತ್ತರ ಕನ್ನಡದ ಭಟ್ಕಳದಲ್ಲಿ 7, ಕಲಬುರಗಿ 3, ಬಾಗಲಕೋಟೆ 8, ದಾವಣಗೆರೆ 1, ಚಿಕ್ಕಬಳ್ಳಾಪುರ 1 ಕೇಸ್ ದಾಖಲಾಗಿದೆ. ಬೆಳಗಾವಿಯಲ್ಲಿ ಇಂದು ಅತಿ ಹೆಚ್ಚು ಸೋಂಕು ವರದಿಯಾಗಿದ್ದು, ಇವರೆಲ್ಲರು ರಾಜಸ್ಥಾನದ ಅಜಮೀರ್‌ಗೆ ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ.

ದೇಶದಲ್ಲಿ ಸೋಂಕಿತರ ಸಂಖ್ಯೆ 62,939ಕ್ಕೆ ಏರಿಕೆಯಾಗಿದೆ.  ವೈರಸ್’ಗೆ 2,109 ಮಂದಿ ಇದುವರೆಗೆ ಬಲಿಯಾಗಿದ್ದಾರೆ.  ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 3,277 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, 128 ಮಂದಿ ಬಲಿಯಾಗಿದ್ದಾರೆ.  ದೇಶದಲ್ಲೇ ಅತೀ ಹೆಚ್ಚು ಸೋಂಕಿತರು  ಕಂಡು ಬಂದ ಮಹಾರಾಷ್ಟ್ರ, ತಮಿಳುನಾಡು, ಗುಜರಾತ್ ನಲ್ಲಿ ಶನಿವಾರವೂ ಹೆಚ್ಚಿನ ಪ್ರ್ಕರಣಗಳು ವರದಿಯಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

2 hours ago

ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ

ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…

2 hours ago

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

1 day ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago