Advertisement
ಸುದ್ದಿಗಳು

ರಾಜ್ಯದಲ್ಲಿ ಒಂದೇ ದಿನ 53 ಕೊರೊನಾ ಪಾಸಿಟಿವ್ | ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 847 ಕ್ಕೆ ಏರಿಕೆ |

Share

ಬೆಂಗಳೂರು: ರಾಜ್ಯದಲ್ಲಿ  ಭಾನುವಾರ ಬೆಳಗ್ಗೆಯವರೆಗೆ ಅಂದರೆ 24 ಗಂಟೆಯಲ್ಲಿ 53 ಮಂದಿಗೆ ಕೊರೊನಾ ಪಾಸಿಟಿವ್ ಕಂಡುಬಂದಿದೆ. ಈ ಮೂಲಕ  ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 847ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ರಾಜ್ಯದಲ್ಲಿ ಕೇವಲ ಅರ್ಧ ದಿನದಲ್ಲಿ 53 ಕೊರೋನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಇದು ರಾಜ್ಯದಲ್ಲಿ ದಾಖಲಾಗಿರುವ ಅತಿ ಹೆಚ್ಚಿನ ಪ್ರಕರಣವಾಗಿದೆ. ಇಲ್ಲಿಯವರೆಗೆ 32 ಜನರು ಮೃತಪಟ್ಟಿದ್ದು, 405 ಮಂದಿ ಗುಣಮುಖರಾಗಿದ್ದಾರೆ.

ಹಸಿರು ವಲಯ ಶಿವಮೊಗ್ಗದಲ್ಲಿ 8 ಸೋಂಕಿತ ಪ್ರಕರಣಗಳು ದಾಖಲಾಗಿದೆ . ಅಹಮದಾಬಾದ್‌ಗೆ ಭೇಟಿ ನೀಡಿದ್ದ ಜನರಿಗೆ ಶಿವಮೊಗ್ಗದಲ್ಲಿ  ಸೋಂಕು ಕಾಣಿಸಿಕೊಂಡಿದೆ.

53 ಪ್ರಕರಣಗಳ ಪೈಕಿ ಬೆಳಗಾವಿ 22, ಶಿವಮೊಗ್ಗ 8, ಬೆಂಗಳೂರು 3, ಉತ್ತರ ಕನ್ನಡದ ಭಟ್ಕಳದಲ್ಲಿ 7, ಕಲಬುರಗಿ 3, ಬಾಗಲಕೋಟೆ 8, ದಾವಣಗೆರೆ 1, ಚಿಕ್ಕಬಳ್ಳಾಪುರ 1 ಕೇಸ್ ದಾಖಲಾಗಿದೆ. ಬೆಳಗಾವಿಯಲ್ಲಿ ಇಂದು ಅತಿ ಹೆಚ್ಚು ಸೋಂಕು ವರದಿಯಾಗಿದ್ದು, ಇವರೆಲ್ಲರು ರಾಜಸ್ಥಾನದ ಅಜಮೀರ್‌ಗೆ ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ.

ದೇಶದಲ್ಲಿ ಸೋಂಕಿತರ ಸಂಖ್ಯೆ 62,939ಕ್ಕೆ ಏರಿಕೆಯಾಗಿದೆ.  ವೈರಸ್’ಗೆ 2,109 ಮಂದಿ ಇದುವರೆಗೆ ಬಲಿಯಾಗಿದ್ದಾರೆ.  ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 3,277 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, 128 ಮಂದಿ ಬಲಿಯಾಗಿದ್ದಾರೆ.  ದೇಶದಲ್ಲೇ ಅತೀ ಹೆಚ್ಚು ಸೋಂಕಿತರು  ಕಂಡು ಬಂದ ಮಹಾರಾಷ್ಟ್ರ, ತಮಿಳುನಾಡು, ಗುಜರಾತ್ ನಲ್ಲಿ ಶನಿವಾರವೂ ಹೆಚ್ಚಿನ ಪ್ರ್ಕರಣಗಳು ವರದಿಯಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

16 hours ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

21 hours ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

2 days ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 days ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

2 days ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

3 days ago