ಮಂಗಳೂರು: ಕೋವಿಡ್-19 ಸೋಂಕಿತರ ಸಂಖ್ಯೆ ರಾಜ್ಯದಲ್ಲಿ ಶನಿವಾರ 4 ಹೊಸ ಪ್ರಕರಣ ಬೆಳಕಿಗೆ ಬರುವ ಮೂಲಕ ಒಟ್ಟು 19 ಮಂದಿ ಈಗ ಬಾಧಿತರಾಗಿದ್ದಾರೆ. ಶನಿವಾರ ಬೆಂಗಳೂರಿನಲ್ಲಿ ಮೂರು ಹೊಸ ಪ್ರಕರಣ ಹಾಗೂ ಚಿಕ್ಕಬಳ್ಳಾಪುರ ಗೌರಿಬಿದನೂರಿನಲ್ಲಿ ಒಂದು ಪ್ರಕರಣ ದೃಢವಾಗಿರುವುದು ವರದಿಯಾಗಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಒಟ್ಟು ಸಂಖ್ಯೆ 19ಕ್ಕೇ ಏರಿದೆ. ದೇಶದಲ್ಲಿ ಒಟ್ಟು 271 ಕೋವಿಡ್-19 ಪ್ರಕರಣಗಳು ಪತ್ತೆಯಾಗಿದೆ.
ದಕ್ಷಿಣ ಕನ್ನಡದಲ್ಲಿ ಈವರೆಗೆ ಕೋವಿಡ್-19 ಪಾಸಿಟಿವ್ ಪ್ರಕರಣ ದೃಢ ಪಟ್ಟಿಲ್ಲ. 89 ಜನರನ್ನು ಪರೀಕ್ಷಿಸಲಾಗಿದೆ, ಇದರಲ್ಲಿ 79 ಜನರಲ್ಲಿ ಕೋವಿಡ್-19 ನೆಗೆಟಿವ್ ಇದ್ದರೆ 10 ಜನರ ವರದಿ ಕಾಯಲಾಗುತ್ತಿದೆ. ಈಗ ಜನರು ಭಯಗೊಳ್ಳುವುದಕ್ಕಿಂತಲೂ ಜಾಗ್ರತೆ ವಹಿಸಬೇಕಿದೆ. ಮುಂಜಾಗ್ರತಾ ಕ್ರಮಗಳಿಂದ ಕೋವಿಡ್-19 ಮುಕ್ತ ಜಿಲ್ಲೆಯಾಗಿಸಬಹುದಾಗಿದೆ.
ಕೊರೋನ(ಕೋವಿಡ್-19) ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಮಾ.21 ರಿಂದ ಮಾ.31ರ ಮಧ್ಯರಾತ್ರಿವರೆಗೆ ಕೇರಳದ ಗಡಿಭಾಗದಲ್ಲಿ ಎಲ್ಲಾ ರೀತಿಯ ವಾಹನಗಳ ಸಂಚಾರ ನಿಷೇಧಿಸಿ ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಆದೇಶ ಹೊರಡಿಸಿದ್ದಾರೆ. ಕಾಸರಗೋಡು ಜಿಲ್ಲೆಯಲ್ಲಿ ಈಗಾಗಲೇ 6 ಕೊರೋನಾ ಪ್ರಕರಣಗಳು ವೈದ್ಯಕೀಯ ತಪಾಸಣೆಯಿಂದ ವರದಿಯಾದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ – ಕೇರಳ ರಾಜ್ಯದ ಕಾಸರಗೋಡು ಗಡಿ ಭಾಗದಲ್ಲಿ ಸಂಚರಿಸುವ ಎಲ್ಲಾರೀತಿಯ ವಾಹನಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಅಸಹಜ ಚಲನೆಯ ಕಾರಣದಿಂದ ಕರಾವಳಿ ಭಾಗಗಳಲ್ಲಿ ಹೆಚ್ಚು ಮಳೆಯಾಗುತ್ತಿದೆ.
ಅಡಿಕೆ ಬೆಳೆಗೆ ಪರ್ಯಾಯವಾಗಿ ಅಥವಾ ಉಪಬೆಳೆಯಾಗಿ ತಾಳೆ ಬೆಳೆಯನ್ನು ಬೆಳೆಯುವ ಬಗ್ಗೆ ಈಗಾಗಲೇ…
ಹವಾಮಾನ ಬದಲಾವಣೆಯಿಂದ ಹಾಗೂ ತಾಪಮಾನದ ದಿಢೀರ್ ಬದಲಾವಣೆಗಳು ನಿದ್ರೆಯಲ್ಲಿ ಉಸಿರುಕಟ್ಟುವಿಕೆ ಪ್ರಕರಣ ಹೆಚ್ಚಾಗುತ್ತಿದೆ…
ಕ್ಯಾಂಪ್ಕೋದಿಂದ ಸಂಗ್ರಹಿಸುತ್ತಿರುವ ಶೇಕಡ 0.48ರಷ್ಟು ಮಾರುಕಟ್ಟೆ ಶುಲ್ಕದಲ್ಲಿ ಯಾವುದೇ ಬದಲಾವಣೆ ಮಾಡಬಾರದೆಂಬ ಸಂಸ್ಥೆಯ…
ಹಲಸಿನ ಬೀಜದ ಪರೋಟ : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಹಲಸಿನ…
ವೈದಿಕ ಜ್ಯೋತಿಷ್ಯದಲ್ಲಿ ಮಂಗಳ ಗ್ರಹವು ಶಕ್ತಿ, ಧೈರ್ಯ, ಮತ್ತು ಆಕ್ರಮಣಕಾರಿ ನಿರ್ಧಾರಗಳ ಸಂಕೇತವಾಗಿದೆ.…