Advertisement
ಸುದ್ದಿಗಳು

ರಾಜ್ಯದಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 19 | ಭಯ ಬೇಡ – ಇರಲಿ ಎಚ್ಚರ | ಕೋವಿಡ್-19  ಹರಡುವ ಮಾರ್ಗವನ್ನು ಬ್ರೇಕ್ ಮಾಡಿ

Share

ಮಂಗಳೂರು: ಕೋವಿಡ್-19  ಸೋಂಕಿತರ ಸಂಖ್ಯೆ ರಾಜ್ಯದಲ್ಲಿ ಶನಿವಾರ 4 ಹೊಸ ಪ್ರಕರಣ ಬೆಳಕಿಗೆ ಬರುವ ಮೂಲಕ ಒಟ್ಟು 19 ಮಂದಿ ಈಗ ಬಾಧಿತರಾಗಿದ್ದಾರೆ. ಶನಿವಾರ ಬೆಂಗಳೂರಿನಲ್ಲಿ ಮೂರು ಹೊಸ ಪ್ರಕರಣ ಹಾಗೂ ಚಿಕ್ಕಬಳ್ಳಾಪುರ ಗೌರಿಬಿದನೂರಿನಲ್ಲಿ ಒಂದು ಪ್ರಕರಣ   ದೃಢವಾಗಿರುವುದು ವರದಿಯಾಗಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಒಟ್ಟು ಸಂಖ್ಯೆ 19ಕ್ಕೇ ಏರಿದೆ. ದೇಶದಲ್ಲಿ ಒಟ್ಟು 271 ಕೋವಿಡ್-19  ಪ್ರಕರಣಗಳು ಪತ್ತೆಯಾಗಿದೆ.

Advertisement
Advertisement
Advertisement
Advertisement
Advertisement

ದಕ್ಷಿಣ ಕನ್ನಡದಲ್ಲಿ ಈವರೆಗೆ ಕೋವಿಡ್-19 ಪಾಸಿಟಿವ್ ಪ್ರಕರಣ ದೃಢ ಪಟ್ಟಿಲ್ಲ.  89 ಜನರನ್ನು ಪರೀಕ್ಷಿಸಲಾಗಿದೆ, ಇದರಲ್ಲಿ 79 ಜನರಲ್ಲಿ  ಕೋವಿಡ್-19 ನೆಗೆಟಿವ್ ಇದ್ದರೆ  10 ಜನರ ವರದಿ ಕಾಯಲಾಗುತ್ತಿದೆ.  ಈಗ ಜನರು ಭಯಗೊಳ್ಳುವುದಕ್ಕಿಂತಲೂ ಜಾಗ್ರತೆ ವಹಿಸಬೇಕಿದೆ. ಮುಂಜಾಗ್ರತಾ ಕ್ರಮಗಳಿಂದ ಕೋವಿಡ್-19 ಮುಕ್ತ ಜಿಲ್ಲೆಯಾಗಿಸಬಹುದಾಗಿದೆ.

Advertisement

ಕೊರೋನ(ಕೋವಿಡ್-19) ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಮಾ.21 ರಿಂದ  ಮಾ.31ರ ಮಧ್ಯರಾತ್ರಿವರೆಗೆ ಕೇರಳದ ಗಡಿಭಾಗದಲ್ಲಿ ಎಲ್ಲಾ ರೀತಿಯ ವಾಹನಗಳ ಸಂಚಾರ ನಿಷೇಧಿಸಿ ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಆದೇಶ ಹೊರಡಿಸಿದ್ದಾರೆ. ಕಾಸರಗೋಡು ಜಿಲ್ಲೆಯಲ್ಲಿ ಈಗಾಗಲೇ 6 ಕೊರೋನಾ ಪ್ರಕರಣಗಳು ವೈದ್ಯಕೀಯ ತಪಾಸಣೆಯಿಂದ ವರದಿಯಾದ ಹಿನ್ನೆಲೆಯಲ್ಲಿ  ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ – ಕೇರಳ ರಾಜ್ಯದ ಕಾಸರಗೋಡು ಗಡಿ ಭಾಗದಲ್ಲಿ ಸಂಚರಿಸುವ ಎಲ್ಲಾರೀತಿಯ ವಾಹನಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಸ್ಸಾಂನಲ್ಲಿ ವಶಪಡಿಸಿಕೊಂಡ 60,000 ಕೆಜಿಗೂ ಹೆಚ್ಚು ಅಡಿಕೆಯ ಒಡೆಯರು ಯಾರು…? | ಅಧಿಕಾರಿಗಳಿಗೆ ತಲೆನೋವಾದ ಅಡಿಕೆ…! |

ಅಸ್ಸಾಂನ ಕ್ಯಾಚರ್ ಜಿಲ್ಲೆಯ ಲಖಿಪುರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ವಶಪಡಿಸಿಕೊಂಡ ಸುಮಾರು…

8 hours ago

ಹೊಸರುಚಿ | ಗುಜ್ಜೆ ಕಟ್ಲೇಟ್

ಗುಜ್ಜೆ ಕಟ್ಲೇಟ್ ಮಾಡುವ ವಿಧಾನದ ಬಗ್ಗೆ ಗೃಹಿಣಿ ದಿವ್ಯಮಹೇಶ್‌ ಅವರು ಇಲ್ಲಿ ವಿವರ…

9 hours ago

ಕುಂಭಮೇಳ | ಪ್ರಯಾಗ ತಲಪುವಾಗ ಸಂತಸವೇ ಸಂತಸ…

ಪ್ರಯಾಗ್‌ ರಾಜ್‌ ತಲಪುವ ವೇಳೆ ಆಗುತ್ತಿರುವ ಸಂತಸದ ಬಗ್ಗೆ ಸುರೇಶ್ಚಂದ್ರ ಅವರು ಬರೆದಿದ್ದಾರೆ…

10 hours ago

ಮನೆಯಲ್ಲಿ ಮಕ್ಕಳಿಗೆ ಸ್ಟ್ರಾಂಗ್ ಫಾದರ್ ಮತ್ತು ಕಲ್ಚರ್ಡ್ ಮದರ್ ಇರಬೇಕು

ಶಿಕ್ಷಣವೆಂದರೆ ಅದು ಹಣ ಕೊಟ್ಟು ಪಡೆಯುವ ವಸ್ತುವಿನಂತೆ ಬಿಕರಿಯಾಗುತ್ತಿದೆ. ಈ ದೃಷ್ಠಿಯಿಂದ ಶಿಕ್ಷಣ…

10 hours ago

ಮಾರ್ಚ್ ಆರಂಭದಲ್ಲೇ ರಾಜ್ಯದ ತಾಪಮಾನ ಭಾರೀ ಪ್ರಮಾಣದಲ್ಲಿ ಹೆಚ್ಚಳ

ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…

2 days ago