ಮಂಗಳೂರು: ಕೋವಿಡ್-19 ಸೋಂಕಿತರ ಸಂಖ್ಯೆ ರಾಜ್ಯದಲ್ಲಿ ಶನಿವಾರ 4 ಹೊಸ ಪ್ರಕರಣ ಬೆಳಕಿಗೆ ಬರುವ ಮೂಲಕ ಒಟ್ಟು 19 ಮಂದಿ ಈಗ ಬಾಧಿತರಾಗಿದ್ದಾರೆ. ಶನಿವಾರ ಬೆಂಗಳೂರಿನಲ್ಲಿ ಮೂರು ಹೊಸ ಪ್ರಕರಣ ಹಾಗೂ ಚಿಕ್ಕಬಳ್ಳಾಪುರ ಗೌರಿಬಿದನೂರಿನಲ್ಲಿ ಒಂದು ಪ್ರಕರಣ ದೃಢವಾಗಿರುವುದು ವರದಿಯಾಗಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಒಟ್ಟು ಸಂಖ್ಯೆ 19ಕ್ಕೇ ಏರಿದೆ. ದೇಶದಲ್ಲಿ ಒಟ್ಟು 271 ಕೋವಿಡ್-19 ಪ್ರಕರಣಗಳು ಪತ್ತೆಯಾಗಿದೆ.
ದಕ್ಷಿಣ ಕನ್ನಡದಲ್ಲಿ ಈವರೆಗೆ ಕೋವಿಡ್-19 ಪಾಸಿಟಿವ್ ಪ್ರಕರಣ ದೃಢ ಪಟ್ಟಿಲ್ಲ. 89 ಜನರನ್ನು ಪರೀಕ್ಷಿಸಲಾಗಿದೆ, ಇದರಲ್ಲಿ 79 ಜನರಲ್ಲಿ ಕೋವಿಡ್-19 ನೆಗೆಟಿವ್ ಇದ್ದರೆ 10 ಜನರ ವರದಿ ಕಾಯಲಾಗುತ್ತಿದೆ. ಈಗ ಜನರು ಭಯಗೊಳ್ಳುವುದಕ್ಕಿಂತಲೂ ಜಾಗ್ರತೆ ವಹಿಸಬೇಕಿದೆ. ಮುಂಜಾಗ್ರತಾ ಕ್ರಮಗಳಿಂದ ಕೋವಿಡ್-19 ಮುಕ್ತ ಜಿಲ್ಲೆಯಾಗಿಸಬಹುದಾಗಿದೆ.
ಕೊರೋನ(ಕೋವಿಡ್-19) ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಮಾ.21 ರಿಂದ ಮಾ.31ರ ಮಧ್ಯರಾತ್ರಿವರೆಗೆ ಕೇರಳದ ಗಡಿಭಾಗದಲ್ಲಿ ಎಲ್ಲಾ ರೀತಿಯ ವಾಹನಗಳ ಸಂಚಾರ ನಿಷೇಧಿಸಿ ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಆದೇಶ ಹೊರಡಿಸಿದ್ದಾರೆ. ಕಾಸರಗೋಡು ಜಿಲ್ಲೆಯಲ್ಲಿ ಈಗಾಗಲೇ 6 ಕೊರೋನಾ ಪ್ರಕರಣಗಳು ವೈದ್ಯಕೀಯ ತಪಾಸಣೆಯಿಂದ ವರದಿಯಾದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ – ಕೇರಳ ರಾಜ್ಯದ ಕಾಸರಗೋಡು ಗಡಿ ಭಾಗದಲ್ಲಿ ಸಂಚರಿಸುವ ಎಲ್ಲಾರೀತಿಯ ವಾಹನಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…