ಮಂಗಳೂರು: ಕೋವಿಡ್-19 ಸೋಂಕಿತರ ಸಂಖ್ಯೆ ರಾಜ್ಯದಲ್ಲಿ ಶನಿವಾರ 4 ಹೊಸ ಪ್ರಕರಣ ಬೆಳಕಿಗೆ ಬರುವ ಮೂಲಕ ಒಟ್ಟು 19 ಮಂದಿ ಈಗ ಬಾಧಿತರಾಗಿದ್ದಾರೆ. ಶನಿವಾರ ಬೆಂಗಳೂರಿನಲ್ಲಿ ಮೂರು ಹೊಸ ಪ್ರಕರಣ ಹಾಗೂ ಚಿಕ್ಕಬಳ್ಳಾಪುರ ಗೌರಿಬಿದನೂರಿನಲ್ಲಿ ಒಂದು ಪ್ರಕರಣ ದೃಢವಾಗಿರುವುದು ವರದಿಯಾಗಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಒಟ್ಟು ಸಂಖ್ಯೆ 19ಕ್ಕೇ ಏರಿದೆ. ದೇಶದಲ್ಲಿ ಒಟ್ಟು 271 ಕೋವಿಡ್-19 ಪ್ರಕರಣಗಳು ಪತ್ತೆಯಾಗಿದೆ.
ದಕ್ಷಿಣ ಕನ್ನಡದಲ್ಲಿ ಈವರೆಗೆ ಕೋವಿಡ್-19 ಪಾಸಿಟಿವ್ ಪ್ರಕರಣ ದೃಢ ಪಟ್ಟಿಲ್ಲ. 89 ಜನರನ್ನು ಪರೀಕ್ಷಿಸಲಾಗಿದೆ, ಇದರಲ್ಲಿ 79 ಜನರಲ್ಲಿ ಕೋವಿಡ್-19 ನೆಗೆಟಿವ್ ಇದ್ದರೆ 10 ಜನರ ವರದಿ ಕಾಯಲಾಗುತ್ತಿದೆ. ಈಗ ಜನರು ಭಯಗೊಳ್ಳುವುದಕ್ಕಿಂತಲೂ ಜಾಗ್ರತೆ ವಹಿಸಬೇಕಿದೆ. ಮುಂಜಾಗ್ರತಾ ಕ್ರಮಗಳಿಂದ ಕೋವಿಡ್-19 ಮುಕ್ತ ಜಿಲ್ಲೆಯಾಗಿಸಬಹುದಾಗಿದೆ.
ಕೊರೋನ(ಕೋವಿಡ್-19) ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಮಾ.21 ರಿಂದ ಮಾ.31ರ ಮಧ್ಯರಾತ್ರಿವರೆಗೆ ಕೇರಳದ ಗಡಿಭಾಗದಲ್ಲಿ ಎಲ್ಲಾ ರೀತಿಯ ವಾಹನಗಳ ಸಂಚಾರ ನಿಷೇಧಿಸಿ ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಆದೇಶ ಹೊರಡಿಸಿದ್ದಾರೆ. ಕಾಸರಗೋಡು ಜಿಲ್ಲೆಯಲ್ಲಿ ಈಗಾಗಲೇ 6 ಕೊರೋನಾ ಪ್ರಕರಣಗಳು ವೈದ್ಯಕೀಯ ತಪಾಸಣೆಯಿಂದ ವರದಿಯಾದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ – ಕೇರಳ ರಾಜ್ಯದ ಕಾಸರಗೋಡು ಗಡಿ ಭಾಗದಲ್ಲಿ ಸಂಚರಿಸುವ ಎಲ್ಲಾರೀತಿಯ ವಾಹನಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಹಿತವಾದ ಆಹಾರವನ್ನು ಮಿತ ಪ್ರಮಾಣದಲ್ಲಿ ಮತ್ತು ಸಕಾಲದಲ್ಲಿ ಸೇವಿಸುವುದು ಆರೋಗ್ಯಕರ ಜೀವನದ ಮೂಲಮಂತ್ರ…
ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು, ಐಟಿಐ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 1ರವರೆಗೆ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ…
ಸುಳ್ಯ ತಾಲೂಕಿನ ಬಾಳುಗೋಡು, ಹರಿಹರ, ಬಳ್ಪ, ಗುತ್ತಿಗಾರು, ಸುಬ್ರಹ್ಮಣ್ಯ ಸೇರಿದಂತೆ ಹಲವು ಗ್ರಾಮಗಳಲ್ಲಿ…
ಬಾಂಗ್ಲಾದೇಶದ ವಿಜ್ಞಾನಿಗಳು ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ ತಯಾರಿಸುವ ತಂತ್ರಜ್ಞಾನಕ್ಕೆ ಪೇಟೆಂಟ್…
ಭಾರತದ ಕೃಷಿ ರಫ್ತು ಉತ್ಪನ್ನಗಳ ಸಂಖ್ಯೆ 280ರಿಂದ ಸುಮಾರು 500ಕ್ಕೆ ಏರಿಕೆಯಾಗಿದೆ. ₹4.61…