ರಾಜ್ಯದಲ್ಲಿ ದ್ವಿತೀಯ ಸ್ಥಾನ ಪಡೆದ ಚಿನ್ಮಯಿಗೆ ಅಭಿನಂದನೆ

May 3, 2019
11:01 AM

ಪುತ್ತೂರು: ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿ ದ್ವಿತೀಯ ಸ್ಥಾನ ಪಡೆದ ವಿಟ್ಲ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾಥಿನಿ ಚಿನ್ಮಯಿ ಅವರನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿ ವತಿಯಿಂದ ಅಭಿನಂದಿಸಲಾಯಿತು.

ಕಾಲೇಜಿನ ಆಡಳಿತ ಮಂಡಳಿಯ ಸದಸ್ಯ ರವಿ ಮುಂಗ್ಲಿಮನೆ ಚಿನ್ಮಯಿ ಅವರನ್ನು ಅಭಿನಂದಿಸಿದರು. ಅಭಿನಂದನೆಯನ್ನು ಸ್ವೀಕರಿಸಿ ಮಾತನಾಡಿದ ಚಿನ್ಮಯಿ “ತಮ್ಮ ಪಿಯುಸಿ ಶಿಕ್ಷಣವನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಮುಂದುವರಿಸಿ ವಿಜ್ಞಾನ ಕ್ಷೇತ್ರದಲ್ಲಿ ಕಂಪ್ಯೂಟರ್ ಸೈಯನ್ಸ್ ವಿಷಯವನ್ನು ಆಯ್ಕೆಮಾಡಿ ಪಿಎಚ್‍ಡಿ ಮಾಡಬೇಕೆಂಬ ಗುರಿಯನ್ನು ಹೊಂದಿದ್ದೇನೆ. ಆ ಬಳಿಕ ಉಪನ್ಯಾಸಕ ವೃತ್ತಿಗೆ ಬರಬೇಕೆಂಬ ಕನಸನ್ನು ಹೊಂದಿದ್ದೇನೆ” ಎಂದು ಹೇಳಿದರು.

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ| ಸಿ ಕೆ. ಮಂಜುನಾಥ್, ಚಿನ್ಮಯಿ ತಂದೆ ರಾಜ್ ನಾರಾಯಣ ಮತ್ತು ತಾಯಿ ಗೀತಾ ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ
July 14, 2026
6:53 AM
by: ದ ರೂರಲ್ ಮಿರರ್.ಕಾಂ
ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ
July 14, 2026
6:47 AM
by: ದ ರೂರಲ್ ಮಿರರ್.ಕಾಂ
ಮುಂಗಾರು ಬೆಳೆ ಸಮೀಕ್ಷೆ ಆರಂಭ | ರೈತರೇ ಮೊಬೈಲ್‌ ಮೂಲಕ ಬೆಳೆ ವಿವರ ದಾಖಲಿಸಿ – ಕೃಷಿ ಇಲಾಖೆ ಮನವಿ
July 7, 2026
8:41 PM
by: ಮಿರರ್‌ ಡೆಸ್ಕ್‌
ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ – ಜುಲೈ 2 ರಂದು ಅಂಗನವಾಡಿ, ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
July 1, 2026
6:41 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror