ಮಂಗಳೂರು: ರಾಜ್ಯದಲ್ಲಿ ವರುಣನ ಅಬ್ಬರ ಶುಕ್ರವಾರವೂ ಮುಂದುವರೆದಿದ್ದು, ಕರಾವಳಿ, ಮಲೆನಾಡು, ಮಧ್ಯ ಕರ್ನಾಟಕ, ಉತ್ತರ ಕರ್ನಾಟಕ ಸೇರಿದಂತೆ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಜನಜೀವನ ಇನ್ನಷ್ಟು ಸಂಕಷ್ಟಕ್ಕೆ ಸಿಲುಕಿದೆ.
ಕಳೆದ ವರ್ಷದಂತೆ ಕರ್ನಾಟಕಕ್ಕೆ ಮತ್ತೆ ಜಲಕಂಟಕ ಎದುರಾಗುವ ಭೀತಿ ಇದೆ. ಕಾರ್ಯಾಚರಣೆಗೆ ಕೂಡಾ ಮಳೆ ಅಡ್ಡಿಯಾಗುತ್ತಿದೆ. ರೈತರು ಬೆಳೆದ ಬೆಳೆಗಳು, ಮನೆಗಳು ಕೊಚ್ಚಿಹೋಗಿವೆ. ರಸ್ತೆಗಳು ಕುಸಿದು ಬಿದ್ದಿದ್ದು, ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಕೆಲವು ಪ್ರದೇಶಗಳು ಹೊರ ಜಗತ್ತಿನ ಸಂಪರ್ಕವನ್ನೇ ಕಳೆದುಕೊಂಡಿವೆ. ಜಿಲ್ಲಾಡಳಿತಕ್ಕೆ ಕಾರ್ಯಾಚಾರಣೆ ನಡೆಸಲು ಮಳೆ ಅಡ್ಡಿಯಾಗಿರುವುದರಿಂದ ಸಂತ್ರಸ್ಥರ ಪರಿಸ್ಥಿತಿ ಶೋಚನೀಯವಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಮಡಿಕೇರಿ, ಹಾಸನ ,ಚಿಕ್ಕಮಗಳೂರು, ಉತ್ತರ ಕನ್ನಡ, ಶಿವಮೊಗ್ಗ, ಗದಗ, ಧಾರವಾಡ, ಬೆಳಗಾವಿ , ರಾಯಚೂರು ಸೇರಿದಂತೆ ಸುಮಾರು 12 ಕ್ಕೂ ಹೆಚ್ಚು ಜಿಲ್ಲೆಗಳು ಮಹಾಮಳೆಗೆ ಸಿಲುಕಿವೆ. ನದಿಗಳು,ಹಳ್ಳ, ಕೊಳ್ಳಗಳು ಆಪಾಯದ ಮಟ್ಟ ಮೀರಿ ಹರಿಯುತ್ತಿವೆ. ಮಹಾಮಳೆಗೆ ಈವರೆಗೂ ಒಟ್ಟು 10 ಮಂದಿ ಸಾವನ್ನಪ್ಪಿದ್ದು, ಸಾವಿರಾರು ಜನರು ಮನೆ, ಮಠ, ಆಸ್ತಿಪಾಸ್ತಿ ಕಳೆದುಕೊಂಡು ನಿರ್ಗತಿಕರಾಗಿದ್ದಾರೆ.
ತುಂಗಭದ್ರ, ಕಾವೇರಿ, ಭದ್ರಾ, ನೇತ್ರಾವತಿ, ಕುಮಾರಧಾರ, ಕೃಷ್ಣ ಸೇರಿದಂತೆ ಪ್ರಮುಖ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…
ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…
ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…