MIRROR FOCUS

ರಾಜ್ಯದಲ್ಲಿ ವಾಣಿಜ್ಯ ತೆರಿಗೆ ಇಲಾಖೆ ಸಂಗ್ರಹ ಗುರಿ 76,046 ಕೋಟಿ ರೂ : ಅಬಕಾರಿಯಲ್ಲಿ 20,950 ಕೋಟಿ ರೂಪಾಯಿ ಗುರಿ..!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ರಾಜ್ಯದ ತೆರಿಗೆ ಸಂಗ್ರಹಣಾ ಇಲಾಖೆಗಳಾದ ವಾಣಿಜ್ಯ ತೆರಿಗೆ ಇಲಾಖೆ, ಅಬಕಾರಿ ಇಲಾಖೆ, ಸಾರಿಗೆ ಇಲಾಖೆ ಮತ್ತು ನೋಂದಣಿ ಮತ್ತು ಮುದ್ರಾಂಕ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು. ಇದೊಂದು ಕುತೂಹಲದ ಸಂಗತಿ. ಈ ಕಡೆಗೆ ಫೋಕಸ್..

Advertisement

ವಾಣಿಜ್ಯ ತೆರಿಗೆ ಇಲಾಖೆ: ವಾಣಿಜ್ಯ ತೆರಿಗೆ ಇಲಾಖೆಯ ಈ ವರ್ಷದ ತೆರಿಗೆ ಸಂಗ್ರಹ ಗುರಿ 76,046 ಕೋಟಿ ರೂ. ಆಗಿದ್ದು, ಈ ವರೆಗೆ 33,618 ಕೋಟಿ ರೂ. ತೆರಿಗೆ ಸಂಗ್ರಹ ಆಗಿದೆ. ಇದು ವಾರ್ಷಿಕ ಗುರಿಯ ಶೇ. 44.2 ರಷ್ಟು ಇದೆ. ಕಳೆದ ವರ್ಷ ಇದೇ ಅವಧಿಯ ತೆರಿಗೆ ಸಂಗ್ರಹಕ್ಕೆ ಹೋಲಿಸಿದರೆ, ಶೇ. 20.3 ರಷ್ಟು ಹೆಚ್ಚಳ ಆಗಿದೆ. ಜಿಎಸ್‍ಟಿ ತೆರಿಗೆ ಸಂಗ್ರಹದಲ್ಲಿಯೂ ಶೇ. 14.3 ರಷ್ಟು ಬೆಳವಣಿಗೆ ಆಗಿದೆ.

ಜಿಎಸ್‍ಟಿ ಜಾರಿಯಾದಾಗ 4.51 ಲಕ್ಷ ಮಂದಿ/ ಕಂಪೆನಿಗಳು ಜಿಎಸ್‍ಟಿಯಲ್ಲಿ ನೋಂದಾಯಿಸಿಕೊಂಡಿದ್ದರು. ಈಗ ನೋಂದಣಿ ಮಾಡಿಕೊಂಡವರ ಸಂಖ್ಯೆ 8,16,573 ದಾಟಿದ್ದು, ಜಿಎಸ್‍ಟಿಯಲ್ಲಿ ನೋಂದಾಯಿಸಿಕೊಂಡವರ ಸಂಖ್ಯೆ ಸುಮಾರು ಶೇ. 100 ರಷ್ಟು ಹೆಚ್ಚಳವಾಗಿದೆ.ಜಿಎಸ್‍ಟಿ ಪಾವತಿಯಲ್ಲಿ ನಿರ್ಲಕ್ಷ್ಯ ತೋರಿದ 64 ಸಾವಿರಕ್ಕೂ ಹೆಚ್ಚು ಲೈಸನ್ಸ್‍ಗಳನ್ನು ರದ್ದುಪಡಿಸಲಾಗಿದೆ. ಈ ಸಾಲಿನಲ್ಲಿ 44 ಲಕ್ಷ ಇ-ವೇ ಬಿಲ್‍ಗಳನ್ನು ತಪಾಸಣೆ ಮಾಡಲಾಗಿದೆ.

ಅಬಕಾರಿ ಇಲಾಖೆ: ಅಬಕಾರಿ ಇಲಾಖೆಯಲ್ಲಿ 2019-2020ನೇ ಸಾಲಿಗೆ 20950 ಕೋಟಿ ರೂ. ತೆರಿಗೆ ಸಂಗ್ರಹದ ಗುರಿ ನಿಗದಿಪಡಿಸಲಾಗಿದೆ.ಏಪ್ರಿಲ್ 1 ರಿಂದ ಆಗಸ್ಟ್ 30 ರ ವರೆಗೆ 9145.36 ಕೋಟಿ ರೂ. ತೆರಿಗೆ ಸಂಗ್ರಹವಾಗಿದ್ದು, ಶೇ. 43.65 ರಷ್ಟು ಗುರಿ ಸಾಧನೆಯಾಗಿದೆ.ತೆರಿಗೆ ಸಂಗ್ರಹದಲ್ಲಿ ಕಳೆದ ವರ್ಷಕ್ಕಿಂತ 952.70 ಕೋಟಿ ರೂ. ಹೆಚ್ಚುವರಿ ಮೊತ್ತ ಸಂಗ್ರಹವಾಗಿದ್ದು, ಶೇ. 11.63 ರಷ್ಟು ಹೆಚ್ಚಳವಾಗಿದೆ.

ಸಾರಿಗೆ ಇಲಾಖೆ:ಸಾರಿಗೆ ಇಲಾಖೆ ಹಾಗೂ ಸಾರಿಗೆ ನಿಗಮಗಳ ತೆರಿಗೆ ಸಂಗ್ರಹದ ವಾರ್ಷಿಕ ಗುರಿ 7100 ಕೋಟಿ ರೂ. ಗಳಷ್ಟಿದ್ದು, ಆಗಸ್ಟ್ 30 ರ ವರೆಗೆ 2750.82 ಕೋಟಿ ರೂ. ತೆರಿಗೆ ಸಂಗ್ರಹದ ಗುರಿ ನಿಗದಿ ಪಡಿಸಲಾಗಿತ್ತು.ಅದರಲ್ಲಿ 2476 ಕೋಟಿ ರೂ. ತೆರಿಗೆ ಸಂಗ್ರವಾಗಿದ್ದು, ತೆರಿಗೆ ಸಂಗ್ರಹ ನಿಗದಿತ ಗುರಿಯ ಶೇ. 90 ರಷ್ಟಾಗಿದೆ.ವಾಹನ ಮಾರಾಟದಲ್ಲಿ ಸಾರಿಗೆ ಮತ್ತು ಸಾರಿಗೇತರ ವಾಹನಗಳ ನೋಂದಣಿಯಲ್ಲಿ ಶೇ. 10.34 ರಷ್ಟು ಕಡಿಮೆಯಾಗಿದೆ. ಇದರಿಂದಾಗಿ ತೆರಿಗೆ ಸಂಗ್ರಹದಲ್ಲಿ ವ್ಯತ್ಯಯವಾಗಿದೆ.

Advertisement

ಸಂಚಾರ ನಿಯಮ ಹಾಗೂ ಮೋಟಾರು ವಾಹನ ಕಾಯಿದೆ ಉಲ್ಲಂಘನೆಗೆ ಸಂಬಂಧಿಸಿದಂತೆ ದಂಡದ ಮೊತ್ತವನ್ನು ಇಳಿಸುವ ಬಗ್ಗೆ ಗುಜರಾತ್ ಸರ್ಕಾರ ಹೊರಡಿಸಿರುವ ಆದೇಶವನ್ನು ತರಿಸಿಕೊಂಡು ಪರಿಶೀಲಿಸಿ, ಕೂಡಲೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ನೋಂದಣಿ ಮತ್ತು ಮುದ್ರಾಂಕ ಇಲಾಖೆ:ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ತೆರಿಗೆ ಸಂಗ್ರಹದ ವಾರ್ಷಿಕ ಗುರಿ 11,828 ಕೋಟಿ ರೂ. ಗಳಷ್ಟಿದ್ದು, ಆಗಸ್ಟ್ 30 ರ ವರೆಗೆ 4574.51 ಕೋಟಿ ರೂ. ತೆರಿಗೆ ಸಂಗ್ರಹದ ಗುರಿ ನಿಗದಿ ಪಡಿಸಲಾಗಿತ್ತು.ಅದರಲ್ಲಿ 4620.30 ಕೋಟಿ ರೂ. ತೆರಿಗೆ ಸಂಗ್ರವಾಗಿದ್ದು, ಶೇ. ಶೇ.101.1 ರಷ್ಟಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಸಂಗ್ರಹವಾದ ತೆರಿಗೆಗಿಂತ 530. 27 ಕೋಟಿ ರೂ. ತೆರಿಗೆ ಹೆಚ್ಚಳವಾಗಿದೆ.
ಕಳೆದ ವರ್ಷಕ್ಕೆ ಹೋಲಿಸಿದರೆ ಆಸ್ತಿ ನೋಂದಣಿಯಲ್ಲಿ ಬೆಂಗಳೂರಿನಲ್ಲಿ ಶೇ. 3.86 ರಷ್ಟು ಹೆಚ್ಚಳವಾಗಿದೆ.ವಿವಿಧ ಸೇವೆಗಳನ್ನು ಆನ್‍ಲೈನ್‍ನಲ್ಲಿ ಒದಗಿಸುತ್ತಿರುವುದು ತೆರಿಗೆ ಸಂಗ್ರಹಕ್ಕೆ ಪೂರಕವಾಗಿದೆ.

ಗಣಿ ಮತ್ತು ಭೂವಿಜ್ಞಾನ ಇಲಾಖೆ:ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ 2019-20ನೇ ಸಾಲಿಗೆ 3550 ಕೋಟಿ ರೂ. ರಾಜಸ್ವ ಸಂಗ್ರಹ ಗುರಿ ಇತ್ತು. ಅದರಲ್ಲಿ ಒಟ್ಟು 1314 ಕೋಟಿ ರೂ. ಅಂದರೆ ಶೇ. 37 ರಷ್ಟು ರಾಜಸ್ವ ಸಂಗ್ರಹ ಆಗಿದೆ.
ರಾಜ್ಯದಲ್ಲಿ ಮರಳು ಮಾಫಿಯಾ ಮಟ್ಟಹಾಕಿ ಜನಸಾಮಾನ್ಯರಿಗೆ ಸುಲಭ ದರದಲ್ಲಿ ಮರಳು ಒದಗಿಸಲು ಕೂಡಲೇ ಕ್ರಮ ಕೈಗೊಳ್ಳುವಂತೆ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಾಮಾಜಿಕ ಕಾರ್ಯಕರ್ತ ಧನಂಜಯ ವಾಗ್ಲೆ ಇನ್ನಿಲ್ಲ | ಅವರು ಬರೆದಿರುವ ಓದಲೇಬೇಕಾದ ಬರಹ ಇಲ್ಲಿದೆ…

ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ ಧನಂಜಯ ವಾಗ್ಲೆ ಅವರು ಈಚೆಗೆ ನಿಧನರಾದರು.…

1 hour ago

ಹವಾಮಾನ ವರದಿ | 13-07-2025 | ಇಂದು ಸಾಮಾನ್ಯ ಮಳೆ | ಕರಾವಳಿ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಹೆಚ್ಚಾಗಲಿದೆ – ಏಕೆ?

ಬಾಂಗ್ಲಾ ದೇಶದ ಕರಾವಳಿಯಲ್ಲಿ ಉಂಟಾಗಿರುವ ತಿರುವಿಕೆಯ ಪರಿಣಾಮದಿಂದ ನಮ್ಮ ಕರಾವಳಿಯಲ್ಲಿ ಮಳೆಯ ಪ್ರಮಾಣ…

4 hours ago

ಮೊಬೈಲ್‌ ಕಣ್ಣು ಮಾತ್ರವಲ್ಲ – ಮನಸ್ಸನ್ನೂ ಹಾಳು ಮಾಡುತ್ತದೆ..!

ಮೊಬೈಲ್‌ ಎಷ್ಟು ಅಪಾಯಕಾರಿ ಸ್ಥಿತಿಗೆ ಮಕ್ಕಳನ್ನು ದೂಡುತ್ತದೆ ಎಂದರೆ, ಕಣ್ಣು ಮಾತ್ರವಲ್ಲ ಮನಸ್ಸುಗಳನ್ನೂ…

7 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಶರಧಿ.ಡಿ.ಎಸ್

ಶರಧಿ.ಡಿ.ಎಸ್, 3 ನೇ ತರಗತಿ, ಶ್ರೀ ಭಾರತೀ ವಿದ್ಯಾ ಪೀಠ, ಮುಜುಂಗಾವು ಎಡನಾಡು,…

10 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಕೃತಿಕಾ

ಕೃತಿಕಾ, 9 ನೇ ತರಗತಿ, ಸೈಂಟ್‌ ಆನ್ಸ್‌ ಇಂಗ್ಲಿಷ್‌ ಮೀಡಿಯಂ ಶಾಲೆ, ಕಡಬ…

10 hours ago

ರಾಜ್ಯಾದ್ಯಂತ ಲಕ್ಷ ವೃಕ್ಷ ಗಿಡಗಳ ನಾಟಿ ಕಾರ್ಯಕ್ರಮ | ಹೆಬ್ರಿಯ ಉದ್ಯಾನವನದಲ್ಲಿ ಗಿಡ ನೆಡುವ ಮೂಲಕ ಚಾಲನೆ

ಧರ್ಮಸ್ಥಳ ಮತ್ತು ಕುಂದಾಪುರ ಪ್ರಾದೇಶಿಕ ಅರಣ್ಯ ವಿಭಾಗ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ…

11 hours ago