Advertisement
ಸುದ್ದಿಗಳು

ರಾಜ್ಯದಲ್ಲಿ “ಸಂಘ”ಟಿತ ಬಿಜೆಪಿ – ನಳಿನ್ ಭರವಸೆ

Share

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿಯನ್ನು ಇನ್ನಷ್ಟು ಬಲಪಡಿಸುವ ಹಾಗೂ ಮತ್ತೆ ಅಧಿಕಾರಕ್ಕೆ ತರುವ ಸರ್ವರೀತಿಯ ಪ್ರಯತ್ನ ಮಾಡಲಾಗುತ್ತದೆ. ಈ ಹಂತದಲ್ಲಿ ಪಕ್ಷದ ಎಲ್ಲಾ ನಾಯಕರನ್ನೂ ಒಂದುಗೂಡಿಸಿ ಸಂಘಟಿತವಾಗಿ ಯಾವುದೇ ಸಮಸ್ಯೆ ಎದುರಿಸಲಾಗುವುದು. ಕಾರ್ಯಕರ್ತರ ನಿರೀಕ್ಷೆಗೆ ತಕ್ಕ ಕೆಲಸ ಮಾಡುತ್ತೇನೆ ಎಂದು ಬಿಜೆಪಿ ನೂತನ ರಾಜ್ಯಾದ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.

ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದ ನಳಿನ್ ಕುಮಾರ್ ಕಟೀಲು ರಾಜ್ಯದಲ್ಲಿ ಪಕ್ಷದ ಬಲವರ್ಧನೆಗೆ ಎಲ್ಲಾ ರೀತಿಯ ಪ್ರಯತ್ನ ನಡೆಸಲಾಗುವುದು. ಪಕ್ಷದ ಒಳಗಿನ ಎಲ್ಲಾ ಗೊಂದಲಗಳು ನಿವಾರಣೆಯಾಗಿ ಒಂದಾಗಿ ಪಕ್ಷ ಸಂಘಟನೆ ಮಾಡಲಾಗುತ್ತದೆ ಎಂದ ಅವರು ಪ್ರತೀ ಜಿಲ್ಲೆಗೂ ಪ್ರವಾಸ ಮಾಡಿ ಪಕ್ಷದ ಸಂಘಟನೆಯಲ್ಲಿ  ತೊಡಗಿಸಿಕೊಳ್ಳುವೆ ಎಂದು ಹೇಳಿದರು.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪೂರ್ನಾವಧಿ ಪ್ರಚಾರಕರಾಗಿ 12 ವರ್ಷಗಳ ಕಾಲ ಸಂಘಟನೆಗಾಗಿ ದುಡಿದು ಬಳಿಕ ದಕ ಬಿಜೆಪಿಯ ಜಿಲ್ಲಾ ಕಾರ್ಯದರ್ಶಿಯಾಗಿ ಕೆಲಸ ಮಾಡಿ ಸಂಸದರಾದ ನಳಿನ್‌ಕುಮಾರ್ ಕಟೀಲ್ ಈಗ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದಾರೆ. ನೂತನ ಅಧ್ಯಕ್ಷ ನಳಿನ್ ಕುಮಾರ್  ಅವರಿಗೆ ಮಾಜಿ ಅಧ್ಯಕ್ಷ ಬಿ ಎಸ್ ಯಡಿಯೂರಪ್ಪ ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭ ರಾಜ್ಯದ ಬಹುತೇಕ ಬಿಜೆಪಿ ನಾಯಕರು ಉಪಸ್ಥಿತರಿದ್ದರು.  ಪ್ರಮುಖರಾದ  ಡಿ ವಿ ಸದಾನಂದ ಗೌಡ , ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಅಶ್ವತ್ಥ ನಾರಾಯಣ , ಲಕ್ಷ್ಮಣ ಸವದಿ , ಸಿ ಟಿ ರವಿ, ಗೋವಿಂದ ಕಾರಜೋಳ, ರಾಜ್ಯ ಉಸ್ತುವಾರಿ ಮುರಳೀಧರ ರಾವ್, ಕೇಂದ್ರ ಸಚಿವ ಸುರೇಶ್ ಅಂಗಡಿ ,ಕೆ ಎಸ್ ಈಶ್ವರಪ್ಪ, ಸುರೇಶ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು. ಬಿಜೆಪಿ ಕಚೇರಿ ಎದುರಿನ ರಸ್ತೆಯಲ್ಲಿ ವೇದಿಕೆ ನಿರ್ಮಾಣ ಮಾಡಲಾಗಿತ್ತು. ಒಂದು ಸಾವಿರಕ್ಕೂ ಹೆಚ್ಚು ಆಸನಗಳ ವ್ಯವಸ್ಥೆ ಮಾಡಲಾಗಿತ್ತು.

ಕಾರ್ಯಕ್ರಮಕ್ಕೂ ಮುನ್ನ ಕಾಡು ಮಲ್ಲೇಶ್ವರ ದೇವಸ್ಥಾನಕ್ಕೆ ತೆರಳಿ ನಳಿನ್ ಕುಮಾರ್ ಕಟೀಲು ವಿಶೇಷ ಪೂಜೆ ಸಲ್ಲಿಸಿದರು. ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಜೊತೆಯಲ್ಲಿದ್ದರು.

ಕಾರ್ಯಕ್ರಮದ ಬಳಿಕ ನಳಿನ್ ಕುಮಾರ್ ಕಟೀಲು ಅವರನ್ನು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಂಪರ್ಕಕ್ಕೆ  ಕರೆತಂದ ಸದ್ಯ ಭಾರತೀಯ ಕಿಸಾನ್ ಸಂಘದ ರಾಷ್ಟ್ರೀಯ ಮುಖಂಡರೂ ಆದ ಸವಣೂರಿನ ಬಿ.ಕೆ.ರಮೇಶ್ ಅವರನ್ನು ಭೇಟಿಯಾದರು. ರಮೇಶ್ ಅವರನ್ನು ನಳಿನ್ ಕುಮಾರ್ ಕಟೀಲು ಅವರು ಗುರುಗಳು ಎಂದೇ ಸಂಬೋಧಿಸಿ ಮಾತನಾಡುತ್ತಾರೆ.

ಬಿ ಕೆ ರಮೇಶ್ ಜೊತೆ ನಳಿನ್ ಕುಮಾರ್ ಕಟೀಲು

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

22 hours ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

22 hours ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

2 days ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

3 days ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

4 days ago