ಬೆಂಗಳೂರು: ರಾಜ್ಯದಲ್ಲಿ ಸೋಮವಾರ 9 ಹೊಸ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 512ಕ್ಕೆ ಏರಿಕೆ ಆಗಿದೆ. ಇದುವರೆಗೆ 193 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಈ ನಡುವೆ ರಕ್ತದೊತ್ತಡ, ಕಿಡ್ನಿ ವೈಫಲ್ಯದ ಹಿನ್ನೆಲೆಯಲ್ಲಿ ಡಯಾಲಿಸಿಸ್ ಚಿಕಿತ್ಸೆ ಪಡೆಯುತ್ತಿದ್ದ 50 ವರ್ಷದ ಬೆಂಗಳೂರಿನ ವ್ಯಕ್ತಿಯೊಬ್ಬರು ಇಂದು ನಿಧನರಾಗಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ನಲ್ಲಿ ನೀಡಿರುವ ಮಾಹಿತಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2, ವಿಜಯಪುರ ಜಿಲ್ಲೆಯಲ್ಲಿ 2, ಮಂಡ್ಯ ಜಿಲ್ಲೆಯಲ್ಲಿ 2, ಬಾಗಲಕೋಟೆಯಲ್ಲಿ 2 ಹಾಗೂ ಬೆಂಗಳೂರು ನಗರ ಜಿಲ್ಲೆಯಲ್ಲಿ 1 ಪ್ರಕರಣ ಸೋಮವಾರ ಪತ್ತೆಯಾಗಿವೆ.
ಇದೇ ವೇಳೆ ಸೋಮವಾರ ಕೇರಳದಲ್ಲಿ 13 ಪ್ರಕರಣ ಪತ್ತೆಯಾಗಿದೆ. ಆದರೆ ಕಾಸರಗೋಡಿನಲ್ಲಿ ಕಳೆದ 3 ದಿನಗಳಿಂದ ಯಾವುದೇ ಹೊಸ ಪ್ರಕರಣ ಪತ್ತೆಯಾಗಿಲ್ಲ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel