ರಾಜ್ಯದಲ್ಲಿ 18 ಮಂದಿಗೆ ಕೊರೊನಾ ಪಾಸಿಟಿವ್ | ಸೊಂಕಿತರ ಸಂಖ್ಯೆ 463ಕ್ಕೆ ಏರಿಕೆ |

April 24, 2020
2:28 PM

ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ ಮತ್ತೆ 18 ಮಂದಿಯಲ್ಲಿ ಹೊಸದಾಗಿ ಕೊರೊನಾ ವೈರಸ್ ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 463ಕ್ಕೆ ಏರಿಕೆಯಾಗಿದೆ. 18 ಜನರು ಸೋಂಕಿನಿಂದ ಮೃತಪಟ್ಟಿದ್ದು, 150 ಜನರು ಗುಣಮುಖರಾಗಿದ್ದಾರೆ.

ಇಂದು ಬೆಂಗಳೂರು ನಗರದ 11 ಮಂದಿಗೆ ಕೊರೊನಾ ವೈರಸ್ ಪತ್ತೆಯಾಗಿದೆ. ಇದರಲ್ಲಿ ಬೆಂಗಳೂರಿನ ಪಾದರಾಯನಪುರದಲ್ಲಿ ಇತ್ತೀಚಿಗೆ ಗಲಭೆ ನಡೆಸಿದ್ದ 5 ಜನರಲ್ಲಿ ಕೊರೊನಾ ವೈರಸ್  ಸೋಂಕು ದೃಢಪಟ್ಟಿದೆ. ಜೊತೆಗೆ, ಹೊಂಗಸಂದ್ರದ ಬಿಹಾರ ಮೂಲದ ಕಾರ್ಮಿಕನ ಸಂಪರ್ಕದಲ್ಲಿದ್ದ 5 ಜನರಲ್ಲಿ ಸೋಂಕು ಪತ್ತೆಯಾಗಿದೆ.  ಅವರಿಗೆ ಬೆಂಗಳೂರಿನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಳಗಾವಿ ರಾಯಭಾಗದ 10 ವರ್ಷದ ಬಾಲಕಿ ಹಾಗೂ 15 ವರ್ಷದ ಬಾಲಕ , ಚಿಕ್ಕಬಳ್ಳಾಪುರದ 39 ವರ್ಷದ ವ್ಯಕ್ತಿ, ಬಾಗಲಕೋಟೆ ಮುಧೋಳದ 28 ಹಾಗೂ ಜಮಖಂಡಿಯ 46 ವರ್ಷದ ಗಂಡು, ವಿಜಯಪುರದ 17 ವರ್ಷದ ಯುವಕನಲ್ಲಿ ಸೋಂಕು ಕಾಣಿಸಿಕೊಂಡಿದೆ ಎಂದು ಆರೋಗ್ಯ ಇಲಾಖೆಯ  ಪ್ರಕಟಣೆ ತಿಳಿಸಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶಾದ್ಯಂತ 9.25 ಕೋಟಿ ರೈತ ಐಡಿ ನಿರ್ಮಾಣ | ರಸಗೊಬ್ಬರ ಬ್ಲಾಕ್‌ ಮಾರ್ಕೆಟ್‌ ವಿರುದ್ಧ ಕಟ್ಟುನಿಟ್ಟಾಗಿ ಕ್ರಮಕ್ಕೆ ಕೇಂದ್ರ ಕೃಷಿ ಸಚಿವರ ಸೂಚನೆ
April 4, 2026
7:34 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ
April 3, 2026
3:55 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror