ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ ಮತ್ತೆ 18 ಮಂದಿಯಲ್ಲಿ ಹೊಸದಾಗಿ ಕೊರೊನಾ ವೈರಸ್ ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 463ಕ್ಕೆ ಏರಿಕೆಯಾಗಿದೆ. 18 ಜನರು ಸೋಂಕಿನಿಂದ ಮೃತಪಟ್ಟಿದ್ದು, 150 ಜನರು ಗುಣಮುಖರಾಗಿದ್ದಾರೆ.
ಇಂದು ಬೆಂಗಳೂರು ನಗರದ 11 ಮಂದಿಗೆ ಕೊರೊನಾ ವೈರಸ್ ಪತ್ತೆಯಾಗಿದೆ. ಇದರಲ್ಲಿ ಬೆಂಗಳೂರಿನ ಪಾದರಾಯನಪುರದಲ್ಲಿ ಇತ್ತೀಚಿಗೆ ಗಲಭೆ ನಡೆಸಿದ್ದ 5 ಜನರಲ್ಲಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಜೊತೆಗೆ, ಹೊಂಗಸಂದ್ರದ ಬಿಹಾರ ಮೂಲದ ಕಾರ್ಮಿಕನ ಸಂಪರ್ಕದಲ್ಲಿದ್ದ 5 ಜನರಲ್ಲಿ ಸೋಂಕು ಪತ್ತೆಯಾಗಿದೆ. ಅವರಿಗೆ ಬೆಂಗಳೂರಿನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಬೆಳಗಾವಿ ರಾಯಭಾಗದ 10 ವರ್ಷದ ಬಾಲಕಿ ಹಾಗೂ 15 ವರ್ಷದ ಬಾಲಕ , ಚಿಕ್ಕಬಳ್ಳಾಪುರದ 39 ವರ್ಷದ ವ್ಯಕ್ತಿ, ಬಾಗಲಕೋಟೆ ಮುಧೋಳದ 28 ಹಾಗೂ ಜಮಖಂಡಿಯ 46 ವರ್ಷದ ಗಂಡು, ವಿಜಯಪುರದ 17 ವರ್ಷದ ಯುವಕನಲ್ಲಿ ಸೋಂಕು ಕಾಣಿಸಿಕೊಂಡಿದೆ ಎಂದು ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…