ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ ಮತ್ತೆ 18 ಮಂದಿಯಲ್ಲಿ ಹೊಸದಾಗಿ ಕೊರೊನಾ ವೈರಸ್ ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 463ಕ್ಕೆ ಏರಿಕೆಯಾಗಿದೆ. 18 ಜನರು ಸೋಂಕಿನಿಂದ ಮೃತಪಟ್ಟಿದ್ದು, 150 ಜನರು ಗುಣಮುಖರಾಗಿದ್ದಾರೆ.
ಇಂದು ಬೆಂಗಳೂರು ನಗರದ 11 ಮಂದಿಗೆ ಕೊರೊನಾ ವೈರಸ್ ಪತ್ತೆಯಾಗಿದೆ. ಇದರಲ್ಲಿ ಬೆಂಗಳೂರಿನ ಪಾದರಾಯನಪುರದಲ್ಲಿ ಇತ್ತೀಚಿಗೆ ಗಲಭೆ ನಡೆಸಿದ್ದ 5 ಜನರಲ್ಲಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಜೊತೆಗೆ, ಹೊಂಗಸಂದ್ರದ ಬಿಹಾರ ಮೂಲದ ಕಾರ್ಮಿಕನ ಸಂಪರ್ಕದಲ್ಲಿದ್ದ 5 ಜನರಲ್ಲಿ ಸೋಂಕು ಪತ್ತೆಯಾಗಿದೆ. ಅವರಿಗೆ ಬೆಂಗಳೂರಿನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಬೆಳಗಾವಿ ರಾಯಭಾಗದ 10 ವರ್ಷದ ಬಾಲಕಿ ಹಾಗೂ 15 ವರ್ಷದ ಬಾಲಕ , ಚಿಕ್ಕಬಳ್ಳಾಪುರದ 39 ವರ್ಷದ ವ್ಯಕ್ತಿ, ಬಾಗಲಕೋಟೆ ಮುಧೋಳದ 28 ಹಾಗೂ ಜಮಖಂಡಿಯ 46 ವರ್ಷದ ಗಂಡು, ವಿಜಯಪುರದ 17 ವರ್ಷದ ಯುವಕನಲ್ಲಿ ಸೋಂಕು ಕಾಣಿಸಿಕೊಂಡಿದೆ ಎಂದು ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…