ಕೊರೊನಾ ವೈರಸ್ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿವೆ. ಪಾಸಿಟಿವ್ ಪ್ರಕರಣ ಹೆಚ್ಚಿದ ಸುದ್ದಿ ಒಂದು ಕ್ಷಣದ ಆತಂಕವಲ್ಲ, ಎಲ್ಲೆಡೆ ಕ್ವಾರಂಟೈನ್ ನಲ್ಲಿದ್ದವರಲ್ಲೇ ಪಾಸಿಟಿವ್ ಬರುತ್ತದೆ ಎಂದು ಸಮಾಧಾನವೂ ಅಲ್ಲ. ಇನ್ನಷ್ಟು ಜಾಗೃತಿ ಅಗತ್ಯ ಎನ್ನುವುದರ ಸೂಚನೆ ಇದು. ರಾಜ್ಯದಲ್ಲಿ ಒಮದೇ ದಿನ 87 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 3408ಕ್ಕೆ ಏರಿಕೆಯಾಗಿದೆ.
ಮಂಗಳೂರು: ಸೋಮವಾರ ರಾಜ್ಯದಲ್ಲಿ ಕೊರೊನಾ ವೈರಸ್ 187 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 3408ಕ್ಕೆ ಏರಿಕೆಯಾಗಿದೆ. ಇದರ ಜೊತೆಗೆ ಮತ್ತೊಂದು ಬಲಿಯಾಗಿದೆ. ದ.ಕ. ಉಡುಪಿ ಜಿಲ್ಲೆಗಳಲ್ಲಿ 77 ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು, ಈ ಪೈಕಿ ದ.ಕ. ಜಿಲ್ಲೆಯಲ್ಲಿ 4 ಹಾಗೂ ಉಡುಪಿಯಲ್ಲಿ 73 ಮಂದಿಯಲ್ಲಿ ಪಾಸಿಟಿವ್ ಕಂಡುಬಂದಿದೆ. ಸೋಂಕಿತರ ಪೈಕಿ ಹೆಚ್ಚಿನವರು ಮಹಾರಾಷ್ಟ್ರದಿಂದ ಮರಳಿದವರಾಗಿದ್ದು, ಕ್ವಾರಂಟೈನ್ ನಲ್ಲಿದ್ದರು ಎಂಬುದು ಈಗಿನ ಮಾಹಿತಿ. ಅದರಲ್ಲೂ ಕೆಲವು ವ್ಯಕ್ತಿಗಳಿಗೆ ಕೊರೊನಾ ಪಾಸಿಟಿವ್ ಬಂದ ಮೂಲ ಹೇಗೆ ಎಂಬುದು ತಿಳಿದಿಲ್ಲ. ಇದು ಎಚ್ಚರಿಕೆಯನ್ನು ನೀಡಿದೆ. ಸಾಮಾಜಿಕ ಅಂತರ , ಸ್ಯಾನಿಟೈಸರ್ ಬಳಕೆ ಸೇರಿದಂತೆ ಸ್ವಯಂ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು ಎನ್ನುವುದನ್ನು ಸೂಚಿಸುತ್ತದೆ.
ಕಟ್ಟುನಿಟ್ಟಿನ ಕ್ರಮ:
ಇದೀಗ ದ ಕ ಜಿಲ್ಲೆಯಲ್ಲಿ ಕಟ್ಟು ನಿಟ್ಟಿನ ಕ್ರಮಕ್ಕೆ ಜಿಲ್ಲಾಡಳಿತ ಮುಂದಾಗಿದೆ. ಕೇಂದ್ರ ಸರಕಾರ ಲಾಕ್ಡೌನ್ ಜೂ.31 ರವರೆಗೆ ಘೋಷಣೆ ಮಾಡಿದೆ. ಹೀಗಾಗಿ ಈ ಅವಧಿಯಲ್ಲಿ ಲಾಕ್ಡೌನ್ ನಿಯಮ ಕಟ್ಟುನಿಟ್ಟಾಗಿ ಜಾರಿಗೆ ತರಲು ಜಿಲ್ಲಾಡಳಿತ ನಿರ್ಧರಿಸಿದೆ. ರಾತ್ರಿ ಸಂಚಾರ ಕಡ್ಡಾಯವಾಗಿ ನಿಷೇಧಿಸಿದ್ದು ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯ ತನಕ ಕರ್ಪ್ಯೂ ವಿಧಿಸಲಾಗಿದೆ. ಮಾಸ್ಕ್ ಧರಿಸದೇ ಇದ್ದರೆ ದಂಡ ವಿಧಿಸಲು ನಿರ್ಧರಿಸಲಾಗಿದೆ. ನಗರ ಪ್ರದೇಶಗಳಲ್ಲಿ 200 ರೂ ದಂಡ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ 100 ರೂಪಾಯಿ ದಂಡ ವಿಧಿಸಲು ನಿರ್ಧರಿಸಲಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…