ಬೆಂಗಳೂರು: ರಾಜ್ಯದಲ್ಲಿ ಮತ್ತೆ 9 ಮಂದಿಯಲ್ಲಿ ಶನಿವಾರ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 598ಕ್ಕೆ ತಲುಪಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಈ ನಡುವೆ 3 ಮಂದಿ ಕೊರೊನಾಕ್ಕೆ ಬಲಿಯಾಗಿದ್ದು ಈ ಮೂಲಕ ಸಾವಿನ ಸಂಖ್ಯೆ 25ಕ್ಕೆ ಏರಿಕೆಯಾಗಿದೆ.
ಶನಿವಾರ ಮಧ್ಯಾಹ್ನದ ಹೆಲ್ತ್ ಬುಲೆಟಿನ್ ನಲ್ಲಿ ಮಾಹಿತಿ ನೀಡಿರುವ ಆರೋಗ್ಯ ಇಲಾಖೆ ದಾವಣಗೆರೆಯ 69 ವರ್ಷದ ವ್ಯಕ್ತಿ, ಬೀದರ್ ನ 82 ವರ್ಷದ ವ್ಯಕ್ತಿ ಹಾಗೂ ಬೆಂಗಳೂರು ಗ್ರಾಮಂತರಕ್ಕೆ ಸೇರಿದ 63 ವರ್ಷದ ವ್ಯಕ್ತಿ ಮಹಾಮಾರಿಗೆ ಬಲಿಯಾಗಿದ್ದಾರೆಂದು ತಿಳಿಸಿದೆ.
ವಿಶ್ವದಲ್ಲಿ ಅತಿಹೆಚ್ಚು ಕೊರೋನಾ ಸಂಕಷ್ಟಕ್ಕೆ ಈಡಾಗಿರುವ ದೇಶವಾದ ಅಮೆರಿಕದಲ್ಲಿ ಸಾವಿನ ಸಂಖ್ಯೆ 65,776ಕ್ಕೆ ಏರಿಕೆಯಾಗಿದೆ. ಅಮೆರಿಕದಲ್ಲಿ 11.31 ಲಕ್ಷ ಜನರು ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ವಿಶ್ವಾದ್ಯಂತ 34.1 ಲಕ್ಷ ಜನರಿಗೆ ಕೊರೋನಾ ಸೋಂಕು ತಗುಲಿದ್ದು, 2.39 ಲಕ್ಷ ಜನರು ಸಾವನ್ನಪ್ಪಿದ್ದಾರೆ.
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…