ರಾಜ್ಯದ ಸಹಕಾರಿ ಸಂಘ ಸಂಸ್ಥೆಗಳಿಂದ ಪರಿಹಾರ ನಿಧಿಗೆ 47.15 ಕೋಟಿ ರೂಪಾಯಿ ದೇಣಿಗೆ | ಕ್ಯಾಂಪ್ಕೋದಿಂದ 25 ಲಕ್ಷ | ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದಿಂದ 50 ಲಕ್ಷ |

April 28, 2020
8:48 PM

ಬೆಂಗಳೂರು: ಕೊರೊನಾ ವೈರಸ್ ತಡೆಯುವ ನಿಟ್ಟಿನಲ್ಲಿ  ಮುಖ್ಯಮಂತ್ರಿಗಳ ಪರಿಹಾರ  ನಿಧಿಗೆ ರಾಜ್ಯದ ಸಹಕಾರಿ ಸಂಘ ಸಂಸ್ಥೆಗಳ ವತಿಯಿಂದ ಒಟ್ಟಾಗಿ 47.15 ಕೋಟಿ ರೂಪಾಯಿ ದೇಣಿಗೆಯನ್ನು  ನೀಡಲಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ದೇಣಿಗೆಯನ್ನು ಸಹಕಾರಿ ಸಚಿವರ ಮೂಲಕ ನೀಡಲಾಯಿತು.

ಮಂಗಳವಾರ ದಕ್ಷಿಣ ಕನ್ನಡ ಜಿಲ್ಲಾಸಹಕಾರಿ ಹಾಲು ಉತ್ಪಾದಕರ ಸಹಕಾರಿ ಸಂಘಗಳ ಒಕ್ಕೂಟದಿಂದ 50 ಲಕ್ಷ , ಶಿರಸಿ ಎಪಿಎಂಸಿಯಿಂದ 50 ಲಕ್ಷ, ಕ್ಯಾಂಪ್ಕೋ ಸಂಸ್ಥೆಯಿಮದ 25 ಲಕ್ಷ , ಎಟಿ $ಎಸ್ ಇಂಡಿಯಾ ಪ್ರೈ ಲಿ ವತಿಯಿಂದ 20 ಲಕ್ಷ, ಶಿರಸಿಯ ತೋಟಗಾರ್ಸ್ ಸಂಸ್ಥೆಯಿಮದ 10 ಲಕ್ಷ ಸೇರಿದಂತೆ ವಿವಿಧ ಸಹಕಾರಿ ಸಂಘ ಸಂಸ್ಥೆಗಳು ದೇಣಿಗೆ ನೀಡಿದ್ದು ಪುತ್ತೂರಿನ ಕೋ ಆಪರೇಟಿವ್ ಟೌನ್ ಬ್ಯಾಂಕ್ ವತಿಯಿಂದ 75 ಸಾವಿರ ದೇಣಿಗೆ ನೀಡಲಾಗಿದೆ. ಹೀಗಾಗಿ ಮಂಗಳವಾರದಂದು ಒಟ್ಟಾಗಿ 2.15 ಕೊಟಿ ರೂಪಾಯಿ ದೇಣಿಗೆ ಸಹಕಾರಿ ಸಂಘಸಂಸ್ಥೆಗಳ ವತಿಯಿಂದ ನೀಡಲಾಗಿದೆ.

ಈ ಸಂದರ್ಭ ಸಹಕಾರಿ ಸಚಿವ ಎಸ್ ಟಿ ಸೋಮಶೇಖರ್, ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್, ಪುತ್ತೂರು ಶಾಸಕ ಸಂಜೀವ ಮಠಂದೂರು, ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ, ದಕ್ಷಿಣ ಕನ್ನಡ ಜಿಲ್ಲಾಸಹಕಾರಿ ಹಾಲು ಉತ್ಪಾದಕರ ಸಹಕಾರಿ ಸಂಘಗಳ ಒಕ್ಕೂಟದ ಅಧ್ಯಕ್ಷ ರವಿರಾಜ ಹೆಗ್ಡೆ ಉಪಸ್ಥಿತರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ
April 2, 2026
6:56 AM
by: ಅರುಣ್‌ ಕುಮಾರ್ ಕಾಂಚೋಡು
ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ
April 2, 2026
6:37 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!
April 1, 2026
2:30 PM
by: ಸಾಯಿಶೇಖರ್ ಕರಿಕಳ
ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror