ಬೆಂಗಳೂರು: ಕೊರೊನಾ ವೈರಸ್ ತಡೆಯುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ರಾಜ್ಯದ ಸಹಕಾರಿ ಸಂಘ ಸಂಸ್ಥೆಗಳ ವತಿಯಿಂದ ಒಟ್ಟಾಗಿ 47.15 ಕೋಟಿ ರೂಪಾಯಿ ದೇಣಿಗೆಯನ್ನು ನೀಡಲಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ದೇಣಿಗೆಯನ್ನು ಸಹಕಾರಿ ಸಚಿವರ ಮೂಲಕ ನೀಡಲಾಯಿತು.
ಮಂಗಳವಾರ ದಕ್ಷಿಣ ಕನ್ನಡ ಜಿಲ್ಲಾಸಹಕಾರಿ ಹಾಲು ಉತ್ಪಾದಕರ ಸಹಕಾರಿ ಸಂಘಗಳ ಒಕ್ಕೂಟದಿಂದ 50 ಲಕ್ಷ , ಶಿರಸಿ ಎಪಿಎಂಸಿಯಿಂದ 50 ಲಕ್ಷ, ಕ್ಯಾಂಪ್ಕೋ ಸಂಸ್ಥೆಯಿಮದ 25 ಲಕ್ಷ , ಎಟಿ $ಎಸ್ ಇಂಡಿಯಾ ಪ್ರೈ ಲಿ ವತಿಯಿಂದ 20 ಲಕ್ಷ, ಶಿರಸಿಯ ತೋಟಗಾರ್ಸ್ ಸಂಸ್ಥೆಯಿಮದ 10 ಲಕ್ಷ ಸೇರಿದಂತೆ ವಿವಿಧ ಸಹಕಾರಿ ಸಂಘ ಸಂಸ್ಥೆಗಳು ದೇಣಿಗೆ ನೀಡಿದ್ದು ಪುತ್ತೂರಿನ ಕೋ ಆಪರೇಟಿವ್ ಟೌನ್ ಬ್ಯಾಂಕ್ ವತಿಯಿಂದ 75 ಸಾವಿರ ದೇಣಿಗೆ ನೀಡಲಾಗಿದೆ. ಹೀಗಾಗಿ ಮಂಗಳವಾರದಂದು ಒಟ್ಟಾಗಿ 2.15 ಕೊಟಿ ರೂಪಾಯಿ ದೇಣಿಗೆ ಸಹಕಾರಿ ಸಂಘಸಂಸ್ಥೆಗಳ ವತಿಯಿಂದ ನೀಡಲಾಗಿದೆ.
ಈ ಸಂದರ್ಭ ಸಹಕಾರಿ ಸಚಿವ ಎಸ್ ಟಿ ಸೋಮಶೇಖರ್, ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್, ಪುತ್ತೂರು ಶಾಸಕ ಸಂಜೀವ ಮಠಂದೂರು, ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ, ದಕ್ಷಿಣ ಕನ್ನಡ ಜಿಲ್ಲಾಸಹಕಾರಿ ಹಾಲು ಉತ್ಪಾದಕರ ಸಹಕಾರಿ ಸಂಘಗಳ ಒಕ್ಕೂಟದ ಅಧ್ಯಕ್ಷ ರವಿರಾಜ ಹೆಗ್ಡೆ ಉಪಸ್ಥಿತರಿದ್ದರು.
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…