Advertisement
ಜಿಲ್ಲೆ

ರಾಜ್ಯಮಟ್ಟದ ಲಗೋರಿ – ಮಂಗಳೂರು ಚಾಂಪಿಯನ್

Share

ಸುಳ್ಯ :  ದ.ಕ.ಜಿಲ್ಲಾ ಲಗೋರಿ ಅಸೋಸಿಯೇಷನ್ ವತಿಯಿಂದ ಸುಳ್ಯದಲ್ಲಿ ಎರಡು ದಿನಗಳ ಕಾಲ ನಡೆದ ರಾಜ್ಯಮಟ್ಟದ ಲಗೋರಿ ಪಂದ್ಯಾಟದಲ್ಲಿ ಮಂಗಳೂರಿನ ಹನುಮಾನ್ ಲಗೋರಿಯನ್ ತಂಡ ಚಾಂಪಿಯನ್ ಆಗಿ ಹೊರ ಹೊಮ್ಮಿದೆ.

ಭಾನುವಾರ ಸಂಜೆ ನಡೆದ ಫೈನಲ್ ಪಂದ್ಯದಲ್ಲಿ ಮಂಗಳೂರಿನ ಹನುಮಾನ್ ಲಗೋರಿಯನ್ ತಂಡ ಕೊಡಗು ಜಿಲ್ಲೆಯ ಯುವ ಶಕ್ತಿ ಪೆರಾಜೆ ತಂಡವನ್ನು ಸೋಲಿಸಿ ಚಾಂಪಿಯನ್ ಪಟ್ಟ ಅಲಂಕರಿಸಿತು.
12 ತಂಡಗಳು ಭಾಗವಹಿಸಿದ್ದ ಲಗೋರಿ ಲೀಗ್ ಪಂದ್ಯಾಟದಲ್ಲಿ `ಪೂಲ್ ಎ’ ಯಿಂದ ಯುವ ಶಕ್ತಿ ಪೆರಾಜೆ ಮತ್ತು ಹನುಮಾನ್ ಲಗೋರಿಯನ್ ಮಂಗಳೂರು ಹಾಗು `ಪೂಲ್ ಬಿ’ ಯಿಂದ ಪಂಚಶ್ರೀ ಪಂಜ ಮತ್ತು ಪ್ರಗತಿ ಫ್ರೆಂಡ್ಸ್ ಕಾಣಿಯೂರು ತಂಡಗಳು ಸೆಮಿಫೈನಲ್ ಪ್ರವೇಶಿಸಿತು. ಯುವ ಶಕ್ತಿ ಪೆರಾಜೆ ತಂಡ ಪ್ರಗತಿ ಫ್ರೆಂಡ್ಸ್ ತಂಡವನ್ನು ಮತ್ತು ಮಂಗಳೂರು ಹನುಮಾನ್ ಲಗೋರಿಯನ್ ತಂಡ ಪಂಚಶ್ರೀ ಪಂಜ ತಂಡವನ್ನು ಸೋಲಿಸಿ ಫೈನಲ್ ಪ್ರವೇಶಿಸಿತು. ಪಂಚಶ್ರೀ ಪಂಜ ತೃತೀಯ ಸ್ಥಾನ ಮತ್ತು ಪ್ರಗತಿ ಫ್ರೆಂಡ್ಸ್ ಕಾಣಿಯೂರು ಚತುರ್ಥ ಸ್ಥಾನ ಪಡೆದುಕೊಂಡಿತು. ಬೆಸ್ಟ್ ಶೂಟರ್ ಆಗಿ ರಕ್ಷಿತ್ ಪೆರಾಜೆ, ಬೆಸ್ಟ್ ಫೀಲ್ಡರ್ ಆಗಿ ಅಜಿತ್ ಮಂಗಳೂರು, ಬೆಸ್ಟ್ ಆಲ್‍ರೌಂಡರ್ ಆಗಿ ಪುನಿತ್ ಮಂಗಳೂರು ಆಯ್ಕೆಯಾದರು.

ಸಮಾರೋಪ ಸಮಾರಂಭ:
ಎರಡು ದಿನಗಳ ಕಾಲ ನಡೆದ ರಾಜ್ಯ ಮಟ್ಟದ ಲಗೋರಿ ಪಂದ್ಯಾಟದ ಸಮಾರೋಪ ಸಮಾರಂಭದಲ್ಲಿ ತಾಲೂಕು ಪಂಚಾಯತ್ ಅಧ್ಯಕ್ಷ
ಚನಿಯ ಕಲ್ತಡ್ಕ ವಿಜೇತರಿಗೆ ಬಹುಮಾನ ವಿತರಿಸಿದರು. ಲಗೋರಿ ಪಂದ್ಯಾಟ ಸಂಘಟನಾ ಸಮಿತಿಯ ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯತ್ ಸದಸ್ಯ ಹರೀಶ್ ಕಂಜಿಪಿಲಿ, ಕರ್ನಾಟಕ ರಾಜ್ಯ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಪಿ.ಸಿ.ಜಯರಾಮ, ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ಎನ್.ಎ.ಜ್ಞಾನೇಶ್, ವರ್ತಕರ ಮತ್ತು ಕೈಗಾರಿಕೋದ್ಯಮಿಗಳ ಸಂಘದ ಅಧ್ಯಕ್ಷ ಪಿ.ಬಿ.ಸುಧಾಕರ ರೈ, ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಮೋಹನ್ ರಾಂ ಸುಳ್ಳಿ, ನಗರ ಪಂಚಾಯತ್ ಮಾಜಿ ಸದಸ್ಯ ಕೆ.ಎಂ.ಮುಸ್ತಫಾ ಅತಿಥಿಗಳಾಗಿದ್ದರು.

ಲಗೋರಿ ಸಂಘಟನಾ ಸಮಿತಿಯ ಸಂಯೋಜಕ ದಿನೇಶ್ ಮಡಪ್ಪಾಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ದ.ಕ.ಜಿಲ್ಲಾ ಲಗೋರಿ ಅಸೋಸಿಯೇಷನ್ ಉಪಾಧ್ಯಕ್ಷ ಬಿ.ಕೆ.ಮಾಧವ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಹಾಗು ಪಂದ್ಯಾಟದ ಪ್ರಧಾನ ಸಂಯೋಜಕ ದೊಡ್ಡಣ್ಣ ಬರೆಮೇಲು ವಂದಿಸಿದರು. ಶಶಿಧರ ಎಂ.ಜೆ. ಕಾರ್ಯಕ್ರಮ ನಿರೂಪಿಸಿದರು. ಲಗೋರಿ ನಿಯಮಗಳ ಕುರಿತು ಪುಸ್ತಕ ರಚಿಸಿದ ಮತ್ತು ಪಂದ್ಯಾಟದ ರುವಾರಿ ದೊಡ್ಡಣ್ಣ ಬರೆಮೇಲು ಅವರನ್ನು ಸನ್ಮಾನಿಸಲಾಯಿತು.

 

ರಾಜ್ಯ ಮಟ್ಟದ ಲಗೋರಿ ಪಂದ್ಯಾಟದಲ್ಲಿ ಪ್ರಥಮ ಸ್ಥಾನಿಯಾದ ಮಂಗಳೂರು ಹನುಮಾನ್ ಲಗೋರಿಯನ್ ತಂಡ

 

 

ರಾಜ್ಯ ಮಟ್ಟದ ಲಗೋರಿ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನಿಯಾದ ಯುವಶಕ್ತಿ ಪೆರಾಜೆ ತಂಡ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ

ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…

4 hours ago

ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ

ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…

5 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ

ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…

8 hours ago

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

12 hours ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

12 hours ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

23 hours ago