Advertisement
ಸುದ್ದಿಗಳು

ಉಜಿರೆ: ರಾಜ್ಯಮಟ್ಟದ ವಿಜ್ಞಾನ ಸ್ಪರ್ಧೆ ಎಕ್ಸ್ ಪೀರಿಯಾ– 2019

Share

ಉಜಿರೆ: ಮನದಲ್ಲಿ ಮೂಡಿದ ಯೋಚನೆಗಳಿಗೆ, ಯೋಜನೆಗಳಿಗೆ ಮೂರ್ತರೂಪ ನೀಡಿ ಪ್ರಾಯೋಗಿಕವಾಗಿ ಪರೀಕ್ಷೆಗೊಳಪಡಿಸಿ ತಜ್ಞರಿಂದ ಅರ್ಹತೆ ಮತ್ತು ಬಳಕೆ ಬಗ್ಗೆ ಅಧಿಕೃತ ಪ್ರಮಾಣಪತ್ರ ಪಡೆದಾಗ ಮಾತ್ರ ತಯಾರಿಸಿದ ಮಾದರಿಗಳು ಸಮಾಜಕ್ಕೆ ಉಪಯುಕ್ತವಾಗುತ್ತವೆ ಎಂದು ಬೆಂಗಳೂರಿನ ಭಾರತೀಯ ವಿಜ್ಞಾನ ಮಂದಿರದ ಪ್ರಾಧ್ಯಾಪಕ ಡಾ. ಎನ್. ಎಸ್. ದಿನೇಶ್ ಹೇಳಿದರು.

ಅವರು ಉಜಿರೆಯ ಎಸ್.ಡಿ.ಎಂ. ಎಂಜಿನಿಯರಿಂಗ್‍ ಕಾಲೇಜಿನಲ್ಲಿ “ಸಂಶೋಧನೆ ಮಾಡಿ, ಅನುಭವಿಸಿ” ಎಂಬ ಧ್ಯೇಯ ವಾಕ್ಯದೊಂದಿಗೆ ಆಯೋಜಿಸಿದ ರಾಜ್ಯಮಟ್ಟದ ವಿಜ್ಞಾನ ಮೇಳವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದರು. ಯುವಜನತೆ ದೇಶದ ಅಮೂಲ್ಯ ಮಾನವ ಸಂಪನ್ಮೂಲವಾಗಿದ್ದು, ಹೊಸ ಚಿಂತನೆಗಳೊಂದಿಗೆ ಸಮಾಜಕ್ಕೆ ಹಾಗೂ ದೇಶಕ್ಕೆ ಉಪಯುಕ್ತವಾದ ಸಂಶೋಧನೆಗಳನ್ನು ನಡೆಸಬೇಕು. ಸಾಮಾನ್ಯವಾಗಿ ವಿಜ್ಞಾನ, ವೈದ್ಯಕೀಯ ಹಾಗೂ ತಂತ್ರಜ್ಞಾನ ಕ್ಷೇತ್ರದಲ್ಲಿ ನಮಗೆ ಬೇಕಾದ ಉಪಕರಣಗಳನ್ನು ನಾವು ವಿದೇಶಗಳಿಂದ ತರಿಸುತ್ತೇವೆ. ನಮ್ಮ ವಿಶಿಷ್ಟ ಯೋಚನೆ, ಯೋಜನೆಗಳಿಂದ ನಮಗೆ ಬೇಕಾದ ಎಲ್ಲಾ ಯಂತ್ರೋಪಕರಣಗಳನ್ನು ನಾವೇ ತಯಾರಿಸಿ ಸ್ವಾವಲಂಬಿಗಳಾಗಬೇಕು ಎಂದು ಅವರು ಸಲಹೆ ನೀಡಿದರು. ಮನದಲ್ಲಿ ಮೂಡಿದ ಕಲ್ಪನೆಗೆ ನಾವು ಮೂರ್ತರೂಪ ನೀಡಿ, ಸಂಶೋಧನೆ ಹಾಗೂ ವಿಶ್ಲೇಷಣೆ ನಡೆಸಿ, ಪ್ರಾಯೋಗಿಕವಾಗಿ ಅದರ ಬಳಕೆ ಮತ್ತು ಉಪಯುಕ್ತತೆ ಬಗ್ಗೆ ತಜ್ಞರಿಂದ ಅಧಿಕೃತ ಪ್ರಮಾಣ ಪತ್ರ ಪಡೆದು ನಂತರ ಅದರ ಉತ್ಪಾದನೆಗೆ ನಾವು ಸಜ್ಜಾಗಬೇಕು. ಈ ಹಂತದಲ್ಲಿ ನಾವು ಅನೇಕ ಸಮಸ್ಯೆಗಳನ್ನು, ಸವಾಲುಗಳನ್ನು ಎದುರಿಸಬೇಕಾಗುತ್ತದೆ. ನಮ್ಮ ಕಲ್ಪನೆಗೂ, ವಾಸ್ತವಕ್ಕೂ ಅಜಗಜಾಂತರ ವ್ಯತ್ಯಾಸವಿರುತ್ತದೆ. ಎಲ್ಲಾ ಕ್ಷೇತ್ರಗಳಲ್ಲಿ ನಮಗೆ ಬೇಕಾದ ಉಪಕರಣಗಳನ್ನು, ಉತ್ಪನ್ನಗಳನ್ನು ನಾವೇ ತಯಾರಿಸಿ ಸ್ವಾವಲಂಬನೆ ಸಾಧಿಸಬೇಕು. ಇದಕ್ಕಾಗಿ ವಿದೇಶಗಳ ಪರಾವಲಂಬನೆ ಸಲ್ಲದು ಎಂದು ಅವರು ಸಲಹೆ ನೀಡಿದರು. ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವಿವಿಧ ವಿಭಾಗಗಳು ಸಮನ್ವಯತೆಯಿಂದ ಸಂಘಟಿತರಾಗಿ ಕಾರ್ಯನಿರ್ವಹಿಸಬೇಕು. ವಿವಿಧ ವಿಭಾಗಗಳ ಮಧ್ಯೆ ಬೇಧ, ಭಿನ್ನಾಭಿಪ್ರಾಯ ಸಲ್ಲದು ಎಂದು ಅವರು ಕಿವಿಮಾತು ಹೇಳಿದರು.

ಎಸ್.ಡಿ.ಎಂ. ಎಂಜಿನಿಯರಿಂಗ್‍ ಕಾಲೇಜಿನ ಪ್ರಾಂಶುಪಾಲ ಡಾ.ಅಶೋಕ್‍ಕುಮಾರ್. ಟಿ ಸ್ವಾಗತಿಸಿದರು. ವಿಜ್ಞಾನ ಮೇಳದ ಸಂಯೋಜಕಡಾ. ಶಂಸುದ್ದೀನ್ ಉಪಸ್ಥಿತರಿದ್ದರು.
ಡಾ. ರಜತಾ.ಪಿ. ಧನ್ಯವಾದವಿತ್ತರು. ಕೇವಲ್ ಎಂ. ಜೈನ್‍ ಕಾರ್ಯಕ್ರಮ ನಿರ್ವಹಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

6 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

7 hours ago

ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…

7 hours ago

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

11 hours ago

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

1 day ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

1 day ago