Advertisement
ಸುದ್ದಿಗಳು

ಉಜಿರೆ: ರಾಜ್ಯಮಟ್ಟದ ವಿಜ್ಞಾನ ಸ್ಪರ್ಧೆ ಎಕ್ಸ್ ಪೀರಿಯಾ– 2019

Share

ಉಜಿರೆ: ಮನದಲ್ಲಿ ಮೂಡಿದ ಯೋಚನೆಗಳಿಗೆ, ಯೋಜನೆಗಳಿಗೆ ಮೂರ್ತರೂಪ ನೀಡಿ ಪ್ರಾಯೋಗಿಕವಾಗಿ ಪರೀಕ್ಷೆಗೊಳಪಡಿಸಿ ತಜ್ಞರಿಂದ ಅರ್ಹತೆ ಮತ್ತು ಬಳಕೆ ಬಗ್ಗೆ ಅಧಿಕೃತ ಪ್ರಮಾಣಪತ್ರ ಪಡೆದಾಗ ಮಾತ್ರ ತಯಾರಿಸಿದ ಮಾದರಿಗಳು ಸಮಾಜಕ್ಕೆ ಉಪಯುಕ್ತವಾಗುತ್ತವೆ ಎಂದು ಬೆಂಗಳೂರಿನ ಭಾರತೀಯ ವಿಜ್ಞಾನ ಮಂದಿರದ ಪ್ರಾಧ್ಯಾಪಕ ಡಾ. ಎನ್. ಎಸ್. ದಿನೇಶ್ ಹೇಳಿದರು.

ಅವರು ಉಜಿರೆಯ ಎಸ್.ಡಿ.ಎಂ. ಎಂಜಿನಿಯರಿಂಗ್‍ ಕಾಲೇಜಿನಲ್ಲಿ “ಸಂಶೋಧನೆ ಮಾಡಿ, ಅನುಭವಿಸಿ” ಎಂಬ ಧ್ಯೇಯ ವಾಕ್ಯದೊಂದಿಗೆ ಆಯೋಜಿಸಿದ ರಾಜ್ಯಮಟ್ಟದ ವಿಜ್ಞಾನ ಮೇಳವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದರು. ಯುವಜನತೆ ದೇಶದ ಅಮೂಲ್ಯ ಮಾನವ ಸಂಪನ್ಮೂಲವಾಗಿದ್ದು, ಹೊಸ ಚಿಂತನೆಗಳೊಂದಿಗೆ ಸಮಾಜಕ್ಕೆ ಹಾಗೂ ದೇಶಕ್ಕೆ ಉಪಯುಕ್ತವಾದ ಸಂಶೋಧನೆಗಳನ್ನು ನಡೆಸಬೇಕು. ಸಾಮಾನ್ಯವಾಗಿ ವಿಜ್ಞಾನ, ವೈದ್ಯಕೀಯ ಹಾಗೂ ತಂತ್ರಜ್ಞಾನ ಕ್ಷೇತ್ರದಲ್ಲಿ ನಮಗೆ ಬೇಕಾದ ಉಪಕರಣಗಳನ್ನು ನಾವು ವಿದೇಶಗಳಿಂದ ತರಿಸುತ್ತೇವೆ. ನಮ್ಮ ವಿಶಿಷ್ಟ ಯೋಚನೆ, ಯೋಜನೆಗಳಿಂದ ನಮಗೆ ಬೇಕಾದ ಎಲ್ಲಾ ಯಂತ್ರೋಪಕರಣಗಳನ್ನು ನಾವೇ ತಯಾರಿಸಿ ಸ್ವಾವಲಂಬಿಗಳಾಗಬೇಕು ಎಂದು ಅವರು ಸಲಹೆ ನೀಡಿದರು. ಮನದಲ್ಲಿ ಮೂಡಿದ ಕಲ್ಪನೆಗೆ ನಾವು ಮೂರ್ತರೂಪ ನೀಡಿ, ಸಂಶೋಧನೆ ಹಾಗೂ ವಿಶ್ಲೇಷಣೆ ನಡೆಸಿ, ಪ್ರಾಯೋಗಿಕವಾಗಿ ಅದರ ಬಳಕೆ ಮತ್ತು ಉಪಯುಕ್ತತೆ ಬಗ್ಗೆ ತಜ್ಞರಿಂದ ಅಧಿಕೃತ ಪ್ರಮಾಣ ಪತ್ರ ಪಡೆದು ನಂತರ ಅದರ ಉತ್ಪಾದನೆಗೆ ನಾವು ಸಜ್ಜಾಗಬೇಕು. ಈ ಹಂತದಲ್ಲಿ ನಾವು ಅನೇಕ ಸಮಸ್ಯೆಗಳನ್ನು, ಸವಾಲುಗಳನ್ನು ಎದುರಿಸಬೇಕಾಗುತ್ತದೆ. ನಮ್ಮ ಕಲ್ಪನೆಗೂ, ವಾಸ್ತವಕ್ಕೂ ಅಜಗಜಾಂತರ ವ್ಯತ್ಯಾಸವಿರುತ್ತದೆ. ಎಲ್ಲಾ ಕ್ಷೇತ್ರಗಳಲ್ಲಿ ನಮಗೆ ಬೇಕಾದ ಉಪಕರಣಗಳನ್ನು, ಉತ್ಪನ್ನಗಳನ್ನು ನಾವೇ ತಯಾರಿಸಿ ಸ್ವಾವಲಂಬನೆ ಸಾಧಿಸಬೇಕು. ಇದಕ್ಕಾಗಿ ವಿದೇಶಗಳ ಪರಾವಲಂಬನೆ ಸಲ್ಲದು ಎಂದು ಅವರು ಸಲಹೆ ನೀಡಿದರು. ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವಿವಿಧ ವಿಭಾಗಗಳು ಸಮನ್ವಯತೆಯಿಂದ ಸಂಘಟಿತರಾಗಿ ಕಾರ್ಯನಿರ್ವಹಿಸಬೇಕು. ವಿವಿಧ ವಿಭಾಗಗಳ ಮಧ್ಯೆ ಬೇಧ, ಭಿನ್ನಾಭಿಪ್ರಾಯ ಸಲ್ಲದು ಎಂದು ಅವರು ಕಿವಿಮಾತು ಹೇಳಿದರು.

ಎಸ್.ಡಿ.ಎಂ. ಎಂಜಿನಿಯರಿಂಗ್‍ ಕಾಲೇಜಿನ ಪ್ರಾಂಶುಪಾಲ ಡಾ.ಅಶೋಕ್‍ಕುಮಾರ್. ಟಿ ಸ್ವಾಗತಿಸಿದರು. ವಿಜ್ಞಾನ ಮೇಳದ ಸಂಯೋಜಕಡಾ. ಶಂಸುದ್ದೀನ್ ಉಪಸ್ಥಿತರಿದ್ದರು.
ಡಾ. ರಜತಾ.ಪಿ. ಧನ್ಯವಾದವಿತ್ತರು. ಕೇವಲ್ ಎಂ. ಜೈನ್‍ ಕಾರ್ಯಕ್ರಮ ನಿರ್ವಹಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

2 days ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

2 days ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

2 days ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

3 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

3 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

3 days ago