ಬೆಂಗಳೂರು : ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರವು 2,37,893 ಕೋಟಿ ರೂ ಗಾತ್ರದ ಬಜೆಟ್ ಮಂಡಿಸಿದ್ದು, ಇದರಲ್ಲಿ ಕರಾವಳಿ ಹಾಗೂ ಅಡಿಕೆ ಬೆಳೆಗಾರರ ಕಡೆಗೂ ಗಮನಹರಿಸಿದ್ದಾರೆ. ರೈತರ ಪ್ರಮುಖ ಬೇಡಿಕೆಯಾಗಿದ್ದ ಸಾಲಮನ್ನಾ ಬಗ್ಗೆಯೂ ಬಜೆಟ್ನಲ್ಲಿ ಘೋಷಿಸಲಾಗಿದ್ದು, ಅಡಿಕೆ ಬೆಳೆಗಾರರ ಪ್ರಾಥಮಿಕ/ ಮಾರುಕಟ್ಟೆ ಸಹಕಾರ ಸಂಘಗಳಲ್ಲಿ ಪ್ರತಿ ರೈತ ಕುಟುಂಬಕ್ಕೆ ನೀಡುವ
ದೀರ್ಘಾವಧಿ ಕೃಷಿ ಸಾಲದ ಪೈಕಿ ಗರಿಷ್ಠ ಎರಡು ಲಕ್ಷ ರೂ. ವರೆಗಿನ ಸಾಲಕ್ಕೆ ಶೇ.5 ರಷ್ಟು ಬಡ್ಡಿ ವಿನಾಯಿತಿ ಮಾಡುವುದಾಗಿ ಮುಖ್ಯಮಂತ್ರಿ ಘೋಷಿಸಿದ್ದಾರೆ.
2,37,893 ಕೋಟಿ ರೂ ಗಾತ್ರದ ಬಜೆಟ್ ನಲ್ಲಿ ಒಟ್ಟು ₹ 2,33,134 ಕೋಟಿ ಜಮೆಗಳನ್ನು ನಿರೀಕ್ಷಿಸಲಾಗಿದೆ. ಅಂತೆಯೇ 2,37,893 ಕೋಟಿ ವೆಚ್ಚವನ್ನು ಅಂದಾಜಿಸಲಾಗಿದ್ದು, ಆದಾಯಕ್ಕೂ ವೆಚ್ಚಕ್ಕೂ 4759 ಅಂತರವಿದೆ.
ಈ ಬಾರಿಯ ಬಜೆಟ್ನಲ್ಲಿ ಕೃಷಿ ಯಂತ್ರೋಪಕರಣಗಳ ಖರೀದಿಗೆ ಪಡೆಯಲಾದ ಸಾಲದ ಬಡ್ಡಿ ಮನ್ನಾ ಮಾಡುವುದಾಗಿ ಘೋಷಿಸಿದ್ದಾರೆ. ಇದರ ಜೊತೆಗೆ, ರೇಷ್ಮೆ ಹುಳು ಸಂರಕ್ಷಣಾ ಘಟಕ, ಹೈನುಗಾರಿಕಾ ವಲಯ, ಹಂದಿ ಸಾಕಾಣಿಕೆಗೆ ಹೆಚ್ಚಿನ ಆದ್ಯತೆ ನೀಡುವುದಾಗಿ ಸಿಎಂ ಬಜೆಟ್ನಲ್ಲಿ ತಿಳಿಸಿದ್ದಾರೆ. ತೋಟಗಾರಿಕೆ ಬೆಳೆ ವಿಸ್ತರಣೆಗೆ 75 ಕೋಟಿ ರೂ. ವೆಚ್ಚದಲ್ಲಿ ಶೀಥಲೀಕರಣ ಘಟಕ ಸ್ಥಾಪಿಸಲಾಗುವುದು. ಕೃಷಿ ಉತ್ಪನ್ನಗಳ ಸಾಗಾಟಕ್ಕೆ ರೈಲಿನ ನೆರವು ನೀಡಲಾಗುವುದು. ಸಾವಯವ ಕೃಷಿಗೆ 200 ಕೋಟಿ ರೂ. ನೀಡಲಾಗುವುದು. ಶೀಘ್ರದಲ್ಲೇ ಹೊಸ ಕೃಷಿ ನೀತಿ ಜಾರಿಗೆ ತರಲಾಗುವುದು. ಸಣ್ಣ ಮತ್ತು ಅತಿಸಣ್ಣ ರೈತರಿಗೆ 10 ಸಾವಿರ ಕೋಟಿ ರೂ. ನೀಡಲಾಗುವುದು ಎಂದು ಘೋಷಿಸುವ ಮೂಲಕ ಸಿಎಂ ಯಡಿಯೂರಪ್ಪ ರಾಜ್ಯದ ರೈತರಿಗೆ ಸಿಹಿಸುದ್ದಿ ನೀಡಿದ್ದಾರೆ.
ಉಳಿದಂತೆ
.
12.07.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…
ಜ್ಯೋತಿಷ್ಯ ಶಾಸ್ತ್ರದಲ್ಲಿ ಕೇತು ಒಂದು ನಿಗೂಢ ಗ್ರಹವಾಗಿದ್ದು, ಆಧ್ಯಾತ್ಮಿಕತೆ, ಕರ್ಮ, ಮತ್ತು ಜೀವನದಲ್ಲಿ…
ಕೋಲಾರ ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಗ್ರಾಮ ಪಂಚಾಯತಿ ಸೇರಿದಂತೆ ಯಾವುದೇ…
ಹಾವೇರಿ ಜಿಲ್ಲೆಯಲ್ಲಿ ಹರಿಯುವ ವರದಾ ಹಾಗೂ ತುಂಗಭದ್ರಾ ನದಿಗಳಲ್ಲಿ ನೀರಿನ ಮಟ್ಟ ಕ್ರಮೇಣ…
ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದ್ದು, 23 ಅಸಂಘಟಿತ ವರ್ಗಗಳ…
ಹಾವೇರಿ ಜಿಲ್ಲೆಯಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರು ಮಳೆಯಿಂದಾಗಿ 148.57 ಹೆಕ್ಟೇರ್ ಪ್ರದೇಶದಲ್ಲಿದ್ದ…