ಬೆಂಗಳೂರು : ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರವು 2,37,893 ಕೋಟಿ ರೂ ಗಾತ್ರದ ಬಜೆಟ್ ಮಂಡಿಸಿದ್ದು, ಇದರಲ್ಲಿ ಕರಾವಳಿ ಹಾಗೂ ಅಡಿಕೆ ಬೆಳೆಗಾರರ ಕಡೆಗೂ ಗಮನಹರಿಸಿದ್ದಾರೆ. ರೈತರ ಪ್ರಮುಖ ಬೇಡಿಕೆಯಾಗಿದ್ದ ಸಾಲಮನ್ನಾ ಬಗ್ಗೆಯೂ ಬಜೆಟ್ನಲ್ಲಿ ಘೋಷಿಸಲಾಗಿದ್ದು, ಅಡಿಕೆ ಬೆಳೆಗಾರರ ಪ್ರಾಥಮಿಕ/ ಮಾರುಕಟ್ಟೆ ಸಹಕಾರ ಸಂಘಗಳಲ್ಲಿ ಪ್ರತಿ ರೈತ ಕುಟುಂಬಕ್ಕೆ ನೀಡುವ
ದೀರ್ಘಾವಧಿ ಕೃಷಿ ಸಾಲದ ಪೈಕಿ ಗರಿಷ್ಠ ಎರಡು ಲಕ್ಷ ರೂ. ವರೆಗಿನ ಸಾಲಕ್ಕೆ ಶೇ.5 ರಷ್ಟು ಬಡ್ಡಿ ವಿನಾಯಿತಿ ಮಾಡುವುದಾಗಿ ಮುಖ್ಯಮಂತ್ರಿ ಘೋಷಿಸಿದ್ದಾರೆ.
2,37,893 ಕೋಟಿ ರೂ ಗಾತ್ರದ ಬಜೆಟ್ ನಲ್ಲಿ ಒಟ್ಟು ₹ 2,33,134 ಕೋಟಿ ಜಮೆಗಳನ್ನು ನಿರೀಕ್ಷಿಸಲಾಗಿದೆ. ಅಂತೆಯೇ 2,37,893 ಕೋಟಿ ವೆಚ್ಚವನ್ನು ಅಂದಾಜಿಸಲಾಗಿದ್ದು, ಆದಾಯಕ್ಕೂ ವೆಚ್ಚಕ್ಕೂ 4759 ಅಂತರವಿದೆ.
ಈ ಬಾರಿಯ ಬಜೆಟ್ನಲ್ಲಿ ಕೃಷಿ ಯಂತ್ರೋಪಕರಣಗಳ ಖರೀದಿಗೆ ಪಡೆಯಲಾದ ಸಾಲದ ಬಡ್ಡಿ ಮನ್ನಾ ಮಾಡುವುದಾಗಿ ಘೋಷಿಸಿದ್ದಾರೆ. ಇದರ ಜೊತೆಗೆ, ರೇಷ್ಮೆ ಹುಳು ಸಂರಕ್ಷಣಾ ಘಟಕ, ಹೈನುಗಾರಿಕಾ ವಲಯ, ಹಂದಿ ಸಾಕಾಣಿಕೆಗೆ ಹೆಚ್ಚಿನ ಆದ್ಯತೆ ನೀಡುವುದಾಗಿ ಸಿಎಂ ಬಜೆಟ್ನಲ್ಲಿ ತಿಳಿಸಿದ್ದಾರೆ. ತೋಟಗಾರಿಕೆ ಬೆಳೆ ವಿಸ್ತರಣೆಗೆ 75 ಕೋಟಿ ರೂ. ವೆಚ್ಚದಲ್ಲಿ ಶೀಥಲೀಕರಣ ಘಟಕ ಸ್ಥಾಪಿಸಲಾಗುವುದು. ಕೃಷಿ ಉತ್ಪನ್ನಗಳ ಸಾಗಾಟಕ್ಕೆ ರೈಲಿನ ನೆರವು ನೀಡಲಾಗುವುದು. ಸಾವಯವ ಕೃಷಿಗೆ 200 ಕೋಟಿ ರೂ. ನೀಡಲಾಗುವುದು. ಶೀಘ್ರದಲ್ಲೇ ಹೊಸ ಕೃಷಿ ನೀತಿ ಜಾರಿಗೆ ತರಲಾಗುವುದು. ಸಣ್ಣ ಮತ್ತು ಅತಿಸಣ್ಣ ರೈತರಿಗೆ 10 ಸಾವಿರ ಕೋಟಿ ರೂ. ನೀಡಲಾಗುವುದು ಎಂದು ಘೋಷಿಸುವ ಮೂಲಕ ಸಿಎಂ ಯಡಿಯೂರಪ್ಪ ರಾಜ್ಯದ ರೈತರಿಗೆ ಸಿಹಿಸುದ್ದಿ ನೀಡಿದ್ದಾರೆ.
ಉಳಿದಂತೆ
.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…