Advertisement
ಸುದ್ದಿಗಳು

ರಾಜ್ಯ ಮಟ್ಟದ ಅಗ್ರಿಟಿಂಕರಿಂಗ್ ಫೆಸ್ಟ್ : ‘ಬೌದ್ಧಿಕ ಆಸ್ತಿ ಹಕ್ಕುಗಳು’ ವಿಷಯದ ಕುರಿತು ಕೃಷಿ ವಿಚಾರ ಗೋಷ್ಠಿ

Share

ಪುತ್ತೂರು: ಅನ್ವೇಷಣಾ 2019 ಅಗ್ರಿ ಟಿಂಕರಿಂಗ್ ಫೆಸ್ಟ್ ನ ಮೊದಲ ದಿನದ ದ್ವಿತೀಯ ಕೃಷಿ ವಿಚಾರ ಗೋಷ್ಠಿಯು ‘ಬೌದ್ಧಿಕ ಆಸ್ತಿ ಹಕ್ಕುಗಳು(ಪೇಟೆಂಟ್) ವಿಷಯದ ಕುರಿತು ನಡೆಯಿತು.

ಕರ್ನಾಟಕ ಲಘು ಉದ್ಯೋಗ ಭಾರತಿ ಇದರ ಉಪಾಧ್ಯಕ್ಷ ಬಿ.ಎಸ್. ಶ್ರೀನಿವಾಸನ್ ಮಾತನಾಡಿ, ಪೇಟೆಂಟ್ ಬಗ್ಗೆ ತಿಳುವಳಿಕೆ ಅಗತ್ಯವಿದ್ದು ಇದು ಜನ ಸಾಮಾನ್ಯರಿಗೆ ತಲುಪಬೇಕು. ಜೊತೆಗೆ ಈ ವಿಷಯವನ್ನು ಶಾಲೆ-ಕಾಲೇಜುಗಳಲ್ಲೇ ಮಕ್ಕಳಿಗೆ ತಿಳಿಸುವ ಅಗತ್ಯವಿದೆ. ನಮ್ಮ ಹೊಸ ಆವಿಷ್ಕಾರಗಳಿಗೆ ಬೌದ್ಧಿಕ ಆಸ್ತಿ ಹಕ್ಕಿನ ಅಗತ್ಯವಿದ್ದು, ನಮ್ಮ ಬುದ್ಧಿ ಶಕ್ತಿಯಿಂದ ಸಾಧಿಸಿದಂತಹ ಹೊಸ ಅನ್ವೇಷಣೆಯು ಇನ್ಯಾರದೋ ಪಾಲಾಗದಂತೆ ಪೇಟೆಂಟ್ ಸಂರಕ್ಷಿಸುತ್ತದೆ. ಈ ನಿಟ್ಟಿನಲ್ಲಿ ಲಘು ಉದ್ಯೋಗ ಭಾರತಿಯು ಇದಕ್ಕೆ ಸಹಕಾರ ನೀಡುತ್ತದೆ. ಮಾತ್ರವಲ್ಲದೇ ಮಾರ್ಗದರ್ಶನವನ್ನು ನೀಡುತ್ತದೆ ಎಂದು ತಿಳಿಸಿದರು.

ಲಘು ಉದ್ಯೋಗ ಭಾರತಿ ಕರ್ನಾಟಕ ಇದರ ಇಸಿ ಸದಸ್ಯ ರವೀಂದ್ರನಾಥ್ ಕೌಶಿಕ್ ಮಾತನಾಡಿ, ಭಾರತದಲ್ಲಿ ಬೌದ್ಧಿಕ ಆಸ್ತಿ ಹಕ್ಕುಗಳ ಕುರಿತಾದ ಮಾಹಿತಿಯ ಕೊರತೆ ಎದ್ದು ಕಾಣುತ್ತಿದೆ. ಈ ನಿಟ್ಟಿನಲ್ಲಿ ನಾವೆಲ್ಲರೂ ಕಾರ್ಯ ಪ್ರವೃತರಾಗಬೇಕು ಎಂದು ಹೇಳಿದರು.

ಲಘು ಉದ್ಯೋಗ ಭಾರತಿ ಕರ್ನಾಟಕದ ಕಾರ್ಯದರ್ಶಿ ನಾರಾಯಣ ಪ್ರಸನ್ನ ಅವರು ಮಾತನಾಡಿ, ಬೌದ್ಧಿಕ ಆಸ್ತಿ ಹಕ್ಕುಗಳ ಕುರಿತಾಗಿ ಜನ ಸಾಮಾನ್ಯರಲ್ಲಿ ಅರಿವು ಮೂಡಿಸುವ ಕೆಲಸವಾಗಬೇಕು. ಭಾರತದ ಪ್ರತಿಯೊಂದು ಅನ್ವೇಷಣೆಯೂ ಪೇಟೆಂಟ್ ಪಡೆಯುವಂತಾದರೆ ಅಖಂಡ ಭಾರತದ ನಿರ್ಮಾಣ ಶತ ಸಿದ್ಧ ಎಂಬುದಾಗಿ ತಿಳಿಸಿದರು. ಈ ನಿಟ್ಟಿನಲ್ಲಿ ಅನ್ವೇಷಣಾ 2019ರ ಮುಖಾಂತರ ಹೊಸ ಅನ್ವೇಷಣಕ್ಕೆ ದಾರಿ ಇದಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಲಘು ಉದ್ಯೋಗ ಭಾರತಿ ಕರ್ನಾಟಕದ ಅಧ್ಯಕ್ಷ ಪಿ.ಎಸ್ ಶ್ರೀಕಂಠ ದತ್ತ ಅವರು ಉಪಸ್ಥಿತರಿದ್ದರು.

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಕನ್ನಡ ಶಿಕ್ಷಕಿ ಸಾಯಿ ಗೀತಾ ಎಸ್.ರಾವ್ ಸ್ವಾಗತಿಸಿದರು. ಶಾಲಾ ಆಡಳಿತ ಮಂಡಳಿಯ ಸದಸ್ಯರಾದ ಭರತ್ ಪೈ ವಂದಿಸಿದರು. ಶಿಕ್ಷಕಿ ಪದ್ಮಲಕ್ಷ್ಮಿ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

4 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

4 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

4 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

5 days ago