ಸುದ್ದಿಗಳು

ರಾಜ್ಯ ಮಟ್ಟದ ಅಗ್ರಿ ಟಿಂಕರಿಂಗ್ ಫೆಸ್ಟ್: ‘ಕೃಷಿ ಉದ್ಯಮಶೀಲತಾ ಅಭಿವೃದ್ಧಿ’ ಕುರಿತು ಕೃಷಿ ವಿಚಾರ ಗೋಷ್ಠಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪುತ್ತೂರು: ಹಿಂದೆ ಉತ್ತಮ ವಿದ್ಯಾಸಂಸ್ಥೆಯಲ್ಲಿ ಶಿಕ್ಷಣವನ್ನು ಪಡೆಯುವುದೇ ಕನಸಾಗಿತ್ತು. ಆದರೆ ಅದು ಬದಲಾಗಿದೆ. ಉತ್ತಮ ಶಿಕ್ಷಣಸಂಸ್ಥೆಯೊಂದಿಗೆ ಯಾವ ವಿಷಯದಲ್ಲಿ ಯಾವ ಕ್ಷೇತ್ರದಲ್ಲಿ ಉದ್ಯೋಗ ದೊರಕುತ್ತದೋ ಅದನ್ನು ಹರಸಿ ಹೋಗುವಂತಹ ಪರಿಸ್ಥಿತಿ ಉಂಟಾಗಿದೆ. ಇದರ ಬದಲಾಗಿ ವಿದ್ಯಾರ್ಥಿಗಳು ತಮಗಿಷ್ಟ ಬಂದ ಕ್ಷೇತ್ರದಲ್ಲಿ ಉದ್ಯಮಶೀಲರಾಗುವಂತೆ ಪ್ರೇರೇಪಿಸಬೇಕು ಇವರ ಮುಖಾಂತರ ಹಲವಾರು ಉದ್ಯೋಗವನ್ನು ಸೃಷ್ಟಿಸಿ ನೀಡುವಂತರಾಗಬೇಕು ಎಂದು ಬೆಂಗಳೂರಿನ ಸೋನಾ ಗ್ರೂಪ್ ಆಫ್ ಕಂಪೆನಿಯ ಮುಖ್ಯಸ್ಥ ಯಜ್ಞ ನಾರಾಯಣ ಕಮ್ಮಾಜೆ ತಿಳಿಸಿದರು.

Advertisement

ಅವರು ಇಲ್ಲಿನ ತೆಂಕಿಲದ ವಿವೇಕಾನಂದ ಆಂಗ್ಲಮಾಧ್ಯಮ ಶಾಲಾ ಆವರಣದಲ್ಲಿ ನಡೆದ ಅನ್ವೇಷಣಾ- 2019 ರಾಜ್ಯಮಟ್ಟದ ಅಗ್ರಿ ಟಿಂಕರಿಂಗ್ ಫೆಸ್ಟ್ ನ ಕೊನೆಯ ದಿನದ ತೃತೀಯ ಕೃಷಿ ವಿಚಾರ ಗೋಷ್ಠಿಯಲ್ಲಿ ‘ಕೃಷಿ ಉದ್ಯಮಶೀಲನಾ ಅಭಿವೃದ್ಧಿ’ ಎಂಬ ವಿಷಯದ ಕುರಿತು ಸಂಪನ್ಮೂಲ ವ್ಯಕ್ತಿಗಳಾಗಿ ರವಿವಾರ ಮಾತನಾಡಿದರು.  ಪ್ರತಿಯೊಬ್ಬ ಯುವಕರು ಪಂಚಸೂತ್ರಗಳನ್ನು ಅಳವಡಿಕೊಂಡರೆ ಉದ್ಯಮಶೀಲರಾಗಲು ಸಾಧ್ಯ. ಈ ಪಂಚಸೂತ್ರಗಳು ಕೇವಲ ಇಂಜಿನಿಯರಿಂಗ್ ಅಥವಾ ಇಂತದ್ದೇ ಕ್ಷೇತ್ರಕ್ಕೆ ಸೀಮಿತವಾಗಿಲ್ಲ ಇದು ಕೃಷಿಯಿಂದ ಹಿಡಿದು ಎಲ್ಲಾ ಉದ್ಯೋಗಕ್ಕೆ ಅಥವಾ ವ್ಯವಹಾರಕ್ಕೆ ಅನ್ವಯವಾಗುತ್ತದೆ ಎಂದು ತಿಳಿಸಿದರು.

ಧರ್ಮ ಟೆಕ್ನಾಲಜೀಸ್ ಪ್ರೈವೇಟ್ ಲಿ.ನ ವ್ಯವಸ್ಥಾಪಕ ನಿರ್ದೇಶಕಿ ಶೈಲಜಾ ವಿಠಲ್ ಮಾತನಾಡಿ, ಅನ್ವೇಷಣಾ ಪ್ರದರ್ಶನವು ಕೇವಲ ಪ್ರದರ್ಶನಕ್ಕೆ ಮಾತ್ರ ಮೀಸಲಾಗದೆ ಅದನ್ನು ಬೆಳೆಸುವ ಹಾಗೂ ಅಭಿವೃದ್ಧಿ ಪಡಿಸುವ ಕರ್ತವ್ಯ ನಮ್ಮಮೇಲಿದೆ ಎಂದರಲ್ಲದೆ ನೂತನ ಅನ್ವೇಷಣಾಕಾರರು ಗೆಲುವಿನ ಪಥವನ್ನು ಕಾಣಲಿ ಎಂದು ಹಾರೈಸಿದರು.

Advertisement

ಲಘು ಉದ್ಯೋಗ ಭಾರತಿ ಕರ್ನಾಟಕ ಇದರ ಇಸಿ ಸದಸ್ಯ ರವೀಂದ್ರನಾಥ್ ಕೌಶಿಕ್ ಮಾತನಾಡಿ, ನಿರುದ್ಯೋಗ ದೇಶದ ಸಮಸ್ಯೆಯಾಗಿರುವುದರಿಂದ ಅದರ ನಿವಾರಣೆಗೆ ಉತ್ತಮ ಕೆಲಸದ ಕೌಶಲ್ಯಗಳನ್ನು ರೂಪಿಸುವುದು ಅತ್ಯಗತ್ಯವಾಗಿದೆ. ಜೀವನದ ಪ್ರಗತಿಗೆ ಗೆಲುವು ಎಂಬುದು ನಮ್ಮ ತಲೆಯನ್ನು ತುಂಬಬಾರದು ಹಾಗೆಯೆ ಸೋಲು ನಮ್ಮ ಮನಸ್ಸನ್ನು ತುಂಬಬಾರದು ಎಂದು ಹೇಳಿದರು.  ದಿನಕರ ಮೂರ್ತಿ ಕೃಷ್ಣ ಮಾತನಾಡಿ, ಯಾವುದೇ ಸಂದರ್ಭಗಳನ್ನು ಅದರ ಪೂರ್ಣ ಅರಿವಾಗದೆ ಮತ್ತು ಒಪ್ಪಿಕೊಳ್ಳದೆ ಅದನ್ನು ಯಾಕೆ ಎಂಬ ಪ್ರಶ್ನೆಯೊಂದಿಗೆ ನಮ್ಮ ಪ್ರಶ್ನೆಗಳಿಗೆ ಉತ್ತರವನ್ನು ಕಂಡುಕೊಳ್ಳಬೇಕು, ಹಾಗೆಯೇ ಪ್ರಗತಿಯ ಜೀವನಕ್ಕೆ ಶ್ರಮ ಅತ್ಯಗತ್ಯ ಎಂದು ತಿಳಿಸಿದರು.

Advertisement

ಲಘು ಉದ್ಯೋಗ ಭಾರತಿ ಕರ್ನಾಟಕದ ಕಾರ್ಯದರ್ಶಿ ನಾರಾಯಣ ಪ್ರಸನ್ನ ಅವರು ಮಾತನಾಡಿ, ಸಮಯವು ಮೌಲ್ಯಯುತವಾದದ್ದು ಅದನ್ನು ಸದುಪಯೋಗ ಪಡಿಸಿಕೊಂಡು ಸಾಧನೆಗೆ ಬದ್ಧರಾದರೆ ಉದ್ಯಮಶೀಲರಾಗಬಹುದು ಎಂದು ತಿಳಿಸಿದರು. ಶಿವಾನಂದ ಅವತಿಮಾರ್ ಮಾತನಾಡಿ, ಸಾರ್ಥಕ ಜೀವನ ನಡೆಸುವುದೇ ಜೀವನದ ಗುರಿಯಾಗಿರಲಿ, ಉದ್ಯಮಶೀಲರು ಸರಿಯಾದ ಮಾರ್ಗವನ್ನು ಆಯ್ದುಕೊಂಡು ಉದ್ಯಮವನ್ನು ಬೆಳೆಸಬೇಕು ಎಂದರು.

ಈ ಸಂದರ್ಭದಲ್ಲಿ ಲಘು ಉದ್ಯೋಗ ಭಾರತಿ ಕರ್ನಾಟಕದ ಅಧ್ಯಕ್ಷ ಪಿ.ಎಸ್. ಶ್ರೀಕಂಠದತ್ತ ಅವರು ಉಪಸ್ಥಿತರಿದ್ದರು. ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಆಶಾ ಕೆ. ಸ್ವಾಗತಿಸಿದರು. ಶಾಲಾ ಆಡಳಿತ ಮಂಡಳಿಯ ಸದಸ್ಯ ಚಂದಶೇಖರ ವಂದಿಸಿದರು. ಶಿಕ್ಷಕಿ ಸುಪ್ರೀತಾ ರೈ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಕ್ರಮ ಅಡಿಕೆ ಸಾಗಾಟ ಪತ್ತೆ | 466 ಚೀಲ ಅಡಿಕೆ ವಶಕ್ಕೆ ಪಡೆದ ಅಸ್ಸಾಂ ರೈಫಲ್ಸ್‌

ಮಿಜೋರಾಂನ ಚಾಂಫೈನಲ್ಲಿ ಅಸ್ಸಾಂ ರೈಫಲ್ಸ್ 466 ಚೀಲ ಅಡಿಕೆಯನ್ನು ವಶಕ್ಕೆ ಪಡೆದಿದೆ. ಈ…

6 hours ago

ಆ.15 ರಿಂದ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ನಿಷೇಧಿಸಿ ಸರ್ಕಾರ ಆದೇಶ

ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ …

8 hours ago

15 ದಿನಗಳಿಗೊಮ್ಮೆ ಶಾಲೆ, ಅಂಗನವಾಡಿಗಳ ನೀರಿನ ತಪಾಸಣೆ – ಜಿ. ಪಂ ಸಿಇಒ ಸೂಚನೆ

ಪ್ರತಿ 15 ದಿನಗಳಿಗೊಮ್ಮೆ ಶಾಲೆ ಮತ್ತು ಅಂಗನವಾಡಿಗಳ ಕುಡಿಯುವ ನೀರನ್ನು ಪರೀಕ್ಷೆಗೊಳಪಡಿಸಿ  ತಪಾಸಣೆ…

9 hours ago

ಹವಾಮಾನ ವರದಿ | 13-08-2025 | ಆ.21 ರವರೆಗೆ ಮಳೆ ವಿಸ್ತರಣೆ ಎಲ್ಲಿ ? ವಾಯುಭಾರ ಕುಸಿತದ ಕಾರಣದಿಂದ ಮಳೆ ಎಲ್ಲೆಲ್ಲಾ ಇದೆ..?

ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…

15 hours ago

ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಸಹಾಯಧನ |ವಿವಿಧ ಕಾರ್ಯಕ್ರಮಗಳ ಮೂಲಕ ರೈತರಿಗೆ ನೆರವು

ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…

22 hours ago

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…

22 hours ago