Advertisement
ಸುದ್ದಿಗಳು

ರಾಜ್ಯ ಮಟ್ಟದ ಅಗ್ರಿ ಟಿಂಕರಿಂಗ್ ಫೆಸ್ಟ್: ‘ಕೃಷಿ ಉದ್ಯಮಶೀಲತಾ ಅಭಿವೃದ್ಧಿ’ ಕುರಿತು ಕೃಷಿ ವಿಚಾರ ಗೋಷ್ಠಿ

Share

ಪುತ್ತೂರು: ಹಿಂದೆ ಉತ್ತಮ ವಿದ್ಯಾಸಂಸ್ಥೆಯಲ್ಲಿ ಶಿಕ್ಷಣವನ್ನು ಪಡೆಯುವುದೇ ಕನಸಾಗಿತ್ತು. ಆದರೆ ಅದು ಬದಲಾಗಿದೆ. ಉತ್ತಮ ಶಿಕ್ಷಣಸಂಸ್ಥೆಯೊಂದಿಗೆ ಯಾವ ವಿಷಯದಲ್ಲಿ ಯಾವ ಕ್ಷೇತ್ರದಲ್ಲಿ ಉದ್ಯೋಗ ದೊರಕುತ್ತದೋ ಅದನ್ನು ಹರಸಿ ಹೋಗುವಂತಹ ಪರಿಸ್ಥಿತಿ ಉಂಟಾಗಿದೆ. ಇದರ ಬದಲಾಗಿ ವಿದ್ಯಾರ್ಥಿಗಳು ತಮಗಿಷ್ಟ ಬಂದ ಕ್ಷೇತ್ರದಲ್ಲಿ ಉದ್ಯಮಶೀಲರಾಗುವಂತೆ ಪ್ರೇರೇಪಿಸಬೇಕು ಇವರ ಮುಖಾಂತರ ಹಲವಾರು ಉದ್ಯೋಗವನ್ನು ಸೃಷ್ಟಿಸಿ ನೀಡುವಂತರಾಗಬೇಕು ಎಂದು ಬೆಂಗಳೂರಿನ ಸೋನಾ ಗ್ರೂಪ್ ಆಫ್ ಕಂಪೆನಿಯ ಮುಖ್ಯಸ್ಥ ಯಜ್ಞ ನಾರಾಯಣ ಕಮ್ಮಾಜೆ ತಿಳಿಸಿದರು.

ಅವರು ಇಲ್ಲಿನ ತೆಂಕಿಲದ ವಿವೇಕಾನಂದ ಆಂಗ್ಲಮಾಧ್ಯಮ ಶಾಲಾ ಆವರಣದಲ್ಲಿ ನಡೆದ ಅನ್ವೇಷಣಾ- 2019 ರಾಜ್ಯಮಟ್ಟದ ಅಗ್ರಿ ಟಿಂಕರಿಂಗ್ ಫೆಸ್ಟ್ ನ ಕೊನೆಯ ದಿನದ ತೃತೀಯ ಕೃಷಿ ವಿಚಾರ ಗೋಷ್ಠಿಯಲ್ಲಿ ‘ಕೃಷಿ ಉದ್ಯಮಶೀಲನಾ ಅಭಿವೃದ್ಧಿ’ ಎಂಬ ವಿಷಯದ ಕುರಿತು ಸಂಪನ್ಮೂಲ ವ್ಯಕ್ತಿಗಳಾಗಿ ರವಿವಾರ ಮಾತನಾಡಿದರು.  ಪ್ರತಿಯೊಬ್ಬ ಯುವಕರು ಪಂಚಸೂತ್ರಗಳನ್ನು ಅಳವಡಿಕೊಂಡರೆ ಉದ್ಯಮಶೀಲರಾಗಲು ಸಾಧ್ಯ. ಈ ಪಂಚಸೂತ್ರಗಳು ಕೇವಲ ಇಂಜಿನಿಯರಿಂಗ್ ಅಥವಾ ಇಂತದ್ದೇ ಕ್ಷೇತ್ರಕ್ಕೆ ಸೀಮಿತವಾಗಿಲ್ಲ ಇದು ಕೃಷಿಯಿಂದ ಹಿಡಿದು ಎಲ್ಲಾ ಉದ್ಯೋಗಕ್ಕೆ ಅಥವಾ ವ್ಯವಹಾರಕ್ಕೆ ಅನ್ವಯವಾಗುತ್ತದೆ ಎಂದು ತಿಳಿಸಿದರು.

ಧರ್ಮ ಟೆಕ್ನಾಲಜೀಸ್ ಪ್ರೈವೇಟ್ ಲಿ.ನ ವ್ಯವಸ್ಥಾಪಕ ನಿರ್ದೇಶಕಿ ಶೈಲಜಾ ವಿಠಲ್ ಮಾತನಾಡಿ, ಅನ್ವೇಷಣಾ ಪ್ರದರ್ಶನವು ಕೇವಲ ಪ್ರದರ್ಶನಕ್ಕೆ ಮಾತ್ರ ಮೀಸಲಾಗದೆ ಅದನ್ನು ಬೆಳೆಸುವ ಹಾಗೂ ಅಭಿವೃದ್ಧಿ ಪಡಿಸುವ ಕರ್ತವ್ಯ ನಮ್ಮಮೇಲಿದೆ ಎಂದರಲ್ಲದೆ ನೂತನ ಅನ್ವೇಷಣಾಕಾರರು ಗೆಲುವಿನ ಪಥವನ್ನು ಕಾಣಲಿ ಎಂದು ಹಾರೈಸಿದರು.

ಲಘು ಉದ್ಯೋಗ ಭಾರತಿ ಕರ್ನಾಟಕ ಇದರ ಇಸಿ ಸದಸ್ಯ ರವೀಂದ್ರನಾಥ್ ಕೌಶಿಕ್ ಮಾತನಾಡಿ, ನಿರುದ್ಯೋಗ ದೇಶದ ಸಮಸ್ಯೆಯಾಗಿರುವುದರಿಂದ ಅದರ ನಿವಾರಣೆಗೆ ಉತ್ತಮ ಕೆಲಸದ ಕೌಶಲ್ಯಗಳನ್ನು ರೂಪಿಸುವುದು ಅತ್ಯಗತ್ಯವಾಗಿದೆ. ಜೀವನದ ಪ್ರಗತಿಗೆ ಗೆಲುವು ಎಂಬುದು ನಮ್ಮ ತಲೆಯನ್ನು ತುಂಬಬಾರದು ಹಾಗೆಯೆ ಸೋಲು ನಮ್ಮ ಮನಸ್ಸನ್ನು ತುಂಬಬಾರದು ಎಂದು ಹೇಳಿದರು.  ದಿನಕರ ಮೂರ್ತಿ ಕೃಷ್ಣ ಮಾತನಾಡಿ, ಯಾವುದೇ ಸಂದರ್ಭಗಳನ್ನು ಅದರ ಪೂರ್ಣ ಅರಿವಾಗದೆ ಮತ್ತು ಒಪ್ಪಿಕೊಳ್ಳದೆ ಅದನ್ನು ಯಾಕೆ ಎಂಬ ಪ್ರಶ್ನೆಯೊಂದಿಗೆ ನಮ್ಮ ಪ್ರಶ್ನೆಗಳಿಗೆ ಉತ್ತರವನ್ನು ಕಂಡುಕೊಳ್ಳಬೇಕು, ಹಾಗೆಯೇ ಪ್ರಗತಿಯ ಜೀವನಕ್ಕೆ ಶ್ರಮ ಅತ್ಯಗತ್ಯ ಎಂದು ತಿಳಿಸಿದರು.

ಲಘು ಉದ್ಯೋಗ ಭಾರತಿ ಕರ್ನಾಟಕದ ಕಾರ್ಯದರ್ಶಿ ನಾರಾಯಣ ಪ್ರಸನ್ನ ಅವರು ಮಾತನಾಡಿ, ಸಮಯವು ಮೌಲ್ಯಯುತವಾದದ್ದು ಅದನ್ನು ಸದುಪಯೋಗ ಪಡಿಸಿಕೊಂಡು ಸಾಧನೆಗೆ ಬದ್ಧರಾದರೆ ಉದ್ಯಮಶೀಲರಾಗಬಹುದು ಎಂದು ತಿಳಿಸಿದರು. ಶಿವಾನಂದ ಅವತಿಮಾರ್ ಮಾತನಾಡಿ, ಸಾರ್ಥಕ ಜೀವನ ನಡೆಸುವುದೇ ಜೀವನದ ಗುರಿಯಾಗಿರಲಿ, ಉದ್ಯಮಶೀಲರು ಸರಿಯಾದ ಮಾರ್ಗವನ್ನು ಆಯ್ದುಕೊಂಡು ಉದ್ಯಮವನ್ನು ಬೆಳೆಸಬೇಕು ಎಂದರು.

ಈ ಸಂದರ್ಭದಲ್ಲಿ ಲಘು ಉದ್ಯೋಗ ಭಾರತಿ ಕರ್ನಾಟಕದ ಅಧ್ಯಕ್ಷ ಪಿ.ಎಸ್. ಶ್ರೀಕಂಠದತ್ತ ಅವರು ಉಪಸ್ಥಿತರಿದ್ದರು. ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಆಶಾ ಕೆ. ಸ್ವಾಗತಿಸಿದರು. ಶಾಲಾ ಆಡಳಿತ ಮಂಡಳಿಯ ಸದಸ್ಯ ಚಂದಶೇಖರ ವಂದಿಸಿದರು. ಶಿಕ್ಷಕಿ ಸುಪ್ರೀತಾ ರೈ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

5 hours ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

5 hours ago

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

12 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

14 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

23 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

23 hours ago