Advertisement
ಸುದ್ದಿಗಳು

ರಾಜ್ಯ ಮಟ್ಟದ ಅಗ್ರಿ ಟಿಂಕರಿಂಗ್ ಫೆಸ್ಟ್: ‘ಕೃಷಿ ಉದ್ಯಮಶೀಲತಾ ಅಭಿವೃದ್ಧಿ’ ಕುರಿತು ಕೃಷಿ ವಿಚಾರ ಗೋಷ್ಠಿ

Share

ಪುತ್ತೂರು: ಹಿಂದೆ ಉತ್ತಮ ವಿದ್ಯಾಸಂಸ್ಥೆಯಲ್ಲಿ ಶಿಕ್ಷಣವನ್ನು ಪಡೆಯುವುದೇ ಕನಸಾಗಿತ್ತು. ಆದರೆ ಅದು ಬದಲಾಗಿದೆ. ಉತ್ತಮ ಶಿಕ್ಷಣಸಂಸ್ಥೆಯೊಂದಿಗೆ ಯಾವ ವಿಷಯದಲ್ಲಿ ಯಾವ ಕ್ಷೇತ್ರದಲ್ಲಿ ಉದ್ಯೋಗ ದೊರಕುತ್ತದೋ ಅದನ್ನು ಹರಸಿ ಹೋಗುವಂತಹ ಪರಿಸ್ಥಿತಿ ಉಂಟಾಗಿದೆ. ಇದರ ಬದಲಾಗಿ ವಿದ್ಯಾರ್ಥಿಗಳು ತಮಗಿಷ್ಟ ಬಂದ ಕ್ಷೇತ್ರದಲ್ಲಿ ಉದ್ಯಮಶೀಲರಾಗುವಂತೆ ಪ್ರೇರೇಪಿಸಬೇಕು ಇವರ ಮುಖಾಂತರ ಹಲವಾರು ಉದ್ಯೋಗವನ್ನು ಸೃಷ್ಟಿಸಿ ನೀಡುವಂತರಾಗಬೇಕು ಎಂದು ಬೆಂಗಳೂರಿನ ಸೋನಾ ಗ್ರೂಪ್ ಆಫ್ ಕಂಪೆನಿಯ ಮುಖ್ಯಸ್ಥ ಯಜ್ಞ ನಾರಾಯಣ ಕಮ್ಮಾಜೆ ತಿಳಿಸಿದರು.

ಅವರು ಇಲ್ಲಿನ ತೆಂಕಿಲದ ವಿವೇಕಾನಂದ ಆಂಗ್ಲಮಾಧ್ಯಮ ಶಾಲಾ ಆವರಣದಲ್ಲಿ ನಡೆದ ಅನ್ವೇಷಣಾ- 2019 ರಾಜ್ಯಮಟ್ಟದ ಅಗ್ರಿ ಟಿಂಕರಿಂಗ್ ಫೆಸ್ಟ್ ನ ಕೊನೆಯ ದಿನದ ತೃತೀಯ ಕೃಷಿ ವಿಚಾರ ಗೋಷ್ಠಿಯಲ್ಲಿ ‘ಕೃಷಿ ಉದ್ಯಮಶೀಲನಾ ಅಭಿವೃದ್ಧಿ’ ಎಂಬ ವಿಷಯದ ಕುರಿತು ಸಂಪನ್ಮೂಲ ವ್ಯಕ್ತಿಗಳಾಗಿ ರವಿವಾರ ಮಾತನಾಡಿದರು.  ಪ್ರತಿಯೊಬ್ಬ ಯುವಕರು ಪಂಚಸೂತ್ರಗಳನ್ನು ಅಳವಡಿಕೊಂಡರೆ ಉದ್ಯಮಶೀಲರಾಗಲು ಸಾಧ್ಯ. ಈ ಪಂಚಸೂತ್ರಗಳು ಕೇವಲ ಇಂಜಿನಿಯರಿಂಗ್ ಅಥವಾ ಇಂತದ್ದೇ ಕ್ಷೇತ್ರಕ್ಕೆ ಸೀಮಿತವಾಗಿಲ್ಲ ಇದು ಕೃಷಿಯಿಂದ ಹಿಡಿದು ಎಲ್ಲಾ ಉದ್ಯೋಗಕ್ಕೆ ಅಥವಾ ವ್ಯವಹಾರಕ್ಕೆ ಅನ್ವಯವಾಗುತ್ತದೆ ಎಂದು ತಿಳಿಸಿದರು.

ಧರ್ಮ ಟೆಕ್ನಾಲಜೀಸ್ ಪ್ರೈವೇಟ್ ಲಿ.ನ ವ್ಯವಸ್ಥಾಪಕ ನಿರ್ದೇಶಕಿ ಶೈಲಜಾ ವಿಠಲ್ ಮಾತನಾಡಿ, ಅನ್ವೇಷಣಾ ಪ್ರದರ್ಶನವು ಕೇವಲ ಪ್ರದರ್ಶನಕ್ಕೆ ಮಾತ್ರ ಮೀಸಲಾಗದೆ ಅದನ್ನು ಬೆಳೆಸುವ ಹಾಗೂ ಅಭಿವೃದ್ಧಿ ಪಡಿಸುವ ಕರ್ತವ್ಯ ನಮ್ಮಮೇಲಿದೆ ಎಂದರಲ್ಲದೆ ನೂತನ ಅನ್ವೇಷಣಾಕಾರರು ಗೆಲುವಿನ ಪಥವನ್ನು ಕಾಣಲಿ ಎಂದು ಹಾರೈಸಿದರು.

ಲಘು ಉದ್ಯೋಗ ಭಾರತಿ ಕರ್ನಾಟಕ ಇದರ ಇಸಿ ಸದಸ್ಯ ರವೀಂದ್ರನಾಥ್ ಕೌಶಿಕ್ ಮಾತನಾಡಿ, ನಿರುದ್ಯೋಗ ದೇಶದ ಸಮಸ್ಯೆಯಾಗಿರುವುದರಿಂದ ಅದರ ನಿವಾರಣೆಗೆ ಉತ್ತಮ ಕೆಲಸದ ಕೌಶಲ್ಯಗಳನ್ನು ರೂಪಿಸುವುದು ಅತ್ಯಗತ್ಯವಾಗಿದೆ. ಜೀವನದ ಪ್ರಗತಿಗೆ ಗೆಲುವು ಎಂಬುದು ನಮ್ಮ ತಲೆಯನ್ನು ತುಂಬಬಾರದು ಹಾಗೆಯೆ ಸೋಲು ನಮ್ಮ ಮನಸ್ಸನ್ನು ತುಂಬಬಾರದು ಎಂದು ಹೇಳಿದರು.  ದಿನಕರ ಮೂರ್ತಿ ಕೃಷ್ಣ ಮಾತನಾಡಿ, ಯಾವುದೇ ಸಂದರ್ಭಗಳನ್ನು ಅದರ ಪೂರ್ಣ ಅರಿವಾಗದೆ ಮತ್ತು ಒಪ್ಪಿಕೊಳ್ಳದೆ ಅದನ್ನು ಯಾಕೆ ಎಂಬ ಪ್ರಶ್ನೆಯೊಂದಿಗೆ ನಮ್ಮ ಪ್ರಶ್ನೆಗಳಿಗೆ ಉತ್ತರವನ್ನು ಕಂಡುಕೊಳ್ಳಬೇಕು, ಹಾಗೆಯೇ ಪ್ರಗತಿಯ ಜೀವನಕ್ಕೆ ಶ್ರಮ ಅತ್ಯಗತ್ಯ ಎಂದು ತಿಳಿಸಿದರು.

ಲಘು ಉದ್ಯೋಗ ಭಾರತಿ ಕರ್ನಾಟಕದ ಕಾರ್ಯದರ್ಶಿ ನಾರಾಯಣ ಪ್ರಸನ್ನ ಅವರು ಮಾತನಾಡಿ, ಸಮಯವು ಮೌಲ್ಯಯುತವಾದದ್ದು ಅದನ್ನು ಸದುಪಯೋಗ ಪಡಿಸಿಕೊಂಡು ಸಾಧನೆಗೆ ಬದ್ಧರಾದರೆ ಉದ್ಯಮಶೀಲರಾಗಬಹುದು ಎಂದು ತಿಳಿಸಿದರು. ಶಿವಾನಂದ ಅವತಿಮಾರ್ ಮಾತನಾಡಿ, ಸಾರ್ಥಕ ಜೀವನ ನಡೆಸುವುದೇ ಜೀವನದ ಗುರಿಯಾಗಿರಲಿ, ಉದ್ಯಮಶೀಲರು ಸರಿಯಾದ ಮಾರ್ಗವನ್ನು ಆಯ್ದುಕೊಂಡು ಉದ್ಯಮವನ್ನು ಬೆಳೆಸಬೇಕು ಎಂದರು.

ಈ ಸಂದರ್ಭದಲ್ಲಿ ಲಘು ಉದ್ಯೋಗ ಭಾರತಿ ಕರ್ನಾಟಕದ ಅಧ್ಯಕ್ಷ ಪಿ.ಎಸ್. ಶ್ರೀಕಂಠದತ್ತ ಅವರು ಉಪಸ್ಥಿತರಿದ್ದರು. ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಆಶಾ ಕೆ. ಸ್ವಾಗತಿಸಿದರು. ಶಾಲಾ ಆಡಳಿತ ಮಂಡಳಿಯ ಸದಸ್ಯ ಚಂದಶೇಖರ ವಂದಿಸಿದರು. ಶಿಕ್ಷಕಿ ಸುಪ್ರೀತಾ ರೈ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ

ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…

14 hours ago

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

2 days ago

ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…

2 days ago

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

2 days ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

3 days ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

3 days ago