Advertisement
MIRROR FOCUS

ರಾಜ್ಯ ಹೆದ್ದಾರಿ ಬದಿಯಲ್ಲಿ ಹಲಸಿನ ಘಮ ಘಮ…!

Share

ಸುಳ್ಯ: ನೆರೆಯ ಕೇರಳ ರಾಜ್ಯ ಹಲಸನ್ನು ರಾಜ್ಯದ ಅಧಿಕೃತ ಫಲ ಎಂದು ಘೋಷಣೆಯಾದ ಕಾರಣ ಈಗ ಆ ರಾಜ್ಯದಲ್ಲಿ ಹಲಸಿನ ಗ್ಲಾಮರ್, ಗೌರವ ಹೆಚ್ಚಿದೆ.

ಅದೇ ಕರ್ನಾಟಕದ ರಾಜ ಬೀದಿಗಳ ಬದಿಯಲ್ಲಿಯೂ ಹಣ್ಣುಗಳ ರಾಜ ಹಲಸಿಗೆ ಈಗ ರಾಜ ಮರ್ಯಾದೆ ಮತ್ತು ಎಲ್ಲಿಲ್ಲದ ಬೇಡಿಕೆ. ದಕ್ಷಣ ಕನ್ನಡ ಜಿಲ್ಲೆಯ ವಿವಿಧ ಹೆದ್ದಾರಿಗಳಲ್ಲಿ ಪ್ರಯಾಣಿಸುತ್ತಿದ್ದರೆ ರಸ್ತೆ ಬದಿಯಲ್ಲೆಲ್ಲ ಹಲಸಿನ ಹಣ್ಣಿನ ವ್ಯಾಪಾರದ್ದೇ ಭರಾಟೆ. ಎಲ್ಲಿ ನೋಡಿದರೂ ರಸ್ತೆ ಬದಿಯಲ್ಲಿ ಅಂದವಾಗಿ ಜೋಡಿಸಿಟ್ಟ ಹಣ್ಣುಗಳೇ ಗೋಚರಿಸುತ್ತಿದೆ, ಜೊತೆಗೆ ಬಾಯಲ್ಲಿ ನೀರೂರಿಸುವ ಹಲಸಿನ ಹಣ್ಣುಗಳ ಘಮ ಘಮ ಮೂಗಿಗೆ ಬಡಿಯುತ್ತದೆ. ಹಲವು ರಸ್ತೆಗಳ ಬದಿಯಲ್ಲಿ ಈಗ ಹಲಸು ಹಣ್ಣಿನ ವ್ಯಾಪಾರದ ದೃಶ್ಯ ಸಾಮಾನ್ಯವಾಗಿ ಕಂಡು ಬರುತ್ತದೆ. ಅದರಲ್ಲೂ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಪೆರಿಯಶಾಂತಿಯಿಂದ ತಿರುಗಿ ಧರ್ಮಸ್ಥಳಕ್ಕೆ ಹೋಗುವ ಹೆದ್ದಾರಿ ಬದಿಯಲ್ಲಿ ಅತೀ ಹೆಚ್ಚು ಹಲಸು ಮಾರಾಟ ಕಂಡು ಬರುತ್ತದೆ. ಧರ್ಮಸ್ಥಳ, ಸುಬ್ರಹ್ಮಣ್ಯ ಕ್ಷೆತ್ರ ದರ್ಶನಕ್ಕೆ ಬರುವ ರಾಜ್ಯ, ಅಂತಾರಾಜ್ಯ ಯಾತ್ರಿಕರಿಂದ ಹೆಚ್ಚು ಬೇಡಿಕೆ ಇರುವ ಕಾರಣ ಇಲ್ಲಿ ಅತೀ ಹೆಚ್ಚು ಹಲಸಿನ ವ್ಯಾಪಾರ ನಡೆಯುತಿದೆ. ಈ ಮಾರ್ಗದಲ್ಲಿ ಬರುವ ಸಾವಿರಾರು ಮಂದಿ ಇಲ್ಲಿನ ಹಲಸಿನ ಹಣ್ಣಿನ ಸಿಹಿಯನ್ನು ಸವಿದು ಮರಳುತ್ತಾರೆ. ಹಲಸಿನ ಹಣ್ಣು, ಹಲಸಿನ ಕಾಯಿ ಮತ್ತು ಹಣ್ಣಿನ ಎಸಳುಗಳು ಪ್ಯಾಕೇಟ್‍ಗಳಾಗಿ ಲಭ್ಯ. ಯಾತ್ರಿಕರು ವಾಹನ ನಿಲ್ಲಿಸಿ ಬೆಲೆಗೆ ಚರ್ಚೆ ನಡೆಸಿ ಕೆಲವರು ಇಡೀ ಹಲಸಿನ ಕಾಯಿ ಅಥವಾ ಹಣ್ಣನ್ನು ಖರೀದಿಸಿ ಹೋದರೆ ಕೆಲವರು ಎಸಳಿನ ಪ್ಯಾಕೆಟ್ ಖರೀದಿಸಿ ತೃಪ್ತರಾಗುತ್ತಾರೆ.

ನಮ್ಮ ಮನೆಯ ಹಿತ್ತಲಿನಲ್ಲಿ ಮತ್ತು ತೋಟದಲ್ಲಿನ ಹಲಸಿನ ಮರಗಳಲ್ಲಿ ಸಮೃದ್ಧವಾಗಿ ಬೆಳೆಯುವ ಟನ್‍ಗಟ್ಟಲೆ ಹಲಸು ಹಣ್ಣಾಗಿ ಬಿದ್ದು ಕರಗಿ ನಾಶವಾಗುವುದೇ ಹೆಚ್ಚು. ಹಲಸಿನ ಕಾಯಿ ಮತ್ತು ಹಣ್ಣಿನಿಂದ ಹತ್ತಾರು ಮೌಲ್ಯ ವರ್ಧಿತ ಉತ್ಪನ್ನಗಳನ್ನು ಮತ್ತು ತಿಂಡಿ ತಿನಿಸುಗಳನ್ನು ಮಾಡಬಹುದಾದರೂ ಸಮೃದ್ಧ ಮತ್ತು ರುಚಿಕರವಾದ ಹಲಸು ಸರಿಯಾದ ರೀತಿಯಲ್ಲಿ ಉಪಯೋಗವಾಗುತ್ತಿಲ್ಲ ಎಂಬ ಕೊರಗು ಇದೆ.
ಅದನ್ನು ಮನಗಂಡು ಕೆಲವು ಮಂದಿ ಆಸಕ್ತಿ ವಹಿಸಿ ಅಲ್ಲಲ್ಲಿ ಒಂದಷ್ಟು ಹಲಸನ್ನು ತಂದು ವ್ಯಾಪಾರ ನಡೆಸುತ್ತಾರೆ. ಸ್ಥಳೀಯವಾಗಿ ಮನೆಗಳಿಂದ ನಿರ್ದಿಷ್ಟ ಹಣ ನೀಡಿ ಹಲಸನ್ನು ಖರೀದಿಸಿ ಇವರು ವ್ಯಾಪಾರಕ್ಕೆ ತರುತ್ತಾರೆ. ನೆಲಕ್ಕೆ ಬೀಳದಂತೆ ಮರದಿಂದ ಎಚ್ಚರಿಕೆಯಿಂದ ಕೊಯ್ದು ಬಚ್ಚಿಟ್ಟು ಹಣ್ಣಾದ ಬಳಿಕ ಮಾರಾಟಕ್ಕೆ ತರಲಾಗುತ್ತದೆ. ಬೇಡಿಕೆ ಹೆಚ್ಚಿರುವ ಕಾರಣ ಹಲಸಿನ ಕಾಯಿಯನ್ನೂ ತಂದು ಮಾರಾಟ ಮಾಡುವುದೂ ಇದೆ. ಸಾಮಾನ್ಯವಾಗಿ ವರ್ಷದ ಎರಡು ತಿಂಗಳ ಕಾಲ ಹಲಸು ಹಣ್ಣಿನ ವ್ಯಾಪಾರ ಸಮಯ. ಒಂದೂವರೆ ತಿಂಗಳಿನಿಂದ ಈ ರೀತಿಯ ರಸ್ತೆ ಬದಿಯಲ್ಲಿ ಹಲಸಿನ ಹಣ್ಣಿನ ವ್ಯಾಪಾರ ಅಲ್ಲಲ್ಲಿ ಕಂಡು ಬರುತ್ತದೆ. ವರ್ಷ ಪೂರ್ತಿ ಹಣ್ಣಿನ ವ್ಯಾಪಾರ ನಡೆಸುವ ರಸ್ತೆ ಬದಿಯ ಅಂಗಡಿಗಳಲ್ಲಿಯೂ ಈಗ ಹಲಸಿನ ಹಣ್ಣಿಗೇ ಹೆಚ್ಚು ಡಿಮಾಂಡ್. ಹಲಸು ಹಣ್ಣಿನ ಜೊತೆಗೆ ಅನನಾಸು, ಕಲ್ಲಂಗಡಿ, ಜೋಳ ಸೇರಿದಂತೆ ರಸ್ತೆ ಬದಿಯ ಅಂಗಡಿಯಲ್ಲಿರುವ ಹಲವು ಹಣ್ಣುಗಳು ಪ್ರಯಾಣಿಕರ ದಾಹ ಮತ್ತು ಹಸಿವನ್ನು ತಣಿಸುತ್ತದೆ. ಅನನಾಸು, ಹಲಸು ಮತ್ತಿರರ ಹಣ್ಣುಗಳು ಅಂದವಾಗಿ ಜೋಡಿಸಿಟ್ಟಿರುವುದು ನೋಡುವುದೇ ಬಲು ಚೆಂದ. ಪ್ರಯಾಣಿಕರನ್ನು ಸೆಳೆಯಲು ಹಣ್ಣಾದ ಹಲಸಿನ ಹಣ್ಣನ್ನು ಕಡಿದು ಪ್ರದರ್ಶನಕ್ಕಿಡುವುದು, ಅನನಾಸುಗಳನ್ನು ಸ್ಟಾಂಡ್‍ಗಳಲ್ಲಿ ಜೋಡಿಸಿಡುವುದು ರಸ್ತೆ ಬದಿಯ ಕಲರ್ ಫುಲ್ ದೃಶ್ಯ.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

34 minutes ago

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ

ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…

8 hours ago

ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…

8 hours ago

ಕರಾವಳಿಗೆ ವಾಡಿಕೆ ಮಳೆ, ಮಲೆನಾಡು ದಾಟದ ಮುಂಗಾರು ಮೋಡ..!

ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್‌ನಲ್ಲಿ…

9 hours ago

ಬೆಲೆ ಏರಿಕೆಯನ್ನಷ್ಟೇ ನೋಡುವುದಲ್ಲ ; ಮುಂದಿನ ಮಾರುಕಟ್ಟೆಯನ್ನು ನಿರ್ಮಿಸುವ ಕಾಲ

ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…

11 hours ago

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು

ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…

23 hours ago