Advertisement
ಜಿಲ್ಲೆ

ರಾಮಕೃಷ್ಣ ಮಿಷನ್ ವತಿಯಿಂದ ಸ್ವಚ್ಛ ಪುತ್ತೂರು

Share

ಪುತ್ತೂರು: ಕಳೆದ ಎರಡು ಮೂರು ವರುಷಗಳಿಂದ ಮಂಗಳೂರು ರಾಮಕೃಷ್ಣ ಮಿಷನ್ ವತಿಯಿಂದ ಪುತ್ತೂರಿನಲ್ಲಿ ನಿರಂತರವಾಗಿ ನಡೆಯುತ್ತಿರುವ ಸ್ವಚ್ಛತಾ ಅಭಿಯಾನವು ಈ ಬಾರಿ ಜೈನಭವನದ ಆಸುಪಾಸಿನಲ್ಲಿ ಮತ್ತು ಬೈಪಾಸ್ ರಸ್ತೆಯ ಕೆಲವು ಪ್ರದೇಶಗಳಲ್ಲಿ ನಡೆಯಿತು.

ಕಾರ್ಯಕ್ರಮವನ್ನು ರೋಟರಿ ಕ್ಲಬ್ ನ ಎ.ಜೆ ರೈ ಮತ್ತು ನಗರಸಭಾ ಸದಸ್ಯೆ ಗೌರಿ ಬನ್ನೂರು ಅವರು ಜಂಟಿಯಾಗಿ ಧ್ವಜಾರೋಹಣ ಮಾಡುವುದರ ಮೂಲಕ ಉದ್ಘಾಟಿಸಿದರು. ಸುಮಾರು 50 ಜನ ಭಾಗವಹಿಸಿದ ಈ ಕಾರ್ಯಕ್ರಮವು ಮಳೆಗಾಲದಲ್ಲಿ ಕೂಡ ನಡೆಯುತ್ತಿರುವುದು ಶ್ಲಾಘನೀಯ ಎಂದು ಎ.ಜೆ ರೈ ಕಾರ್ಯಕರ್ತರನ್ನು ಹುರಿದುಂಬಿಸಿದರು.

ಗೌರಿ ಬನ್ನೂರು ಅವರು ಮಾತನಾಡಿ “ಪ್ರಧಾನಿಯವರ ಈ ಯೋಜನೆಯು ಅಭೂತಪೂರ್ವವಾಗಿ ಯಶಸ್ವಿಯಾಗಿ ನಡೆಯುತ್ತಿದ್ದು ಸಾಕಷ್ಟು ಜನ ಜಾಗೃತರಾಗಿದ್ದಾರೆ” ಎಂದರು.ನಂತರ ಮಳೆಗಾಲದಲ್ಲಿ ಅವಶ್ಯವಾಗಿ ಬೇಕಾಗಿರುವ ರಸ್ತೆ ಬದಿಯ ಕಾಲುವೆಯನ್ನು ಸರಿಪಡಿಸಲಾಯಿತು.ವಾಹನ ಸವಾರರಿಗೆ ಅಡ್ಡಿಯಾಗುತ್ತಿದ್ದ ಪೊದೆಗಳನ್ನು ಕಡಿಯಲಾಯಿತು.

ಸ್ವಚ್ಛತಾ ಕಾರ್ಯದ ಕೊನೆಯಲ್ಲಿ ಚಹಾ ತಿಂಡಿಯ ವ್ಯವಸ್ಥೆಯನ್ನು ಮಾಡಲಾಗಿತ್ತು.ಧನ್ಯಕುಮಾರ್ ಬೆಳಂದೂರು ಅವರು ಟಿಪ್ಪರ್ ವ್ಯವಸ್ಥೆಯನ್ನು ಮಾಡಿದ್ದರು.’ಟೀಮ್ ನರೇಂದ್ರ’ದ ಸಂಚಾಲಕ ಸಂತೋಷ್ ಕುಮಾರ್ ವಾಗ್ಲೆ,ವಕೀಲರ ಸಂಘದ ಉಪಾಧ್ಯಕ್ಷ ಸುರೇಶ್ ರೈ ಪಡ್ಡಂಬೈಲು,ಕುಂಬಾರರ ಗುಡಿ ಕೈಗಾರಿಕಾ ಸಹಕಾರಿ ಸಂಘದ ಅಧ್ಯಕ್ಷ ಜನಾರ್ದನ ಮೂಲ್ಯ,ರಾಜ್ಯಪ್ರಶಸ್ತಿ ವಿಜೇತರಾದ ಸುರೇಶ್ ಶ್ರೀಶಾಂತಿ,ನಗರಸಭಾ ಸದಸ್ಯರಾದ ಪಿ.ಜಿ ಜಗನ್ನಿವಾಸ್ ರಾವ್ ಮತ್ತು ಶಿವರಾಮ ಸಫಲ್ಯ ಮೊದಲಾದವರು ಕಸ ವಿಲೇವಾರಿಯಲ್ಲಿ ತೊಡಗಿಸಿಕೊಂಡಿದ್ದರು.

ರಾಮಕೃಷ್ಣ ಮಿಷನ್ ನ ಕಾರ್ಯಕರ್ತ ಶ್ರೀಕೃಷ್ಣ ಉಪಾಧ್ಯಾಯ ಮತ್ತು ದಿನೇಶ್ ಕುಮಾರ್ ಜೈನ್ ಕಾರ್ಯಕ್ರಮವನ್ನು ಸಂಘಟಿಸಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ |13-07-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ – ಮುಂದಿನ 10 ದಿನ ಜೋರು ಮಳೆ ಇಲ್ಲ

ರಾಜ್ಯದಲ್ಲಿ ಮುಂದಿನ 10 ದಿನಗಳವರೆಗೆ ಜೋರು ಮಳೆಯ ಸಾಧ್ಯತೆಗಳು ಕಾಣುತ್ತಿಲ್ಲ. ಕರಾವಳಿಯಲ್ಲಿ ಜುಲೈ…

1 hour ago

ಅಮರನಾಥದ ಹಿಮ ಶಿವಲಿಂಗ 90% ಕರಗಿತು…! ಹವಾಮಾನ ಬದಲಾವಣೆಯೇ ಕಾರಣವೇ?

ಅಮರನಾಥ ಯಾತ್ರೆ ಆರಂಭವಾದ ಕೆಲವೇ ದಿನಗಳಲ್ಲಿ ಹಿಮ ಶಿವಲಿಂಗವು 90%ಕ್ಕೂ ಹೆಚ್ಚು ಕರಗಿರುವುದಾಗಿ…

9 hours ago

16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ನಿರ್ಬಂಧ – ಆಸ್ಟ್ರೇಲಿಯಾದ ಕ್ರಮಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿರ್ಬಂಧ ವಿಧಿಸಿರುವ ಆಸ್ಟ್ರೇಲಿಯಾದ ಕ್ರಮವನ್ನು ಪ್ರಧಾನಿ…

19 hours ago

ಎಲ್‌ ನಿನೊ ಎಫೆಕ್ಟ್‌ – ಮುಂದಿನ ವರ್ಷ ಮತ್ಸ್ಯೋದ್ಯಮಕ್ಕೆ ಸಂಕಷ್ಟ?

ಎಲ್‌ ನಿನೊ ಪರಿಣಾಮದಿಂದ 2027ರಲ್ಲಿ ಎಣ್ಣೆ ಸಾರ್ಡಿನ್ ಮೀನುಗಳ ಉತ್ಪಾದನೆ ಕುಸಿಯುವ ಸಾಧ್ಯತೆ…

19 hours ago

ಮುಂಗಾರು ಇದ್ದಕ್ಕಿದ್ದಂತೆ ದುರ್ಬಲವಾಗಿದ್ದೇಕೆ..? ಇಲ್ಲಿದೆ ವೈಜ್ಞಾನಿಕ ಕಾರಣ

ದೇಶದ ಬಹುತೇಕ ಭಾಗಗಳಿಂದ ಮಳೆ ಮೋಡಗಳು ಕಡಿಮೆಯಾಗಲು ಪಶ್ಚಿಮ ಪೆಸಿಫಿಕ್‌ನ ಪ್ರಬಲ ಚಂಡಮಾರುತ…

24 hours ago

ಮತ್ತೆ ಹೆಚ್ಚಿದ ದೇಶದ ಮಳೆ ಕೊರತೆ – ಜುಲೈ ಆರಂಭದ ಚೇತರಿಕೆ ಕುಂಠಿತ, ಮುಂಗಾರು ಮತ್ತೆ ದುರ್ಬಲ

ಜುಲೈ ಮೊದಲ ವಾರದ ಚೇತರಿಕೆಯ ಬಳಿಕ ದೇಶದ ಮುಂಗಾರು ಮತ್ತೆ ದುರ್ಬಲಗೊಂಡಿದ್ದು, ಮಳೆ…

1 day ago