ಪುತ್ತೂರು: ಕಳೆದ ಎರಡು ಮೂರು ವರುಷಗಳಿಂದ ಮಂಗಳೂರು ರಾಮಕೃಷ್ಣ ಮಿಷನ್ ವತಿಯಿಂದ ಪುತ್ತೂರಿನಲ್ಲಿ ನಿರಂತರವಾಗಿ ನಡೆಯುತ್ತಿರುವ ಸ್ವಚ್ಛತಾ ಅಭಿಯಾನವು ಈ ಬಾರಿ ಜೈನಭವನದ ಆಸುಪಾಸಿನಲ್ಲಿ ಮತ್ತು ಬೈಪಾಸ್ ರಸ್ತೆಯ ಕೆಲವು ಪ್ರದೇಶಗಳಲ್ಲಿ ನಡೆಯಿತು.
ಕಾರ್ಯಕ್ರಮವನ್ನು ರೋಟರಿ ಕ್ಲಬ್ ನ ಎ.ಜೆ ರೈ ಮತ್ತು ನಗರಸಭಾ ಸದಸ್ಯೆ ಗೌರಿ ಬನ್ನೂರು ಅವರು ಜಂಟಿಯಾಗಿ ಧ್ವಜಾರೋಹಣ ಮಾಡುವುದರ ಮೂಲಕ ಉದ್ಘಾಟಿಸಿದರು. ಸುಮಾರು 50 ಜನ ಭಾಗವಹಿಸಿದ ಈ ಕಾರ್ಯಕ್ರಮವು ಮಳೆಗಾಲದಲ್ಲಿ ಕೂಡ ನಡೆಯುತ್ತಿರುವುದು ಶ್ಲಾಘನೀಯ ಎಂದು ಎ.ಜೆ ರೈ ಕಾರ್ಯಕರ್ತರನ್ನು ಹುರಿದುಂಬಿಸಿದರು.
ಗೌರಿ ಬನ್ನೂರು ಅವರು ಮಾತನಾಡಿ “ಪ್ರಧಾನಿಯವರ ಈ ಯೋಜನೆಯು ಅಭೂತಪೂರ್ವವಾಗಿ ಯಶಸ್ವಿಯಾಗಿ ನಡೆಯುತ್ತಿದ್ದು ಸಾಕಷ್ಟು ಜನ ಜಾಗೃತರಾಗಿದ್ದಾರೆ” ಎಂದರು.ನಂತರ ಮಳೆಗಾಲದಲ್ಲಿ ಅವಶ್ಯವಾಗಿ ಬೇಕಾಗಿರುವ ರಸ್ತೆ ಬದಿಯ ಕಾಲುವೆಯನ್ನು ಸರಿಪಡಿಸಲಾಯಿತು.ವಾಹನ ಸವಾರರಿಗೆ ಅಡ್ಡಿಯಾಗುತ್ತಿದ್ದ ಪೊದೆಗಳನ್ನು ಕಡಿಯಲಾಯಿತು.
ಸ್ವಚ್ಛತಾ ಕಾರ್ಯದ ಕೊನೆಯಲ್ಲಿ ಚಹಾ ತಿಂಡಿಯ ವ್ಯವಸ್ಥೆಯನ್ನು ಮಾಡಲಾಗಿತ್ತು.ಧನ್ಯಕುಮಾರ್ ಬೆಳಂದೂರು ಅವರು ಟಿಪ್ಪರ್ ವ್ಯವಸ್ಥೆಯನ್ನು ಮಾಡಿದ್ದರು.’ಟೀಮ್ ನರೇಂದ್ರ’ದ ಸಂಚಾಲಕ ಸಂತೋಷ್ ಕುಮಾರ್ ವಾಗ್ಲೆ,ವಕೀಲರ ಸಂಘದ ಉಪಾಧ್ಯಕ್ಷ ಸುರೇಶ್ ರೈ ಪಡ್ಡಂಬೈಲು,ಕುಂಬಾರರ ಗುಡಿ ಕೈಗಾರಿಕಾ ಸಹಕಾರಿ ಸಂಘದ ಅಧ್ಯಕ್ಷ ಜನಾರ್ದನ ಮೂಲ್ಯ,ರಾಜ್ಯಪ್ರಶಸ್ತಿ ವಿಜೇತರಾದ ಸುರೇಶ್ ಶ್ರೀಶಾಂತಿ,ನಗರಸಭಾ ಸದಸ್ಯರಾದ ಪಿ.ಜಿ ಜಗನ್ನಿವಾಸ್ ರಾವ್ ಮತ್ತು ಶಿವರಾಮ ಸಫಲ್ಯ ಮೊದಲಾದವರು ಕಸ ವಿಲೇವಾರಿಯಲ್ಲಿ ತೊಡಗಿಸಿಕೊಂಡಿದ್ದರು.
ರಾಮಕೃಷ್ಣ ಮಿಷನ್ ನ ಕಾರ್ಯಕರ್ತ ಶ್ರೀಕೃಷ್ಣ ಉಪಾಧ್ಯಾಯ ಮತ್ತು ದಿನೇಶ್ ಕುಮಾರ್ ಜೈನ್ ಕಾರ್ಯಕ್ರಮವನ್ನು ಸಂಘಟಿಸಿದ್ದರು.
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…