Advertisement
ಜಿಲ್ಲೆ

ರಾಮಕೃಷ್ಣ ಮಿಷನ್ ವತಿಯಿಂದ ಸ್ವಚ್ಛ ಪುತ್ತೂರು

Share

ಪುತ್ತೂರು: ಕಳೆದ ಎರಡು ಮೂರು ವರುಷಗಳಿಂದ ಮಂಗಳೂರು ರಾಮಕೃಷ್ಣ ಮಿಷನ್ ವತಿಯಿಂದ ಪುತ್ತೂರಿನಲ್ಲಿ ನಿರಂತರವಾಗಿ ನಡೆಯುತ್ತಿರುವ ಸ್ವಚ್ಛತಾ ಅಭಿಯಾನವು ಈ ಬಾರಿ ಜೈನಭವನದ ಆಸುಪಾಸಿನಲ್ಲಿ ಮತ್ತು ಬೈಪಾಸ್ ರಸ್ತೆಯ ಕೆಲವು ಪ್ರದೇಶಗಳಲ್ಲಿ ನಡೆಯಿತು.

ಕಾರ್ಯಕ್ರಮವನ್ನು ರೋಟರಿ ಕ್ಲಬ್ ನ ಎ.ಜೆ ರೈ ಮತ್ತು ನಗರಸಭಾ ಸದಸ್ಯೆ ಗೌರಿ ಬನ್ನೂರು ಅವರು ಜಂಟಿಯಾಗಿ ಧ್ವಜಾರೋಹಣ ಮಾಡುವುದರ ಮೂಲಕ ಉದ್ಘಾಟಿಸಿದರು. ಸುಮಾರು 50 ಜನ ಭಾಗವಹಿಸಿದ ಈ ಕಾರ್ಯಕ್ರಮವು ಮಳೆಗಾಲದಲ್ಲಿ ಕೂಡ ನಡೆಯುತ್ತಿರುವುದು ಶ್ಲಾಘನೀಯ ಎಂದು ಎ.ಜೆ ರೈ ಕಾರ್ಯಕರ್ತರನ್ನು ಹುರಿದುಂಬಿಸಿದರು.

ಗೌರಿ ಬನ್ನೂರು ಅವರು ಮಾತನಾಡಿ “ಪ್ರಧಾನಿಯವರ ಈ ಯೋಜನೆಯು ಅಭೂತಪೂರ್ವವಾಗಿ ಯಶಸ್ವಿಯಾಗಿ ನಡೆಯುತ್ತಿದ್ದು ಸಾಕಷ್ಟು ಜನ ಜಾಗೃತರಾಗಿದ್ದಾರೆ” ಎಂದರು.ನಂತರ ಮಳೆಗಾಲದಲ್ಲಿ ಅವಶ್ಯವಾಗಿ ಬೇಕಾಗಿರುವ ರಸ್ತೆ ಬದಿಯ ಕಾಲುವೆಯನ್ನು ಸರಿಪಡಿಸಲಾಯಿತು.ವಾಹನ ಸವಾರರಿಗೆ ಅಡ್ಡಿಯಾಗುತ್ತಿದ್ದ ಪೊದೆಗಳನ್ನು ಕಡಿಯಲಾಯಿತು.

ಸ್ವಚ್ಛತಾ ಕಾರ್ಯದ ಕೊನೆಯಲ್ಲಿ ಚಹಾ ತಿಂಡಿಯ ವ್ಯವಸ್ಥೆಯನ್ನು ಮಾಡಲಾಗಿತ್ತು.ಧನ್ಯಕುಮಾರ್ ಬೆಳಂದೂರು ಅವರು ಟಿಪ್ಪರ್ ವ್ಯವಸ್ಥೆಯನ್ನು ಮಾಡಿದ್ದರು.’ಟೀಮ್ ನರೇಂದ್ರ’ದ ಸಂಚಾಲಕ ಸಂತೋಷ್ ಕುಮಾರ್ ವಾಗ್ಲೆ,ವಕೀಲರ ಸಂಘದ ಉಪಾಧ್ಯಕ್ಷ ಸುರೇಶ್ ರೈ ಪಡ್ಡಂಬೈಲು,ಕುಂಬಾರರ ಗುಡಿ ಕೈಗಾರಿಕಾ ಸಹಕಾರಿ ಸಂಘದ ಅಧ್ಯಕ್ಷ ಜನಾರ್ದನ ಮೂಲ್ಯ,ರಾಜ್ಯಪ್ರಶಸ್ತಿ ವಿಜೇತರಾದ ಸುರೇಶ್ ಶ್ರೀಶಾಂತಿ,ನಗರಸಭಾ ಸದಸ್ಯರಾದ ಪಿ.ಜಿ ಜಗನ್ನಿವಾಸ್ ರಾವ್ ಮತ್ತು ಶಿವರಾಮ ಸಫಲ್ಯ ಮೊದಲಾದವರು ಕಸ ವಿಲೇವಾರಿಯಲ್ಲಿ ತೊಡಗಿಸಿಕೊಂಡಿದ್ದರು.

ರಾಮಕೃಷ್ಣ ಮಿಷನ್ ನ ಕಾರ್ಯಕರ್ತ ಶ್ರೀಕೃಷ್ಣ ಉಪಾಧ್ಯಾಯ ಮತ್ತು ದಿನೇಶ್ ಕುಮಾರ್ ಜೈನ್ ಕಾರ್ಯಕ್ರಮವನ್ನು ಸಂಘಟಿಸಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…

7 hours ago

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

12 hours ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

1 day ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

2 days ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

2 days ago

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

2 days ago