Advertisement
ಸುದ್ದಿಗಳು

ರಾಮಚಂದ್ರಾಪುರ ಮಠದಿಂದ ಬಾಲಕ, ಬಾಲಕಿಯರಿಗೆ ಗುರುಕುಲ | ಆಸಕ್ತ ವಿದ್ಯಾರ್ಥಿ ವಿದ್ಯಾರ್ಥಿನಿಯರಿಂದ ಅರ್ಜಿ ಆಹ್ವಾನ

Share

ಬೆಂಗಳೂರು: ಸನಾತನ ಸಂಸ್ಕೃತಿಯ ಉಳಿವಿಗಾಗಿ ಮತ್ತು ಮುಂದಿನ ಪೀಳೀಗೆಯ ಅಭ್ಯುದಯಕ್ಕಾಗಿ ಶ್ರೀರಾಮಚಂದ್ರಾಪುರ ಮಠ ವತಿಯಿಂದ ಗೋಕರ್ಣ ಬಳಿ ಆರಂಭಿಸುತ್ತಿರುವ ಸಾರ್ವಭೌಮ ಗುರುಕುಲ (ಬಾಲಕರಿಗೆ) ಮತ್ತು ರಾಜರಾಜೇಶ್ವರಿ ಗುರುಕುಲ (ಬಾಲಕಿಯರಿಗೆ)ಗಳಿಗೆ ಪ್ರವೇಶ ಪಡೆಯಲು ಸರ್ವ ಸಮಾಜದ ಆಸಕ್ತ ವಿದ್ಯಾರ್ಥಿ ವಿದ್ಯಾರ್ಥಿನಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಋಷಿಯುಗ ಮತ್ತು ನವಯುಗ ಶಿಕ್ಷಣಗಳ ಸಮ್ಮಿಲನ ಇದಾಗಿದ್ದು, ನಾಲ್ಕನೇ ತರಗತಿಯಿಂದ ಪಿಯುಸಿ ವರೆಗಿನ ಔಪಚಾರಿಕ ಶಿಕ್ಷಣದ ಜತೆಗೆ ವೇದಮೂಲವಾದ ಸಮಗ್ರ ಭಾರತೀಯ ವಿದ್ಯೆ ಕಲೆಗಳ ಪರಿಚಯ, ಸಂಸ್ಕೃತ, ಭಗವದ್ಗೀತೆ, ಯೋಗ, ವ್ಯಾಯಾಮಕೀ, ಆಯುರ್ವೇದ, ಸದಾಚಾರ, ಮಹಾಪುರುಷರ ಚರಿತ್ರೆ, ಗಾಯನ, ವಾದನ, ನೃತ್ಯ, ಯಕ್ಷಗಾನ, ಚಿತ್ರಕಲೆ, ಗೃಹವಿಜ್ಞಾನ ಹಾಗೂ ಆತ್ಮರಕ್ಷಣೆಯಂಥ ವಿಷಯಗಳನ್ನು ಬೋಧಿಸಿ ಸಮಗ್ರ ವ್ಯಕ್ತಿತ್ವ ವಿಕಸನಕ್ಕೆ ಆದ್ಯತೆ ನೀಡಲಾಗುವುದು ಎಂದು ಶ್ರೀಮಠದ ಪ್ರಕಟಣೆ ಹೇಳಿದೆ.

ವಿಷ್ಣುಗುಪ್ತ ವಿಶ್ವವಿದ್ಯಾಪೀಠದಲ್ಲಿ ಲಭಿಸಲಿರುವ ಉಚ್ಚ ಶಿಕ್ಷಣದ ಪೀಠಿಕೆಯಾಗಿ ತತ್ಪೂರ್ವ ಶಿಕ್ಷಣ ನೀಡುವುದು ಹಾಗೂ ಸನಾತನ ಭಾರತೀಯ ಸಂಸ್ಕಾರದೊಂದಿಗೆ ಸಮಕಾಲೀನ ಶಿಕ್ಷಣ ಒದಗಿಸುವುದು ಈ ಗುರುಕುಲದ ವೈಶಿಷ್ಟ್ಯ.

ಸ್ಮಾರ್ಟ್ ಕ್ಲಾಸ್ ಸೌಲಭ್ಯ, ಶ್ರೇಷ್ಠ ಶಿಕ್ಷಣ ತಜ್ಞರಿಂದ ಆನ್‍ಲೈನ್ ಪಾಠ, ನುರಿತ ಮೆಂಟರ್‍ಗಳು, ವಿಷಯತಜ್ಞರ ಜತೆ ಮಕ್ಕಳ ಸಂವಾದ ಸಂವಾದ, ಭಾರತ ಸರ್ಕಾರದ ಎನ್‍ಐಓಎಸ್ ಪಠ್ಯಕ್ರಮದಂತೆ ಪಾಠ, ಪರೀಕ್ಷೆ, ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಬೇಕಾದ ಅರಿವು- ಸಾಮಥ್ರ್ಯ ವೃದ್ಧಿ, ಒಳಾಂಗಣ ಮತ್ತು ಹೊರಾಂಗಣ ಕ್ರೀಡಾ ಸೌಲಭ್ಯ, ವಿಜ್ಞಾನ ಮತ್ತು ಕಂಪ್ಯೂಟರ್ ಪ್ರಯೋಗಾಲಯ, ಭವ್ಯ ಪರಂಪರೆಯ ಬಗ್ಗೆ ಸಮಗ್ರ ಅರಿವು, ಭಾರತೀಯ ವಿದ್ಯೆ, ಕಲೆಗಳ ಸಮಗ್ರ ಪರಿಚಯ, ಸಂಸ್ಕಾರ ಮತ್ತು ಸಂಸ್ಕೃತಿ ಅಳವಡಿಕೆ, ಪ್ರಕೃತಿಗೆ ತೆರೆದುಕೊಂಡ ಮುಕ್ತ ಕುಟೀರಗಳಲ್ಲಿ ಕಲಿಕೆಗೆ ಅವಕಾಶವಿದೆ.
ರಾಮಾಯಣ, ಮಹಾಭಾರತ, ಪುರಾಣ, ಇತಿಹಾಸದ ಮಹಾಪುರುಷರ ಚರಿತ್ರೆ ಮೂಲಕ ಭವ್ಯ ವ್ಯಕ್ತಿತ್ವ ನಿರ್ಮಿಸುವ ಜೀವನಪಾಠವನ್ನು ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳೇ ಸ್ವತಃ ನೆರವೇರಿಸುವರು.

ಸ್ವಾದಿಷ್ಟ, ಆರೋಗ್ಯಕರ, ದೇಹ- ಮನಸ್ಸುಗಳ ವಿಕಾಸಕ್ಕೆ ಪೂರಕವಾದ ಆಹಾರ, ಸರಳ- ಸುವ್ಯವಸ್ಥಿತ ವಸತಿ ಇರುತ್ತದೆ ಹಾಗೂ ಗೋಸಂಸ್ಕøತಿಯ ಪರಿಜ್ಞಾನಕ್ಕಾಗಿ, ಬೆಳೆಯುವ ಮಕ್ಕಳಿಗೆ ಅಮೃತ ಸಮಾನ ದೇಸಿ ಗೋವಿನ ಹಾಲು ಮತ್ತು ಉತ್ಪನ್ನಗಳನ್ನು ಒದಗಿಸಲು ಪುಟ್ಟ ಗೋಸ್ವರ್ಗವೂ ಗುರುಕುಲದ ಅಂಗವಾಗಿರುತ್ತದೆ ಎಂದು ಪ್ರಕಟಣೆ ವಿವರಿಸಿದೆ.

ಕೈಗೆಟುಕುವ ಶಿಕ್ಷಣ ಹಾಗೂ ಭೋಜನ ಶುಲ್ಕ ನಿಗದಿಪಡಿಸಲಾಗಿದ್ದು, ಶುಲ್ಕ ಪಾವತಿಸಲಾಗದವರಿಗೆ ವಿದ್ಯಾರ್ಥಿ ವೇತನದ ವ್ಯವಸ್ಥೆ ಇದೆ. ಈಗಾಗಲೇ ಪ್ರವೇಶ ಪ್ರಕ್ರಿಯೆ ಆರಂಭವಾಗಿದ್ದು, ವಿವರಗಳಿಗೆ ಸಾರ್ವಭೌಮ/ ರಾಜರಾಜೇಶ್ವರಿ ಗುರುಕುಲಮ್, ಆಂಜನೇಯ ಜನ್ಮಭೂಮಿ, ಕುಟ್ಲೆ, ಅಂಚೆ: ಗೋಕರ್ಣ, ಕುಮಟಾ ತಾಲೂಕು, ಉ.ಕ- 581326 ಸಂಪರ್ಕಿಸಬಹುದು.

ಇ-ಮೇಲ್:gurukulam@srisamsthana.org

ದೂರವಾಣಿ: +91 9449595247.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

3 hours ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

3 hours ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

3 hours ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

4 hours ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

14 hours ago

ಕಾಡು ಪ್ರಾಣಿಗಳ ಹಾವಳಿ: ಕೃಷಿಕರು ಪಾಠ ಕಲಿಯದಿದ್ದರೆ ಕೃಷಿ ಭೂಮಿಯೇ ಉಳಿಯದು

ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…

15 hours ago